ಮೌನಕ್ಕೆ ಶರಣಾದ‌ ಜಿಲ್ಲಾ ಜೆಡಿಎಸ್‌ ನಾಯಕರು

ವರಿಷ್ಠರ ವಿರುದ್ಧದ ವಾಗ್ಧಾಳಿಗಳಿಗೆ ದನಿ ಎತ್ತದ ನಾಯಕರು • ನಂಬಿಕಸ್ಥ ಜಿಲ್ಲೆಯಲ್ಲೇ ಆಘಾತಕಾರಿ ಸ್ಥಿತಿ

Team Udayavani, Sep 18, 2019, 12:50 PM IST

Udayavani Kannada Newspaper

ಮಂಡ್ಯ: ಜೆಡಿಎಸ್‌ ನಾಯಕತ್ವದ ಸರ್ಕಾರ ಪತನದ ನಂತರ ಜಿಲ್ಲೆಯ ಜೆಡಿಎಸ್‌ ನಾಯಕರು ರಾಜಕೀಯ ವಾಗಿ ಹತಾಶ ಮನಸ್ಥಿತಿಯನ್ನು ಹೊಂದಿದ್ದು, ಇತ್ತೀಚಿನ ಪ್ರಮುಖ ಘಟ್ಟಗಳಲ್ಲಿ ಜೆಡಿಎಸ್‌ ನಾಯಕರು ಮೌನದ ನಿಲುವನ್ನು ತಳೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಕಳೆದ ಒಂದೂಕಾಲು ವರ್ಷದ ಹಿಂದೆ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಜಿಲ್ಲೆಯ ಜೆಡಿಎಸ್‌ ನಾಯಕರಲ್ಲಿದ್ದ ಉತ್ಸಾಹ, ಭರವಸೆಯ ಮಾತುಗಳು ಹಾಗೂ ವರಿಷ್ಠರ ಬಗ್ಗೆ ತೋರುತ್ತಿದ್ದ ಅತೀವ ಕಾಳಜಿ ಈಗ ದೂರವಾದಂತೆ ಕಂಡುಬರುತ್ತಿದೆ.

ಟೀಕೆಗಳಿಗೂ ಪ್ರತಿಕ್ರಿಯೆ ಇಲ್ಲ: ಕೆ.ಆರ್‌.ಪೇಟೆ ಕ್ಷೇತ್ರದ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡ, ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಸೇರಿದಂತೆ ಅನೇಕರು ಮಾಜಿ ಮೈತ್ರಿಪಕ್ಷವಾದ ಜೆಡಿಎಸ್‌ ವಿರುದ್ಧ ಸಿಡಿಯುತ್ತಿದ್ದರೂ ವಿಶೇಷವಾಗಿ ಜೆಡಿಎಸ್‌ ವರಿಷ್ಠರ ವಿರುದ್ಧ ನಿರಂತರವಾಗಿ ಟೀಕಾ ಪ್ರಹಾರ ನಡೆಸುತ್ತಿದ್ದರೂ ಜಿಲ್ಲೆಯ ಶಾಸಕರು ಮತ್ತು ಮುಖಂಡರು ಅದರ ವಿರುದ್ಧ ಗಟ್ಟಿ ಧ್ವನಿ ಎತ್ತುವ ಅಥವಾ ಜೆಡಿಎಸ್‌ ನಿಲುವುಗಳನ್ನು ಸಮರ್ಥಿಸಿ ಕೊಳ್ಳುವ ಕನಿಷ್ಠ ಪ್ರಯತ್ನಗಳನ್ನೂ ಮಾಡದಿರುವುದು ಗುಮಾನಿಯನ್ನು ಹುಟ್ಟುಹಾಕುತ್ತಿದೆ.

