ಈ ಸರ್ಕಾರ ಬೆಲೆ ಏರಿಕೆ ಮಾಡಿದ್ದು ಬಿಟ್ಟರೆ, ಸಂಬಳ ಜಾಸ್ತಿ ಮಾಡಲಿಲ್ಲ: ಡಿ.ಕೆ.ಶಿವಕುಮಾರ್


Team Udayavani, Jun 15, 2021, 5:22 PM IST

ಈ ಸರ್ಕಾರ ಬೆಲೆ ಏರಿಕೆ ಮಾಡಿದ್ದು ಬಿಟ್ಟರೆ, ಸಂಬಳ ಜಾಸ್ತಿ ಮಾಡಲಿಲ್ಲ: ಡಿ.ಕೆ.ಶಿವಕುಮಾರ್

ಮಂಡ್ಯ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನರ ಜೇಬನ್ನು ಪಿಕ್ ಪ್ಯಾಕೆಟ್ ಮಾಡುವ ಕೆಲಸ ಮಾಡಿದ್ದು, ಇವು ಪಿಕ್ ಪ್ಯಾಕೆಟ್ ಸರ್ಕಾರಗಳಾಗಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದರು.

ತಾಲೂಕಿನ ಯಲಿಯೂರು ಸರ್ಕಲ್‌ನಲ್ಲಿರುವ ಪೆಟ್ರೋಲ್ ಬಂಕ್ ಬಳಿ ಜಮಾಯಿಸಿ ಬೆಲೆ ಏರಿಕೆ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ನಡೆದ ಪ್ರತಿಭಟನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಪೆಟ್ರೋಲ್, ಡಿಸೇಲ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ಸರ್ಕಾರಗಳು ದುಡಿಯುವ ವರ್ಗದ ಜನರ ಸಂಬಳವನ್ನು ಮಾತ್ರ ಏರಿಕೆ ಮಾಡಲಿಲ್ಲ. ದರ ಏರಿಕೆ ಮಾಡಿರುವ ಸರ್ಕಾರಗಳು ಸಂಬಳವನ್ನು ಹೆಚ್ಚು ಮಾಡಬಹುದಿತ್ತಲ್ಲವೇ ಎಂದು ಪ್ರಶ್ನಿಸಿದರು.

ಇದೇ ತಿಂಗಳು ತೈಲ ಬೆಲೆಯನ್ನು 17 ಬಾರಿ ಏರಿಕೆ ಮಾಡಿದ್ದು, ಈ ವರ್ಷ 51 ಬಾರಿ ಏರಿಕೆ ಮಾಡಿದ್ದಾರೆ. ಮಧ್ಯೆ ಮಾರ್ಚ್, ಏಪ್ರಿಲ್‌ನಲ್ಲಿ ಚುನಾವಣೆ ಹಿನ್ನೆಲೆಯಲ್ಲಿ ಮಾಡಿಲ್ಲ. ಬೆಲೆ ಏರಿಕೆ ಮಾಡಿದವರು ಸರ್ಕಾರಿ, ಖಾಸಗಿಯವರ ಯಾರ ಸಂಬಳವನ್ನು ಏರಿಕೆ ಮಾಡಲಿಲ್ಲ. ಕೂಡಲೇ ತೆರಿಗೆ ವಾಪಸ್ ಪಡೆದು, ಅಕ್ಕಪಕ್ಕದ ದೇಶದಲ್ಲಿ ಯಾವ ರೀತಿ ಬೆಲೆ ಇದೆಯೋ ಅದೇ ರೀತಿ ಕಡಿಮೆ ಮಾಡಬೇಕು. ಪಕ್ಕದ ಬಾಂಗ್ಲಾದೇಶ, ಶ್ರೀಲಂಕಾ, ಅಮೆರಿಕಾದಲ್ಲೂ ಕಡಿಮೆ ಇದೆ. ಎಲ್ಲ ಕಡೆ ಶೇ.60ರಷ್ಟು ಕಡಿಮೆ ಇದ್ದರೆ, ಭಾರತದಲ್ಲಿ ಮಾತ್ರ ಹೆಚ್ಚಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ ಎಂದರು.

