11 ಸಾವಿರ ಶಾಲಾ ಮಕ್ಕಳಿಗೆ ಸ್ವಚ್ಛತಾ ಸಾಮಗ್ರಿಗಳ ವಿತರಣೆ

ಲೋಹಿಯಾ ವೇದಿಕೆಯಿಂದ 270 ಸರ್ಕಾರಿ ಶಾಲೆಗಳಲ್ಲಿ ವಿನೂತನ ಕಾರ್ಯಕ್ರಮ

Team Udayavani, Jun 10, 2019, 11:51 AM IST

mandya-tdy-2..

ಮಂಡ್ಯ: ಶೌಚಮುಕ್ತ, ಹೊಗೆ ಮುಕ್ತ ಗ್ರಾಮ, ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ ನೀಡುವ ಮೂಲಕ ವೈಶಿಷ್ಟ್ಯ ಪೂರ್ಣ ಕಾರ್ಯಕ್ರಮಗಳೊಂದಿಗೆ ಗ್ರಾಮೀಣರ ಗಮನ ಸೆಳೆದಿರುವ ಮಳವಳ್ಳಿಯ ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಇದೀಗ ಸರ್ಕಾರಿ ಶಾಲಾ ಮಕ್ಕಳಿಗೆ ನೈಲ್ ಕಟರ್‌ ಸೇರಿದಂತೆ ಚಿತ ಸ್ವಚ್ಛತಾ ಸಾಮಗ್ರಿ ವಿತರಿಸುವ ಮೂಲಕ ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಅಧ್ಯಕ್ಷರು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಡಾ.ಬಿ.ಎಸ್‌.ಶಿವಣ್ಣ ಮಳವಳ್ಳಿ ತಾಲೂಕು ಬಂಡೂರು ಪಂಚಾಯಿತಿಗೆ ಸೇರಿದ ಬಂಡೂರು, ಕಲ್ಲಾರೆಪುರ, ಗಟ್ಟಿಕೊಪ್ಪಲು, ಸಸಿಲಾರಪುರ, ದಡದಪುರ, ಗಾಣಿಗನಪುರ, ಅಚ್ಚಮ್ಮನ ಕೊಪ್ಪಲು ವಿನಲ್ಲಿರುವ ಸರ್ಕಾರಿ ಶಾಲಾ ಮಕ್ಕಳಿಗೆ ನೈಲ್ಕಟರ್‌, ಟೂತ್‌ಪೇಸ್ಟ್‌, ಬ್ರಶ್‌, ಕೊಬ್ಬರಿ ಎಣ್ಣೆ, ಬಡ್ಸ್‌ಗಳನ್ನು ಶಾಲಾ ಮಕ್ಕಳಿಗೆ ಕೊಡುಗೆಯಾಗಿ ನೀಡಿದ್ದಾರೆ.

ಶುಚಿತ್ವ ಮಕ್ಕಳಿಂದಲೇ ಆರಂಭಿಸಿ: ಜೂ.11 ಮತ್ತು 12ರಂದು ಹಲಗೂರು ಹಾಗೂ ಬಿ.ಜಿ.ಪುರ ಹೋಬಳಿಯ 270 ಶಾಲೆಗಳಲ್ಲಿರುವ 11 ಸಾವಿರ ಮಕ್ಕಳಿಗೆ ಈ ಸ್ವಚ್ಛತಾ ಸಾಮಗ್ರಿಗಳನ್ನು ನೀಡಲು ನಿರ್ಧರಿಸಲಾಗಿದೆ. ಶುಚಿತ್ವ ಎನ್ನುವುದು ಮಕ್ಕಳಿಂದಲೇ ಆರಂಭವಾಗಬೇಕು. ಅವರಿಂದಲೇ ಅದು ಬೆಳವಣಿಗೆ ಕಂಡಾಗ ಸ್ವಚ್ಛ ಹಾಗೂ ಆರೋಗ್ಯಕರ ನಿರ್ಮಾಣ ಸಾಧ್ಯ ಎಂಬ ಉದ್ದೇಶದೊಂದಿಗೆ ಶಾಲಾ ಹಂತದಲ್ಲೇ ಮಕ್ಕಳಿಗೆ ಸ್ವಚ್ಛತೆಯ ಅರಿವು ಮೂಡಿಸಲು ಡಾ.ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ಮಾಡುತ್ತಿ ರುವುದು ಉತ್ತಮವಾದ ಕೆಲಸ ಎಂದು ಪ್ರಶಂಸಿದರು.