ಜೆಡಿಎಸ್‌ನ ನಿಷ್ಠರಲ್ಲಿ ಆತಂಕ: ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿದ್ದ ಮಂಡ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಏಳಕ್ಕೆ ಏಳೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದ ಜೆಡಿಎಸ್‌ ಈಗಲೂ ಆರು ಮಂದಿ ಶಾಸಕರನ್ನು ಹೊಂದಿದೆ. ಅಲ್ಲದೆ, ಸ್ಥಳೀಯ ಸಂಸ್ಥೆಗಳಲ್ಲೂ ಕೂಡ ತನ್ನ ಅಧಿಪತ್ಯವನ್ನು ಕಾಯ್ದುಕೊಂಡಿದೆ. ಇತ್ತೀಚೆಗೆ ನಡೆದ ಮನ್‌ಮುಲ್ ಚುನಾವಣೆಯಲ್ಲೂ ಜೆಡಿಎಸ್‌ ಎಂಟು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತನ್ನ ಶಕ್ತಿಯನ್ನು ಪುನರ್‌ ಪ್ರದರ್ಶಿಸಿದೆ. ಇಷ್ಟಾದರೂ ಜೆಡಿಎಸ್‌ ವಿರುದ್ಧ ನಡೆಯುತ್ತಿರುವ ವಾಗ್ಧಾಳಿ ಪ್ರತಿರೋಧವೇ ವ್ಯಕ್ತವಾಗದಿರುವುದು ಜೆಡಿಎಸ್‌ನ ನಿಷ್ಠರಲ್ಲಿ ಆತಂಕವನ್ನು ಉಂಟುಮಾಡಿದೆ.

ಸಿಆರ್‌ಎಸ್‌ ಬಹಿರಂಗ ವಾಗ್ಧಾಳಿ: ಡಿ.ಕೆ.ಶಿವಕುಮಾರ್‌ ಬಂಧನದ ಸಂದರ್ಭದಲ್ಲಿ ನಡೆದ ಒಕ್ಕಲಿಗರ ಶಕ್ತಿ ಪ್ರದರ್ಶನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಭಾಗವಹಿಸದಿರುವುದನ್ನೇ ಮುಂದಿಟ್ಟುಕೊಂಡು ಮಾಜಿ ಸಚಿವ ಎನ್‌.ಚಲುವರಾಯಸ್ವಾಮಿ ಜೆಡಿಎಸ್‌ ವಿರುದ್ಧ ಬಹಿರಂಗ ವಾಗ್ಧಾಳಿ ನಡೆಸಿದರೂ ಅದನ್ನು ಜಿಲ್ಲೆಯ ಜೆಡಿಎಸ್‌ ನಾಯಕರು ಸಹಿಸಿಕೊಂಡರೇ ವಿನಃ ತಮ್ಮ ವರಿಷ್ಠರ ಪರ ವಕಾಲತ್ತು ವಹಿಸುವ ಪ್ರಯತ್ನವನ್ನೇ ಮಾಡಲಿಲ್ಲ.

ಈ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಮಂಡ್ಯ ಜೆಡಿಎಸ್‌ ಶಾಸಕರ ಮೌನದ ಹಿಂದಿನ ಉದ್ದೇಶವೇನು? ಅವರು ಯಾವ ಧಿಕ್ಕಿಗೆ ಸಾಗುತ್ತಿದ್ದಾರೆ? ಮತ್ತು ಮಂಡ್ಯ ಜೆಡಿಎಸ್‌ನಲ್ಲಿ ಏನು ನಡೆಯುತ್ತಿದೆ ಎನ್ನುವುದೇ ಪ್ರಶ್ನಾರ್ಥಕವಾಗಿದೆ.

ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಗದ್ದುಗೆಯಲ್ಲಿದ್ದ ಸಮಯದಲ್ಲಿ ಕೊನೆಯ ಉಸಿರಿರುವ ವರೆಗೂ ಜೆಡಿಎಸ್‌ನಲ್ಲಿರುತ್ತೇನೆಂದು ಹೇಳಿಕೊಂಡು ಓಡಾಡುತ್ತಿದ್ದ ನಾಯಕರು ಈಗ ಭವಿಷ್ಯದ ರಾಜಕೀಯದ ದೃಷ್ಟಿಯಿಂದ ಪಕ್ಷಾಂತರ ಮಾಡಲು ನಿರ್ಧರಿಸಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಜೆಡಿಎಸ್‌ನ ಪ್ರಬಲ ನಂಬಿಕೆಯ ಜಿಲ್ಲೆಯಾದ ಮಂಡ್ಯದ ಜೆಡಿಎಸ್‌ನಲ್ಲೇ ಇಂತಹ ಆಘಾತಕಾರಿ ಪರಿಸ್ಥಿತಿಗಳು ಎದುರಾಗುತ್ತಿರುವುದು ಜೆಡಿಎಸ್‌ ವರಿಷ್ಠರನ್ನು ಇನ್ನಷ್ಟು ಆತಂಕಕ್ಕೆ ಗುರಿಪಡಿಸಿದೆ.

