ದುಡಿಯೋಣ ಬಾ ಅಭಿಯಾನ
Team Udayavani, Apr 6, 2022, 2:22 PM IST
ಮಂಡ್ಯ: ಗ್ರಾಮೀಣ ಭಾಗದ ಕೂಲಿಗಾರರಿಗೆ ನಿರಂತರ ಕೆಲಸ ನೀಡುವ ಉದ್ದೇಶದಿಂದ ಮಾ.15ರಿಂದ ಜೂ.30ರವರೆಗೆ ದುಡಿಯೋಣ ಬಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಇದರಿಂದ ಜಲ ಸಂರಕ್ಷಣೆಗೆ ಜಲ ಮೂಲಗಳ ಪುನಶ್ಚೇತನ ಕಾಮಗಾರಿಗಳಾದ ಸಮಗ್ರ ಕೆರೆ ಅಭಿವೃದ್ಧಿ, ಬದು, ಕಾಲುವೆ ಸುಧಾರಣೆ, ಕೆರೆ ಮತ್ತು ಕಟ್ಟೆಗಳ ಹೂಳೆತ್ತುವ ಕಾಮಗಾರಿಗಳನ್ನು ಆದ್ಯತೆಯ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಾಪಂ ಇಒ ರಾಮಲಿಂಗಯ್ಯ ಹೇಳಿದರು.
ಮಳವಳ್ಳಿ ತಾಪಂ ಆವರಣದಲ್ಲಿ ದುಡಿಯೋಣ ಬಾ ಅಭಿಯಾನ ವಾಹಿನಿಗೆ ಚಾಲನೆ ನೀಡಿ ಮಾತನಾಡಿದ ಅವರು, ಮಳೆಗಾಲಕ್ಕೂ ಮುನ್ನ ಜಲ ಮೂಲಗಳ ಪುನಶ್ಚೇತನವಾಗುವುದರೊಂದಿಗೆ ಬೇಸಿಗೆಯಲ್ಲಿ ತಾಲೂಕಿನ 39 ಗ್ರಾಮ ಪಂಚಾಯತಿಯ ಕೂಲಿಕಾರರಿಗೆ ನಿರಂತರವಾಗಿ ಕೆಲಸ ಸಿಗಲಿದೆ. ಕೇಂದ್ರ ಸರ್ಕಾರ ಕೂಲಿ ಮೊತ್ತವನ್ನು 20 ರೂ. ಹೆಚ್ಚಿಸಿದ್ದು, ಇದರಿಂದ ಸಲಕರಣೆ ವೆಚ್ಚ ಸೇರಿ 319 ರೂ. ಸಿಗಲಿದೆ ಎಂದು ಹೇಳಿದರು.
ಕೂಲಿ ಪಾವತಿಯಲ್ಲಿ ಸಮಸ್ಯೆಯಿಲ್ಲ: ಮಹಿಳಾ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ನರೇಗಾ ಕೆಲಸದಲ್ಲಿ ಭಾಗವಹಿಸಿದರೆ ಮಹಿಳಾ ಕೂಲಿಗಾರರ ಸಬಲೀಕರಣವಾಗಲು ಸಾಧ್ಯವಾಗುತ್ತದೆ. ಕೂಲಿಕಾರರಿಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರ ಎನ್ ಎಂಎಂಎಸ್ ಆ್ಯಪ್ ಮೂಲಕ ಹಾಜರಾತಿಯನ್ನು ತೆಗೆದುಕೊಳ್ಳುವುದರಿಂದ ಕೂಲಿ ಪಾವತಿಯಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದರು.
ತಾಲೂಕು ಐಇಸಿ ಸಂಯೋಜಕ ಸುನಿಲ್ಕುಮಾರ್, ಎಂಐಎಸ್ ಸಂಯೋಜಕಿ ಶ್ವೇತ, ವಿಷಯ ನಿರ್ವಾಹಕ ಮಹದೇವಮ್ಮ, ತಾಂತ್ರಿಕ ಸಹಾಯಕರಾದ ಚಂದನ್, ಅರುಣ್, ಶೋಭ, ನಿತಿನ್, ಎನ್ಎಲ್ಆರ್ಎಂ ವ್ಯವಸ್ಥಾಪಕ ಮಂಜುನಾಥ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