ಪ್ರತಿದಿನ 100 ಕಾರ್ಡ್ಗೆ ಪಡಿತರ ವಿತರಣೆ
Team Udayavani, Apr 4, 2020, 1:07 PM IST
ಮಂಡ್ಯ: ಕೋವಿಡ್ 19 ಸೋಂಕಿನ ಹಿನ್ನಲೆಯಲ್ಲಿ ದೇಶ ಲಾಕ್ಡೌನ್ ಆಗಿರುವ ಕಾರಣ ಬಡವರು ಹಸಿವಿನಿಂದ ಪರದಾಡಬಾರದೆಂದು ಸರ್ಕಾರ ಪಡಿತರ ವಿತರಣೆಗೆ ಅವಕಾಶ ಕಲ್ಪಿಸಿ, ಪ್ರತಿನಿತ್ಯ 100 ಟೋಕನ್ ವಿತರಿಸಲಾಗುತ್ತಿದೆ ಎಂದು ನ್ಯಾಯಬೆಲೆ ಮಾಲೀಕರ ಸಂಘದ ಅಧ್ಯಕ್ಷ ಎಚ್. ಪಿ. ಸಚ್ಚಿದಾನಂದ ತಿಳಿಸಿದರು.
ತಾಲೂಕಿನ ಹೊಳಲು ಸಹಕಾರ ಸಂಘದಲ್ಲಿ ಉಚಿತ ಪಡಿತರ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಹಾಲಿ ಸಹಕಾರ ಸಂಘದಲ್ಲಿ 1582 ಪಡಿತರ ಚೀಟಿಗಳಿದ್ದು, ಇದರಲ್ಲಿ ಪ್ರತಿನಿತ್ಯ 100 ಟೋಕನ್ ನೀಡಲಾಗುತ್ತಿದೆ. ಟೋಕನ್ ಪಡೆದವರು ಅನ್ನಭಾಗ್ಯದ ಉಚಿತ ಅಕ್ಕಿ ಮತ್ತು ಗೋಧಿ ಪಡೆಯಬಹುದು ಎಂದು ತಿಳಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಶಾಮಿಯಾನ ಹಾಕಿಸಿದ್ದೇವೆ. ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆಯನ್ನೂ ಮಾಡಲಾಗಿದೆ. ಟೋಕನ್ ಮುಗಿಯುವವರೆಗೂ ಪಡಿತರ ವಿತರಿಸುತ್ತೇವೆ. ಪ್ರತಿಯೊಬ್ಬರೂ ಅಂತರ ಕಾಯ್ದು ಕೊಂಡು ಪಡಿತರ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಈ ವೇಳೆ ಸಂಘದ ನಿರ್ದೇಶಕ ನಂದೀಶ್, ಶಿವಕುಮಾರ್, ಜೋಗಯ್ಯ, ಸುರೇಶ್ ಸಿಬ್ಬಂದಿ ವರ್ಗದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