ಚಾಲಕರು ಕಡ್ಡಾಯ ಮಾಸ್ಕ್ ಬಳಸಿ
Team Udayavani, Mar 20, 2020, 3:22 PM IST
ಕೆ.ಆರ್.ಪೇಟೆ: ದೇಶದ ಮೂಲೆ ಮೂಲೆಗಳಿಗೂ ವಾಹನ ಚಾಲನೆ ಮಾಡಿಕೊಂಡು ಹೋಗುವ ಚಾಲಕರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೃಷಿ ಆಧಿಕಾರಿ ನಿಂಗಪ್ಪ ಅಗಸರ ತಿಳಿಸಿದರು.
ತಾಲೂಕಿನ ಗಂಜೀಗೆರೆ ಗ್ರಾಮದಲ್ಲಿ ಕೆರೆ ಹೂಳೆತ್ತುವ ಜೆಸಿಬಿ ವಾಹನ ಚಾಲಕರಿಗೆ ಉಚಿತ ಮಾಸ್ಕ್ ವಿತರಿಸಿ ಮಾತನಾಡಿದ ಅವರು, ಚಾಲಕರು ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ವಾಹನ ಸಂಚಾರಕ್ಕೆ ಅನಿವಾರ್ಯವಾಗಿ ಹೋಗಲೇ ಬೇಕಿದೆ. ಹಾಗಾಗಿ ಅವರು ಕೋವಿಡ್ 19 ಸೋಂಕಿನಿಂದ ಪಾರಾಗಲು ಕಡ್ಡಾಯವಾಗಿ ಮಾಸ್ಕ್ ಮತ್ತಿತರೆ ಮುಂಜಾಗ್ರತೆ ಕ್ರಮ ವಹಿಸಬೇಕು ಎಂದು ಹೇಳಿದರು.
ಈಗ ಕೋವಿಡ್ 19 ವೈರಾಣು ಹರಡುತ್ತಿದೆ ಎಂಬ ಕಾರಣಕ್ಕೆ ಮಾಸ್ಕ್ ಹಾಕಿಕೊಳ್ಳುವ ಬದಲು ಸದಾಕಾಲ ಹಾಕಿಕೊಳ್ಳಬೇಕು. ಈಗ ಬೇಸಿಗೆ ಆರಂಭವಾಗಿದ್ದು, ದೂಳು ಹೆಚ್ಚಾಗಿ ನಮ್ಮ ದೇಹ ಸೇರುವುದರಿಂದ ಶ್ವಾಸಕೋಶಕ್ಕೆ ತೊಂದರೆಯಾಗುತ್ತದೆ. ಇರದ ಜೊತೆಗೆ ವಿವಿಧ ಭಾಗಗಳಲ್ಲಿ ಅಲ್ಲಿನ ಪರಿಸರಕ್ಕೆ ಅನುಗುಣವಾಗಿ ಸಾಂಕ್ರಾಮಿಕ ರೋಗಗಳು ಬರುತ್ತವೆ. ಅವುಗಳಿಂದ ರಕ್ಷಣೆ ಪಡೆದುಕೊಳ್ಳಲು ಮಾಸ್ಕ್ಗಳು ಸಹಕಾರಿಯಾಗುತ್ತವೆ. ಆದ್ದರಿಂದ ಚಾಲಕರು ತಾವು ಕರ್ತವ್ಯ ನಿರ್ವಹಿಸುವಾಗ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಚಾಲನೆ ಮಾಡಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್