13ಲಕ್ಷ ಟನ್‌ ಕಬ್ಬು 3 ಕಾರ್ಖಾನೆಗಳಿಗೆ ಹಂಚಿಕೆ


Team Udayavani, Oct 5, 2019, 5:23 PM IST

MANDYA-TDY-2

ಮಂಡ್ಯ: ಜಿಲ್ಲೆಯಲ್ಲಿ ಕಟಾವಿಗೆ ಬಂದಿರುವ 13 ಲಕ್ಷ ಟನ್‌ ಹೆಚ್ಚುವರಿ ಕಬ್ಬನ್ನು ಹೇಮಾವತಿ, ಬನ್ನಾರಿ ಅಮ್ಮನ್‌ ಹಾಗೂ ಸತ್ತೇಗಾಲ ಸಕ್ಕರೆ ಕಾರ್ಖಾನೆಗಳಿಗೆ ಸರಬರಾಜು ಮಾಡಲು ವ್ಯವಸ್ಥೆ ಮಾಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಅಶೋಕ್‌ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕಟಾವಿಗೆ ಬಂದಿರುವ ಕಬ್ಬನ್ನು ನುರಿಸುವ ಸಂಬಂಧ ರೈತ ಮುಖಂಡರ ಜೊತೆ ಸಭೆ ನಡೆಸಿ ಮಾತನಾಡಿದರು. ಕಬ್ಬು ಸಾಗಣೆ ವೆಚ್ಚವನ್ನು 3 ಭಾಗಗಳಾಗಿ ವಿಂಗಡಿಸಲು ನಿರ್ಧರಿಸಲಾಗಿದೆ. ರೈತ, ಸರ್ಕಾರ ಹಾಗೂ ಕಾರ್ಖಾನೆಗಳು ಎಷ್ಟೆಷ್ಟು ಹಣ ಭರಿಸಬೇಕು ಎಂಬ ಬಗ್ಗೆ ಮುಖ್ಯಮಂತ್ರಿ, ಸಕ್ಕರೆ ಸಚಿವರು ಹಾಗೂ ಕಾರ್ಖಾನೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

2 ತಿಂಗಳಲ್ಲಿ ಕಬ್ಬು ನುರಿಯಲು ವ್ಯವಸ್ಥೆ: ಮುಂದಿನ ಎರಡು ತಿಂಗಳಲ್ಲಿ ಹೆಚ್ಚುವರಿ ಕಬ್ಬನ್ನು ನುರಿಸುವುದಕ್ಕೆ ವ್ಯವಸ್ಥೆ ಮಾಡಲಾಗುವುದು. ಈ ಬಗ್ಗೆ ರೈತರು ಆತಂಕಪಡುವ ಅಗತ್ಯವಿಲ್ಲ. 16 ತಿಂಗಳ ಕಬ್ಬು ನುರಿಯುವುದಕ್ಕೆ ಮೊದಲ ಪ್ರಾಧಾನ್ಯತೆ ನೀಡುವಂತೆ ಸಕ್ಕರೆ ಕಾರ್ಖಾನೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಕಂಪನಿಯಿಂದಲೇ ಗ್ಯಾಂಗ್‌ಮನ್‌ಗಳನ್ನು ಕಳುಹಿಸಿ, ಕಬ್ಬು ಕಟಾವು ಮಾಡಿಸುವುದಕ್ಕೂ ನಿರ್ದೇಶನ ನೀಡಿರುವುದಾಗಿ ಹೇಳಿದರು.

ನವೆಂಬರ್‌ನಿಂದ ಕಾರ್ಖಾನೆ ಆರಂಭ: ಹೇಮಾವತಿ ಸಕ್ಕರೆ ಕಾರ್ಖಾನೆ ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ನ.1ರಿಂದ ಕಾರ್ಖಾನೆ ಆರಂಭಕ್ಕೆ ಅಧಿಕಾರಿಗಳು ಸಮಯ ನಿಗದಿಪಡಿಸಿಕೊಂಡಿದ್ದಾರೆ. ಅ.15ರಿಂದಲೇ ಕಬ್ಬು ನುರಿಸಲು ಚಾಲನೆ ನೀಡುವಂತೆ ತಿಳಿಸಿದ್ದೇವೆ. ಹೇಮಾವತಿ ಸಕ್ಕರೆ ಕಾರ್ಖಾನೆಗೆ ನಿತ್ಯ 4 ಸಾವಿರ ಟನ್‌, ಬನ್ನಾರಿ ಅಮ್ಮನ್‌ ಸಕ್ಕರೆ ಕಾರ್ಖಾನೆಗೆ 5 ಸಾವಿರ ಟನ್‌ ಹಾಗೂ ಉಳಿಕೆ ಕಬ್ಬನ್ನು ಸತ್ತೇಗಾಲ ಸಕ್ಕರೆ ಕಾರ್ಖಾನೆಗೆ ಸಾಗಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ರೈತ ಮುಖಂಡರಿಗೆ ತಿಳಿಸಿದರು.

