ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ

ಒಂದು ಕಟ್ಟು ನೀರಿಗಾಗಿ ರೈತರ ಬೇಡಿಕೆ • ಮಳೆಯೂ ಇಲ್ಲ; ಕೆರೆ, ಕೊಳವೆ ಬಾವಿಗಳಲ್ಲೂ ನೀರಿಲ್ಲ

Team Udayavani, May 26, 2019, 2:17 PM IST

mandya-tdy-3..

ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆ ಹಂಗಾಮಿನ ಬೆಳೆಗಳು ನೀರಿಲ್ಲದೆ ಒಣಗಲಾರಂಭಿಸಿವೆ. ಮುಂಗಾರು ಮಳೆ ಆರಂಭವಾಗುವುದರೊಳಗೆ ಒಂದು ಕಟ್ಟು ನೀರನ್ನು ಕೊಟ್ಟು ಬೇಸಿಗೆ ಬೆಳೆ ಸಂರಕ್ಷಣೆ ಮಾಡಿಕೊಡುವಂತೆ ರೈತರು ರಾಜ್ಯ ಸರ್ಕಾರದ ಎದುರು ಬೇಡಿಕೆ ಇಟ್ಟಿದ್ದಾರೆ.

ಮುಂಗಾರು ಪೂರ್ವ ಮಳೆ ಕೈಕೊಟ್ಟಿದೆ. ಕೆರೆಗಳಲ್ಲಿ ನೀರಿಲ್ಲ, ಕೊಳವೆ ಬಾವಿಗಳು ಬತ್ತಿಹೋಗಿವೆ. ಅಂತರ್ಜಲ ಪಾತಾಳ ಸೇರಿಕೊಂಡಿದೆ. ಇಂತಹ ಸಮಯದಲ್ಲಿ ಬೆಳೆಗಳಿಗೆ ನೀರು ಸಿಗಬೇಕಾದರೆ ಕೃಷ್ಣರಾಜಸಾಗರ ಜಲಾಶಯದಿಂದ ಮಾತ್ರ ಸಾಧ್ಯ ಎನ್ನುವುದು ರೈತರು ಹೇಳುವ ಮಾತು.

11.432 ಟಿಎಂಸಿ: ಕೃಷ್ಣರಾಜಸಾಗರ ಜಲಾಶಯದಲ್ಲಿ 74 ಅಡಿವರೆಗೂ ಬೆಳೆಗಳಿಗೆ ನೀರು ಕೊಟ್ಟಿರುವ ಉದಾಹರಣೆಗಳಿವೆ. ಈಗ ಹಾಲಿ ಅಣೆಕಟ್ಟೆಯೊಳಗೆ 81.44 ಅಡಿ ನೀರಿದೆ. ಜಲಾಶಯಕ್ಕೆ 139 ಕ್ಯುಸೆಕ್‌ ಒಳಹರಿವಿದ್ದು, 348 ಕ್ಯುಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ಅಣೆಕಟ್ಟೆಯೊಳಗೆ 11.432 ಟಿಎಂಸಿ ಅಡಿ ನೀರಿದೆ.

ಹಾಲಿ ಬೇಸಿಗೆ ಹಂಗಾಮಿನ ಬೆಳೆಗೆ ಒಂದು ಕಟ್ಟು ನೀರು ಕೊಟ್ಟರೂ ಭತ್ತ ಸೇರಿದಂತೆ ಇನ್ನಿತರ ಬೆಳೆಗಳೆಲ್ಲವೂ ರೈತರ ಕೈಸೇರಲಿವೆ. ಹೀಗಾಗಿ ಬೆಳೆಗಳಿಗೆ ಶೀಘ್ರವೇ ನೀರು ಹರಿಸುವಂತೆ ರಾಜ್ಯಸರ್ಕಾರ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ರೈತರ ಪರದಾಟ: ಈ ಬಾರಿ ಮುಂಗಾರು ಪೂರ್ವ ಮಳೆ ಸಮರ್ಪಕವಾಗಿ ಬಿದ್ದಿಲ್ಲ. ಪೂರ್ವ ಮುಂಗಾರು ಉತ್ತಮವಾಗಿದ್ದರೆ ಬೆಳೆಗಳಿಗೆ ನೀರಿನ ಅವಶ್ಯಕತೆ ಕಂಡುಬರುತ್ತಿರಲಿಲ್ಲ. ಕಳೆದ ವರ್ಷ ಮಾರ್ಚ್‌, ಏಪ್ರಿಲ್, ಮೇ ತಿಂಗಳವರೆಗೆ ಮುಂಗಾರು ಪೂರ್ವ ಮಳೆ ಆಶಾದಾಯಕವಾಗಿತ್ತು. ಕಳೆದ ವರ್ಷ ಮಾರ್ಚ್‌ನಲ್ಲಿ ವಾಡಿಕೆ ಮಳೆ 8.8 ಮಿ.ಮೀ. ಇದ್ದರೂ 27.3 ಮಿ.ಮೀ. ಮಳೆಯಾಗಿತ್ತು. ಏಪ್ರಿಲ್ನಲ್ಲಿ ವಾಡಿಕೆ ಮಳೆ 49.5 ಮಿ.ಮೀ.ಗೆ 40.1 ಮಿ.ಮೀ. ಮಳೆಯಾಗಿದ್ದರೆ, ಮೇ ತಿಂಗಳಲ್ಲಿ ವಾಡಿಕೆ ಮಳೆ 118.7 ಮಿ.ಮೀ.ಗೆ 223.3 ಮಿ.ಮಿ. ಮಳೆಯಾಗಿತ್ತು. ಈ ಬಾರಿ ಮಳೆಯೇ ಇಲ್ಲದೆ ರೈತರು ಬೆಳೆ ರಕ್ಷಿಸಿಕೊಳ್ಳುವುದಕ್ಕೆ ಪರದಾಡುತ್ತಿದ್ದಾರೆ.

