ರಸ್ತೆ ಅಗಲೀಕರಣಕ್ಕೆ ಚರಂಡಿ ಬಲಿ, ಮಳೆ ಬಂದರೆ ಮನೆಯೊಳಗೆ ನೀರು: ಮದ್ದೂರು ಜನತೆಗೆ ಸಂಕಷ್ಟ
Team Udayavani, Oct 9, 2020, 8:38 AM IST
ಮಂಡ್ಯ: ಮದ್ದೂರು ಪಟ್ಟಣದ ಹೆದ್ದಾರಿ ಅಗಲೀಕರಣದಿಂದ ಪಕ್ಕದ ಹಳ್ಳದ ಮನೆಯಲ್ಲಿ ವಾಸ ಮಾಡುತ್ತಿದ್ದ ಮನೆಯವರೆಗೆ ಸಂಕಷ್ಟ ಎದುರಾಗಿದೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದ ಮನೆಯೊಳಗೆ ನೀರು ನುಗ್ಗಿದ್ದು, ಮನೆಯ ಸದಸ್ಯರು ಪಕ್ಕದ ಮನೆಯ ಸೂರಿನಡಿ ಇಡೀ ರಾತ್ರಿ ಕಾಲ ಕಳೆಯಬೇಕಾದ ಪರಿಸ್ಥಿತಿ ಎದುರಾಗಿದೆ.
ಪುರಸಭೆಯಲ್ಲಿ ಪೌರಕಾರ್ಮಿಕರಾಗಿ ಕೆಲಸ ನಡೆಸುತ್ತಿರುವ ಲಕ್ಷ್ಮಮ್ಮ ಎಂಬವರ ಮನೆ ಕಳೆದ ರಾತ್ರಿ ಸುರಿದ ಮಳೆ ನೀರಿನಿಂದ ಸಂಪೂರ್ಣ ಜಲಾವೃತಗೊಂಡಿದೆ.
ರಾತ್ರಿ ಸುರಿದ ಭಾರಿ ಮಳೆಯಿಂದ ಮದ್ದೂರು ಮಂಡ್ಯ ರಸ್ತೆ ನೀರು ಮಾರುಕಟ್ಟೆ ಪಕ್ಕದಲ್ಲಿರುವ ಪ್ರದೇಶದ ನಿವಾಸಿಗಳ ಗೋಳು ಹೇಳತೀರದಾಗಿದೆ.
ಇದನ್ನೂ ಓದಿ:ಒಂದು ಜಿಲ್ಲೆ ಒಂದು ಉತ್ಪನ್ನ; ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಸಾಗರೋತ್ಪನ್ನ
ರಸ್ತೆ ಅಗಲೀಕರಣದಿಂದ ಇರುವ ಚರಂಡಿಯನ್ನು ಮುಚ್ಚಿದ್ದರಿಂದ ಚರಂಡಿ ನೀರು ಮನೆಯೊಳಗೆ ನುಗ್ಗಿ ದವಸ-ಧಾನ್ಯ ಬಟ್ಟೆ ಪಾತ್ರೆ ಎಲ್ಲವೂ ಸಂಪೂರ್ಣ ಹಾಳಾಗಿವೆ. ಇದರಿಂದ ಇಡೀ ರಾತ್ರಿ ಪಕ್ಕದ ಮನೆಯ ತೇರಿನಲ್ಲಿ ಚಳಿಯಲ್ಲಿ ಕುಳಿತಿದ್ದಾರೆ.
ಈ ಬಗ್ಗೆ ಮಾತನಾಡಿದ ಲಕ್ಷ್ಮಮ್ಮ, ರಾತ್ರಿ ಮಲಗಿದ್ದು ಸುಮಾರು ಹನ್ನೆರಡುವರೆ ಸಂದರ್ಭದಲ್ಲಿ ಮನೆ ಒಳಗಡೆ ನೀರು ಪ್ರಾರಂಭವಾಯಿತು. ಒಮ್ಮೆಲೆ ನೀರು ನುಗ್ಗಿದ ಕಾರಣ ಮನೆಯಲ್ಲಿದ್ದ ದವಸ ಧಾನ್ಯ, ಬಟ್ಟೆಬರೆ ಎಲ್ಲವೂ ಸಂಪೂರ್ಣವಾಗಿ ಮುಳುಗಿ ಹೋಗಿತ್ತು. ನಾವು ಹೇಗೋ ನನ್ನ ಮಗಳು ನನ್ನ ಮೊಮ್ಮಕ್ಕಳು ನಾವು ಒಂದು ಕೈಯಲ್ಲಿ ಜೀವ ಹಿಡಿದು ನಿಧಾನವಾಗಿ ಹೊರಬಂದು ಪಕ್ಕದ ಮನೆಯ ಎತ್ತರದ ಸೂರಿನಲ್ಲಿ ಇಡೀ ರಾತ್ರಿ ಕಳೆಯಬೇಕಾಯಿತು. ರಸ್ತೆ ಅಗಲೀಕರಣ ಮಾಡಲು ಚರಂಡಿಯನ್ನು ಕಿತ್ತುಹಾಕಿ ಚರಂಡಿ ಸರಿಪಡಿಸದ ಕಾರಣ ಮಳೆ ಹಾಗೂ ಚರಂಡಿ ನೀರು ಮನೆಗೆ ನುಗ್ಗಿ ಹಾನಿಯಾಗಿದೆ ಎಂದು ತಮ್ಮ ಅಳಲು ತೋಡಿಕೊಂಡರು.
ಕೂಡಲೇ ರಸ್ತೆ ಅಗಲೀಕರಣ ಕಾಮಗಾರಿ ಮುಗಿಸಿ ಚರಂಡಿ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