ಕಬ್ಬು ನುರಿಯುವುದು ಮುಖ್ಯ: ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಮೊದಲ ಪ್ರಾಧಾನ್ಯತೆ ನೀಡಲಾಗುವುದು. ಅದನ್ನು ಖಾಸಗೀಕರಣ ಮಾಡಬೇಕೋ ಅಥವಾ ಸರ್ಕಾರಿ ಸ್ವಾಮ್ಯದಲ್ಲಿ ಉಳಿಸಿಕೊಳ್ಳುವುದೋ ಎನ್ನುವುದು ಮುಖ್ಯವಲ್ಲ. ರೈತರ ಕಬ್ಬು ನುರಿಯುವುದು ಮುಖ್ಯ. ಅದಕ್ಕಾಗಿ ಪಿಎಸ್‌ಎಸ್‌ಕೆ ಕಾರ್ಖಾನೆ ಆರಂಭಿಸುವ ಕುರಿತಂತೆ ವೈಜ್ಞಾನಿಕವಾಗಿ ಕ್ರಮ ಜರುಗಿಸಲಾಗುವುದು. ಒಂದು ತಿಂಗಳೊಳಗೆ ಕಾರ್ಖಾನೆಯನ್ನು ಕಬ್ಬು ನುರಿಸುವ ಸ್ಥಿತಿಗೆ ತರಲಾಗುವುದಿಲ್ಲ. ಪೂರಕವಾದ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡು ನಂತರದಲ್ಲಿ ಯಾರೂ ಅನುಮಾನ ಪಡದ ರೀತಿಯಲ್ಲಿ ಕಾರ್ಖಾನೆಗೆ ಚಾಲನೆ ದೊರಕಿಸಲಾಗುವುದು ಎಂದು ಹೇಳಿದರು.

ಹೊಸ ಕಾರ್ಖಾನೆ ನಿರ್ಮಿಸಬಹುದಿತ್ತು: ಮೈಸೂರು ಸಕ್ಕರೆ ಕಾರ್ಖಾನೆಗೆ ಬಿಜೆಪಿ ಸರ್ಕಾರವೂ ಸೇರಿದಂತೆ ಉಳಿದ ಸರ್ಕಾರಗಳು ಕೊಟ್ಟ ಹಣದಿಂದ ಹೊಸ ಕಾರ್ಖಾನೆಯನ್ನೇ ನಿರ್ಮಾಣ ಮಾಡಬಹುದಿತ್ತು. ವಿದ್ಯುತ್‌ ಉತ್ಪಾದನೆಗೆಂದು ಕೋ-ಜನರೇಷನ್‌ ಪ್ಲಾಂಟ್‌ ಹಾಕಿದರು. ಅದೆಲ್ಲವೂ ತುಕ್ಕು ಹಿಡಿದಿದ್ದು, ತೂಕ ಹಾಕುವ ಮಟ್ಟಕ್ಕೆ ಬಂದಿದೆ. ಅವುಗಳನ್ನು ಮಾರಾಟ ಮಾಡಿದರೂ ಖರ್ಚು ಮಾಡಿದ ಹಣದಲ್ಲಿ ಶೇ.10ರಷ್ಟು ಹಣವೂ ಸಿಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌, ಜಿಪಂ ಸಿಇಒ ಕೆ.ಯಾಲಕ್ಕೀಗೌಡ, ಜಿಲ್ಲಾ ಪೊಲೀಸ್‌ ಅಧೀಕ್ಷಕ ಕೆ.ಪರಶುರಾಮ್‌, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್‌, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಉಪನಿರ್ದೇಶಕಿ ಕುಮುದಾ, ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮುಖಂಡರಾದ ಸುನೀತಾ ಪುಟ್ಟಣ್ಣಯ್ಯ, ಸುನಂದಾ ಜಯರಾಂ, ಶಂಭೂನಹಳ್ಳಿ ಸುರೇಶ್‌, ಬೋರಾಪುರ ಶಂಕರೇಗೌಡ, ಸುಧೀರ್‌ಕುಮಾರ್‌, ಜಿಪಂ ಸದಸ್ಯ ಎನ್‌.ಶಿವಣ್ಣ, ಮಾಜಿ ಸದಸ್ಯ ಎ.ಎಲ್‌.ಕೆಂಪೂಗೌಡ, ಸಿದ್ದರಾಮೇಗೌಡ, ಮೈಷುಗರ್‌ ಕಬ್ಬು ಒಪ್ಪಿಗೆದಾರರ ಸಂಘದ ಅಧ್ಯಕ್ಷ ಎಸ್‌. ಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.