ಯಶಸ್ಸಿನತ್ತ ದಾಪುಗಾಲು: ಶಾಲಾ ಮಕ್ಕಳಿಗೆ ಶೈಕ್ಷಣಿಕೆ ಪ್ರವಾಸ, ಶಾಲಾ ಕೊಠಡಿ ನಿರ್ಮಾಣ, ಗೌರವ ಶಿಕ್ಷಕರ ನೇಮಕ ಸೇರಿದಂತೆ ಸಮಾಜಮುಖೀ ಹಾಗೂ ಜನಪರ ಕಾರ್ಯಕ್ರಮಗಳೊಂದಿಗೆ ಲೋಹಿಯಾ ವಿಚಾರ ವೇದಿಕೆ ಯಶಸ್ಸಿನತ್ತ ದಾಪುಗಾಲಿರಿಸಿದೆ. ಗ್ರಾಮೀಣ ಜನರ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ನೆರವಾಗುವ ಗುರಿಯನ್ನಿಟ್ಟುಕೊಂಡು ವಿಭಿನ್ನ ಯೋಜನೆಗಳನ್ನು ರೂಪಿಸುವುದು ವೇದಿಕೆಯ ಮೂಲ ಉದ್ದೇಶವಾಗಿದೆ ಎಂದು ಡಾ.ಬಿ.ಎಸ್‌.ಶಿವಣ್ಣ ತಿಳಿಸಿದರು.

ಬಯಲು ಶೌಚಮುಕ್ತ: ಬಂಡೂರು ಪಂಚಾಯಿತಿಯ ಹಲವು ಗ್ರಾಮಗಳು ಇದೀಗ ಸಂಪೂರ್ಣ ಬಯಲು ಶೌಚಮುಕ್ತ ಗ್ರಾಮಗಳಾಗಿರುವುದಲ್ಲದೆ, ಹೊಗೆ ಮುಕ್ತ ಗ್ರಾಮಗಳನ್ನಾಗಿಯೂ ಪರಿವರ್ತಿಸಲಾಗಿದೆ. ಈ ಗ್ರಾಮಗಳಿಗೆ ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಿತರಣೆ ಮಾಡುವ ಮೂಲಕ ಮಹಿಳೆಯರಿಗೆ ಅನುಕೂಲ ಮಾಡಿಕೊಡ ಲಾಗಿದೆ. ಗ್ರಾಮೀಣ ಶಾಲಾ- ಕಾಲೇಜು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಬಸ್‌ಪಾಸ್‌ಗಳನ್ನು ಉಚಿತವಾಗಿ ದೊರಕಿಸಿ ಕೊಡಲಾಗಿದೆ. ಇದರಿಂದ ಸಾವಿರಾರು ವಿದ್ಯಾರ್ಥಿಗಳು ಪ್ರಯೋಜನ ಪಡೆಯುತ್ತಿ ದ್ದಾರೆ ಎಂದು ಹೇಳಿದರು.

ಮತ್ತಷ್ಟು ಯೋಜನೆ: ಮಕ್ಕಳ ಜ್ಞಾನ ವಿಕಾಸದ ಉದ್ದೇಶಕ್ಕಾಗಿ ಶಾಲಾ ಶೈಕ್ಷಣಿಕ ಪ್ರವಾಸವನ್ನು ಪ್ರತಿ ವರ್ಷ ಆಯೋಜನೆ ಮಾಡಲಾಗುತ್ತಿದೆ. ಶಿಕ್ಷಕರಿಲ್ಲದ ಕಡೆ ಗೌರವ ಶಿಕ್ಷಕರನ್ನು ನೇಮಕ ಮಾಡಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಲಾಗುತ್ತಿದೆ.

ವೇದಿಕೆಯ ಹೊಸ ಹೊಸ ಕಾರ್ಯ ಕ್ರಮಗಳಿಗೆ ಗ್ರಾಮೀಣ ಜನರಿಂದ ಉತ್ತಮ ಸಹಕಾರ, ವಿದ್ಯಾರ್ಥಿಗಳಿಂದ ಸ್ಪಂದನೆ ವ್ಯಕ್ತವಾಗುತ್ತಿದೆ. ವೇದಿಕೆ ವತಿಯಿಂದ ಇನ್ನಷ್ಟು ಸಾಮಾಜಿಕ ಯೋಜನೆಗಳನ್ನು ರೂಪಿಸಿ ಜಾರಿಗೊಳಿ ಸಲು ಸಹಕಾರಿಯಾಗಿದೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.