ಅಂಗಾಂಗ ದಾನ ಮಾಡಿ ವೈದ್ಯರ ಚಳವಳಿ


Team Udayavani, Aug 16, 2022, 3:23 PM IST

ಅಂಗಾಂಗ ದಾನ ಮಾಡಿ ವೈದ್ಯರ ಚಳವಳಿ

ಮಂಡ್ಯ: ಆರೋಗ್ಯ ಇಲಾಖೆ ಮಾದರಿಯಂತೆ ಏಕರೂಪ ವೇತನಕ್ಕಾಗಿ ಆಗ್ರಹಿಸಿ ರಾಜ್ಯ ತುರ್ತು ಚಿಕಿತ್ಸಾ ವೈದ್ಯಾಧಿ ಕಾರಿಗಳ ಸಂಘದಿಂದ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಯುತ್ತಿರುವ ಧರಣಿ 10ನೇ ದಿನವೂ ಮುಂದುವರಿದಿದ್ದು, ಧರಣಿ ನಿರತರು ರಕ್ತದಾನ ಮತ್ತು ಅಂಗಾಂಗ ದಾನ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಪ್ರತಿಭಾಟನಾ ಧರಣಿಗೆ ಬೆಂಬಲ ವ್ಯಕ್ತಪಡಿಸಿದ ಮಾಜಿ ಶಾಸಕ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ರಾಜ್ಯ ಸರ್ಕಾರ ತುರ್ತು ಚಿಕಿತ್ಸಾ ವೈದ್ಯಾ ಧಿಕಾರಿಗಳ ಸರಳ ಸಮಸ್ಯೆ ಬಗೆಹರಿಸದಷ್ಟು ಒತ್ತಡದಲ್ಲಿ ಕಾರ್ಯಭಾರ ಮಾಡುತ್ತಿದ್ದಾರೆಯೇ ಎಂದು ಖಾರವಾಗಿ ನುಡಿದರು.

ದುರಾಡಳಿತ: ಕಳೆದ 10 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಜಿಲ್ಲಾಡಳಿತವಾಗಲಿ, ಸಚಿವರಾಗಲಿ ಬಾರದಿರುವುದು ದುರಾಡಳಿತದ ಪರಮಾವಧಿ. ತುರ್ತು ಚಿಕಿತ್ಸಾ ವೈದ್ಯಾಧಿ ಕಾರಿಗಳು ಸರಳ ಸಮಸ್ಯೆಗಳಿಗೆ ಸ್ಪಂದಿಸದೆ ಮೀನಮೇಷ ಮಾಡುತ್ತಿರುವುದು ಖಂಡನೀಯ ಎಂದು ಕಿಡಿಕಾರಿದರು. ದೇಶಾದ್ಯಂತ 75ನೇ ಸ್ವಾತಂತ್ರ್ಯ ಭಾರತ ಅಮೃತ ಮಹೋತ್ಸವ ಆಚರಿಸುತ್ತಿರುವ ದಿನಗಳಲ್ಲಿ ತುರ್ತು ವೈದ್ಯರ ಸಮಸ್ಯೆ ಕೇಳಿ ಪರಿಹಾರ ಕೊಡುವಲ್ಲಿ ವಿಫಲತೆಯಾಗಿರುವ ರಾಜ್ಯ ಸರ್ಕಾರ, ಸಚಿವರ ಮಂದ ಬುದ್ಧಿಗೆ, ಜಾಣ ಮೌನಕ್ಕೆ ರೋಗಿಗಳ ಜೀವ ಬಲಿಯಾಗುವುದು ಬೇಡ ಎಂದರು.

ನೋವು ತಂದಿದೆ: ರಾಜ್ಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ ಸಂಘದ ಖಜಾಂಚಿ ಡಾ.ಯೋಗೇಂದ್ರಕುಮಾರ್‌ ಮಾತನಾಡಿ, ಸರ್ಕಾರದ ಗಮನ ಸೆಳೆಯಲು ಆ.15 ರಂದು ರಕ್ತದಾನ ಮಾಡುವ ಮೂಲಕ ವಿನೂತನ ಚಳವಳಿಗೆ ಕರೆ ನೀಡಿದ್ದೆವು. ದೇಶವೇ 75ರ ಸ್ವಾತಂತ್ರÂ ಭಾರತ ಅಮೃತ ಮಹೋತ್ಸವದಲ್ಲಿದ್ದರೂ ನಮ್ಮ ಬೇಡಿಕೆ ಕೇಳದ ಸಚಿವರು ಮತ್ತು ಸಂಬಂಧಪಟ್ಟ ಅ ಧಿಕಾರಿಗಳ ವರ್ತನೆ ನೋವು ತಂದಿದೆ ಎಂದರು.

ಆಗ್ರಹ: ವೈದ್ಯಕೀಯ ಶಿಕ್ಷಣ ಇಲಾಖೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕೇತರ ವೈದ್ಯಾಧಿಕಾರಿಗಳಿಗೆ ಆರೋಗ್ಯ ಇಲಾಖೆ ಮಾದರಿಯಂತೆ ಏಕರೂಪ ವೇತನ ನೀಡುವುದು ಅಗತ್ಯವಿದೆ. 2018ರ ಹೈಕೋರ್ಟ್‌ ಆದೇಶದಲ್ಲಿ ನೂತನ ಪರಿಷ್ಕೃತ ರಾಜ್ಯ ಸರ್ಕಾರಿ ವೇತನ ಶ್ರೇಣಿಯಂತೆ ವೇತನ ನೀಡಲು ಆಗ್ರಹಿಸುತ್ತಿದ್ದೇವೆ ಎಂದರು.

ಪ್ರಮಾಣ ಪತ್ರ ವಿತರಣೆ: ಮಿಮ್ಸ್‌ ರಕ್ತನಿಧಿ  ಕೇಂದ್ರದ ಡಾ.ಸ್ವಾಮಿ, ಡಾ. ಯೋಗೇಂದ್ರಕುಮಾರ್‌, ಡಾ.ಬಿಂದು, ದಾದಿಯರಾದ ರಾಜಸಾಬ್‌, ರಘು ಮತ್ತಿತರರು ರಕ್ತದಾನ ಮಾಡಿ ಪ್ರತಿಭಟನೆಗೆ ಶಕ್ತಿ ತುಂಬಿದರು. ಬಳಿಕ ಅಂಗಾಂಗ ದಾನ ಮಾಡಿದ ಡಾ.ಅವಿನಾಶ್‌, ಡಾ.ಸತೀಶ ಅವರಿಗೆ ನೋಂದಣಿ ಪ್ರಮಾಣ ಪತ್ರ ನೀಡಿದರು.

ಭಾರತೀಯ ವೈದ್ಯರ ಸಂಘದ ಜಿಲ್ಲಾಧ್ಯಕ್ಷ ಡಾ.ಮರೀಗೌಡ, ಕರವೇ ಜಿಲ್ಲಾಧ್ಯಕ್ಷ ಜಯರಾಂ, ನೆಲದನಿ ಬಳಗದ ಲಂಕೇಶ್‌ ಮಂಗಲ, ಯೋಗೇಶ್‌ ಸಂತೆಕಸಲಗೆರೆ, ಪ್ರತಾಪ್‌, ದಾದಿಯರ ಸಂಘದ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.