ದರ ಏರಿಕೆ ವಿರುದ್ಧ ಹೋರಾಟ: ರಾಜ್ಯಾದ್ಯಂತ 5 ಸಾವಿರ ಕಡೆ 100 ನಾಟ್‌ಔಟ್ ಘೋಷಣೆ ಮೂಲಕ ತೈಲ ಬೆಲೆ ಏರಿಕೆ ಹಾಗೂ ಅಗತ್ಯ ವಸ್ತುಗಳ ದರ ಏರಿಕೆ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ತಾಲೂಕು, ಜಿಲ್ಲಾ, ಜಿಪಂ, ಗ್ರಾಪಂ, ಹೋಬಳಿ ಮಟ್ಟದಲ್ಲೂ ನಡೆಸಲಾಗಿದೆ. ಇದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ. ಇದೊಂದು ಶ್ರೀ ಸಾಮಾನ್ಯರ ಕಾರ್ಯಕ್ರಮವಾಗಿದೆ. ಇದರಲ್ಲಿ ಎಲ್ಲ ಪಕ್ಷದವರು ಪಾಲ್ಗೊಂಡಿದ್ದಾರೆ. ಕೆಲವೊಂದು ಕಡೆ 25, 50 ರೂ.ಗಳನ್ನು ಗ್ರಾಹಕರಿಗೆ ಹಂಚಿದ್ದಾರೆ. ಕೆಲವರು ಜಾಗಟೆ, ಸಿಹಿ ಹಂಚಿ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ ಎಂದು ತಿಳಿಸಿದರು.

ಈಶ್ವರಪ್ಪಗೆ ತಿರುಗೇಟು: ಈಶ್ವರಪ್ಪನ ಸುದ್ದಿ ನಾನ್ ಯಾಕೆ ಮಾತನಾಡಲಿ. ಈಶ್ವರಪ್ಪ ಅವನ ಪಾರ್ಟಿ, ಗವರ್ನರ್ ಲೆಟರ್, ಅವನ ಪರಿಸ್ಥಿತಿ ವ್ಯಾಖ್ಯಾನ ಮಾಡಿಕೊಂಡರೆ ಸಾಕು. ನನ್ನ ಸುದ್ದಿ ಯಾಕೆ ಪಾಪ ಎಂದು ಪರೋಕ್ಷವಾಗಿ ತಿರುಗೇಟು ನೀಡಿದರು.

ರಾಮ ಜನ್ಮಭೂಮಿ ಅವ್ಯವಹಾರ ದೇಶಕ್ಕೆ ಅವಮಾನ: ರಾಮ ಜನ್ಮಭೂಮಿ ಅವ್ಯವಹಾರದಿಂದ ಇದು ದೇಶಕ್ಕೆ ದೊಡ್ಡ ಅವಮಾನವಾಗಿದೆ. ಇಡೀ ನಮ್ಮ ಜನ ಕೈಲಾದ ಸಹಾಯ ಮಾಡಿದ್ದಾರೆ. ಇದು ನಮ್ಮ ಸಂಸ್ಕೃತಿಗೆ ದೊಡ್ಡ ಅವಮಾನವಾಗಿದೆ. ನಮ್ಮ ಭಾವನೆ, ಧರ್ಮ, ದೇವಸ್ಥಾನಕ್ಕೆ ಸಹಾಯವಾಗಬೇಕು ಹಳ್ಳಿ ಹಳ್ಳಿಯ ಜನ ಹಣ ನೀಡಿದ್ದಾರೆ. ಜಮೀನು ಖರೀದಿ ಮಾಡಿ ಬಿಜಿನೆಸ್ ಮಾಡಲಿ ಅಂತ ದುಡ್ಡು ನೀಡಿಲ್ಲ. ಇಡೀ ದೇಶ ಇದನ್ನು ಖಂಡಿಸಬೇಕಿದೆ. ಜನರು ನೀಡಿರುವ ಹಣವನ್ನು ವಾಪಸ್ ನೀಡಬೇಕು. ಯಾರು ಅವ್ಯವಹಾರದಲ್ಲಿ ಭಾಗಿಯಾಗಿರುವವರನ್ನು ಕೇಂದ್ರ ಹಾಗೂ ಯೋಗಿ ಸರ್ಕಾರ ಬಂಧಿಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.