ಕೆಲವೆಡೆ ಕೊಳವೆ ಬಾವಿಗಳಲ್ಲಿ ಅತಿ ಕಡಿಮೆ ನೀರು ಬರುತ್ತಿದ್ದು, ಅದನ್ನೇ ಬಳಸಿಕೊಂಡು ಬೆಳೆಗಳ ರಕ್ಷಣೆಗೆ ರೈತರು ಮುಂದಾಗಿದ್ದಾರೆ. ಮಳೆಯಾಶ್ರಿತ ಪ್ರದೇಶದ ರೈತರು ಮಳೆಯನ್ನೇ ದಿಟ್ಟಿಸಿ ನೋಡುತ್ತಾ, ನೀರಿಲ್ಲದೆ ಬೆಳೆಗಳು ಒಣಗುತ್ತಿರುವುದನ್ನು ಕಂಡು ಚಿಂತಾಕ್ರಾಂತರಾಗಿದ್ದಾರೆ. ಮುಂಗಾರು ಮಳೆ ಆಗಮನಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದ್ದು, ಈಗ ನೀರು ಸಿಕ್ಕರೆ ಬೆಳೆ ಪಡೆದುಕೊಂಡು ಮುಂಗಾರು ಹಂಗಾಮಿನ ಬಿತ್ತನೆಗೆ ಭೂಮಿಯನ್ನು ಹದ ಮಾಡಿಕೊಳ್ಳಲು ಸರಿಹೋಗಲಿದೆ ಎನ್ನುವುದು ರೈತರ ಲೆಕ್ಕಾಚಾರವಾಗಿದೆ.

ಇನ್ನೊಂದು ಕಟ್ಟು ನೀರು ಹರಿಸಿ: ಬಿಸಿಲಿನ ಹೊಡೆತಕ್ಕೆ ಬೆಳೆಗಳು ನೆಲಕಚ್ಚುತ್ತಿವೆ. ಭೂಮಿ ಕಾದು ಕೆಂಡವಾಗಿದೆ. ಕೆರೆಗಳಲ್ಲಿರುವ ಅಲ್ಪಸ್ವಲ್ಪ ನೀರೂ ಇಂಗಿಹೋಗುತ್ತಿದೆ. ತಾಪಮಾನ ಅಧಿಕವಾಗಿರುವ ಪ್ರಸ್ತುತ ದಿನಗಳಲ್ಲಿ ನಾಲೆಗಳಲ್ಲಿ ನೀರು ಹರಿಸಿ ಅನ್ನದಾತರನ್ನು ರಕ್ಷಣೆ ಮಾಡಬೇಕಿದೆ. ಏ.21ರಿಂದ ಮೇ 8ರವರೆಗೆ ಒಂದು ಕಟ್ಟು ನೀರನ್ನು ಹರಿಸಲಾಗಿದೆ. ಅದೇ ರೀತಿಯಲ್ಲಿಯೇ ಇನ್ನೊಂದು ಕಟ್ಟು ನೀರು ಹರಿಸಿದರೆ ಬೇಸಿಗೆ ಬೆಳೆ ಉಳಿಸಿದಂತಾಗುತ್ತದೆ. ಅತಿ ಶೀಘ್ರದಲ್ಲೇ ಎಲ್ಲಾ ನಾಲೆಗಳಿಗೆ ನೀರು ಹರಿಸುವಂತೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.