ಸುಮಲತಾ ಸ್ಪರ್ಧೆ ತಡೆಯಲು ಡಿಕೆಶಿಗೆ ರಾಜಕೀಯ ಸುಪಾರಿ
Team Udayavani, Feb 26, 2019, 12:35 AM IST
ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಅದನ್ನು ತಡೆಯಲು ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ರಾಜಕೀಯ ಸುಪಾರಿ ನೀಡಿದ್ದಾರೆಂದು ತಿಳಿದುಬಂದಿದೆ.
ಸುಮಲತಾ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಡಿ.ಕೆ.ಶಿವಕುಮಾರ್ ಹೆಗಲಿಗೆ ಹಾಕಿ ಈ ವಿಚಾರವಾಗಿ ಡಿಕೆಶಿ ಅವರೊಂದಿಗೆ ದೇವೇಗೌಡರು ಸುದೀರ್ಘ ಚರ್ಚೆ ನಡೆಸಿದ್ದಾರೆಂದು ಹೇಳಲಾಗಿದೆ.
ಮಂಡ್ಯ ಜೆಡಿಎಸ್ ಸುಲಭವಾಗಿ ಗೆಲ್ಲುವ ಕ್ಷೇತ್ರ. ಅಲ್ಲಿ ನಿಖೀಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳುವುದು ನಮ್ಮೆಲ್ಲರ ಗುರಿ. ಈ ನಡುವೆ ಮಂಡ್ಯ ಕ್ಷೇತ್ರದಿಂದ ಸುಮಲತಾ ಚುನಾವಣೆಗೆ ಸ್ಪರ್ಧೆಗಿಳಿಯಲು ಮುಂದಾಗಿರುವುದು ನಮ್ಮ ಗೆಲುವಿಗೆ ದೊಡ್ಡ ಹೊಡೆತವನ್ನೇ ನೀಡುವ ಸಾಧ್ಯತೆಗಳಿವೆ. ಹಾಗಾಗಿ ಹೈಕಮಾಂಡ್ ಮೇಲೆ ಒತ್ತಡ ತಂದು ಸುಮಲತಾ ಅವರನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ದೇವೇಗೌಡರ ಅಣತಿಯಂತೆ ಡಿ.ಕೆ.ಶಿವಕುಮಾರ್ ಚಿತ್ರ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರೊಟ್ಟಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ ಎನ್ನಲಾಗಿದ್ದು, ಸುಮಲತಾ ರಾಜಕೀಯ ಪ್ರವೇಶದ ದುಡುಕಿನ ನಿರ್ಧಾರ ಮಾಡಿದ್ದಾರೆ. ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ಸಿಗುವುದಿಲ್ಲ. ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಸ್ಪರ್ಧಿಸಿ ಗೆಲ್ಲುವುದು ಕಷ್ಟವಿದೆ. ಅದಕ್ಕಾಗಿ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವೊಲಿಸಿ. ಮುಂದಿನ ದಿನಗಳಲ್ಲಿ ಅವರಿಗೆ ಅವಕಾಶ ಮಾಡಿಕೊಡೋಣ ಎಂದು ಹೇಳಿರುವುದಾಗಿ ತಿಳಿದುಬಂದಿದೆ.
ಇದಕ್ಕೆ ರಾಕ್ಲೈನ್ ವೆಂಕಟೇಶ್, ಸುಮಲತಾ ಚುನಾವಣಾ ಸ್ಪರ್ಧೆಗೆ ಒಲವು ತೋರಿಸಿರುವುದರ ಹಿಂದೆ ನನ್ನ ಪಾತ್ರವಿಲ್ಲ. ಆದರೂ ಈ ವಿಷಯವಾಗಿ ಅವರೊಂದಿಗೆ ಮಾತನಾಡುವುದಾಗಷ್ಟೇ ಹೇಳಿದ್ದಾರೆ ಎಂದು ಗೊತ್ತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