ಜೆಡಿಎಸ್‌ ಶಾಸಕರನ್ನು ಒಂದೆಡೆ ಕಾಂಗ್ರೆಸ್‌ ಹಾಗೂ ಮತ್ತೂಂದೆಡೆ ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವ ಪ್ರಯತ್ನದಲ್ಲಿವೆ. ಅವರನ್ನು ಹಿಡಿದಿಟ್ಟುಕೊಳ್ಳುವ ಪ್ರಯತ್ನವನ್ನು ದಳಪತಿಗಳು ನಡೆಸದೆ ಮೌನ ವಹಿಸಿರುವುದರ ಹಿಂದಿನ ಉದ್ದೇಶವೂ ಅರ್ಥವಾಗುತ್ತಿಲ್ಲ.

ಜಿಲ್ಲಾ ಜೆಡಿಎಸ್‌ ಶಾಸಕರು ಭವಿಷ್ಯದ ರಾಜಕೀಯ ದೃಷ್ಠಿಯಿಂದ ಅನ್ಯ ಮಾರ್ಗಗಳನ್ನು ಕಂಡು ಕೊಂಡಿದ್ದಾರೆಯೇ ಅಥವಾ ಸೂಕ್ತ ಕಾಲಕ್ಕೆ ಕಾಯುತ್ತಿದ್ದಾರೆಯೇ ನಿಖರವಾಗಿ ತಿಳಿಯುತ್ತಿಲ್ಲ. ಆದರೆ, ಜೆಡಿಎಸ್‌ ನಾಯಕರ ಮೌನದ ನಡೆ ನಿಗೂಢವಾಗಿದೆ.

ಬಿಜೆಪಿ ಆಪರೇಷನ್‌ ಕಮಲದ 2ನೇ ಭಾಗ:

ಈಗಾಗಲೇ ಬಿಜೆಪಿ ಆಪರೇಷನ್‌ ಕಮಲದ ಎರಡನೇ ಭಾಗವನ್ನು ಆರಂಭಿಸಿದ್ದು, ಇದಕ್ಕೆ ಪೂರಕವಾಗಿ ಅನರ್ಹ ಶಾಸಕ ಕೆ.ಸಿ.ನಾರಾಯಣಗೌಡರು ಜೆಡಿಎಸ್‌ನ 20 ಶಾಸಕರು ರಾಜೀನಾಮೆ ನೀಡುವರು ಎಂಬ ಬಾಂಬ್‌ ಸಿಡಿಸಿದ್ದಾರೆ. ಈ ನಡುವೆ ಮಂಡ್ಯ ಜಿಲ್ಲೆಯ ಇಬ್ಬರು ಶಾಸಕರಾದ ರವೀಂದ್ರ ಶ್ರೀಕಂಠಯ್ಯ ಮತ್ತು ಕೆ.ಸುರೇಶ್‌ಗೌಡರ ಹೆಸರನ್ನು ತೇಲಿಬಿಡಲಾಗಿದೆ. ಮತ್ತೂಂದು ಮೂಲದ ಪ್ರಕಾರ ಜಿಲ್ಲೆಯ ಶಾಸಕರೊಬ್ಬರು ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಬಳಿ ತೆರಳಿ ದೇವೇಗೌಡರ ಕುಟುಂಬದಿಂದ ನನಗೆ ರಾಜಕೀಯ ಕಿರುಕುಳ ಹೆಚ್ಚಾಗಿದೆ. ಆದ್ದರಿಂದ ನನಗೆ ರಾಜಕೀಯ ನಿವೃತ್ತಿಯ ಆಸಕ್ತಿ ಉಂಟಾಗಿದ್ದು, ನನ್ನನ್ನು ಬಿಜೆಪಿ ಸೇರಿಸಿಬಿಡಿ. ನಾನು ಚುನಾವಣೆ ಹಾಗೂ ರಾಜಕೀಯದಿಂದ ದೂರ ಉಳಿದು ಬಿಜೆಪಿಯಲ್ಲಿ ಸುರಕ್ಷಿತವಾಗಿರುತ್ತೇನೆಂದು ಹೇಳಿಕೊಂಡಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ.
● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.