ವಿಕೋಪಗಳಿಗೆ ಪರಿಸರ ನಾಶ ಕಾರಣ
ಕೀಲಾರದಲ್ಲಿ ಸ್ವಚ್ಛಮೇವ ಜಯತೆ ಆಂದೋಲನಕ್ಕೆ ಸಂಸದೆ ಸುಮಲತಾ ಚಾಲನೆ •ಪರಿಸರ ಕಾಪಾಡಲು ಸಲಹೆ
Team Udayavani, Jun 12, 2019, 1:02 PM IST
ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದ ಸ್ವಚ್ಛಮೇವ ಜಯತೆ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಅಂಬರೀಶ್ ಚಾಲನೆ ನೀಡಿದರು.
ಮಂಡ್ಯ: ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿ ನಾಶ ಮಾಡುವುದು ಅಮಾನವೀಯ. ಹುಟ್ಟಿನಿಂದ ಸಾಯುವವರೆಗೂ ನಮ್ಮನ್ನು ಜೀವಂತ ವಾಗಿಡುವುದೇ ಪ್ರಕೃತಿ. ಅದರ ಜೀವಂತಿಕೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಜಿಲ್ಲಾ ಪಂಚಾಯಿತಿ ವತಿಯಿಂದ ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದ ಸ್ವಚ್ಛಮೇವ ಜಯತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅಭಿವೃದ್ಧಿ ಹೆಸರಲ್ಲಿ ಅರಣ್ಯ ಸಂಪತ್ತು ನಾಶವಾಗುತ್ತಿದೆ. ಜಾಗತಿಕ ತಾಪಮಾನ ತೀವ್ರಗೊಳ್ಳುತ್ತಿದ್ದು, ಬರಗಾಲ, ಚಂಡಮಾರುತ, ಸುನಾಮಿಯಂತಹ ಪ್ರಕೃತಿ ವಿಕೋಪಗಳನ್ನು ನಾವು ಕಾಣುತ್ತಿದ್ದೇವೆ. ಇದೆಲ್ಲಕ್ಕೂ ಪರಿಸರ ಅಸಮತೋಲನವೇ ಕಾರಣ. ಈ ನಿಟ್ಟಿನಲ್ಲಿ ನಾವು ಪರಿಸರವನ್ನು ನಾವು ಕಾಪಾಡಿದರೆ, ಪರಿಸರ ನಮ್ಮನ್ನು ಕಾಪಾಡುತ್ತದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಪರಿಸರದ ಮಹತ್ವ ಕುರಿತು ಮಕ್ಕಳಿಗೆ ಶಿಕ್ಷಕರು ಅರಿವು ಮೂಡಿಸಬೇಕು. ಒಂದು ಮಗು ಒಂದು ಗಿಡ ನೆಟ್ಟು ಬೆಳೆಸಿದರೆ ಪರಿಸರ ಸಮತೋಲನ ಸಾಧ್ಯವಾಗುತ್ತದೆ. ನಾವೂ ಸಹ ಪ್ರಕೃತಿ ಸಂರಕ್ಷಕರಾಗಿ ನಿಸರ್ಗದ ಮಡಿಲಿನಲ್ಲಿ ಜೀವಿಸುವಂತಹ ವಾತಾವರಣವನ್ನು ಸೃಷ್ಟಿಸಿಕೊಂಡಾಗ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಕೊಡುಗೆಯಾಗಿ ನೀಡಲು ಸಾಧ್ಯವಿದೆ ಎಂದು ಹೇಳಿದರು.
ಸ್ವಚ್ಛತೆ, ಪರಿಸರಕ್ಕೆ ಸಂಬಂಧಿಸಿದಂತೆ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವ ನಾವು, ರಸ್ತೆ, ಚರಂಡಿ ಸ್ವಚ್ಛತೆ ಬಗ್ಗೆ ಮಾತನಾಡುತ್ತೇವೆ. ಆದರೆ ಪರಿಸರ ಮತ್ತು ನೀರಿನ ಬಗ್ಗೆ ಮಾತನಾಡುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಒಂದು ಬಿಂದಿಗೆ ನೀರಿಗಾಗಿ ಕಿಲೋಮೀಟರ್ ದೂರ ಹೋಗಬೇಕಿದೆ. ಮುಂದಿನ ದಿನಗಳಲ್ಲಿ ಇದೇ ಸ್ಥಿತಿ ಎಲ್ಲೆಡೆ ಬರಬಹುದು. ಅದಕ್ಕೂ ಮೊದಲು ನಾವು ಎಚ್ಚೆತ್ತು ಪರಿಸರ ಉಳಿಸಲು ಪಣ ತೊಡಬೇಕು ಎಂದು ಸುಮಲತಾ ತಿಳಿಸಿದರು.
ಹಣ ಮಾಡಿದರೆ ಏನು ಪ್ರಯೋಜನ: ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ನಾವು ಈಗಲೇ ಜಾಗೃತರಾಗಿ ಪರಿಸರ ಉಳಿವಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕಿದೆ. ಎಲ್ಲೆಡೆ ಸಮೃದ್ಧವಾಗಿ ಗಿಡ-ಮರಗಳು ಬೆಳೆದರೆ ಕಾಡು ಹೆಚ್ಚಾಗಿ ಸಕಾಲದಲ್ಲಿ ಮಳೆ ಬೀಳುತ್ತದೆ. ಭೂಮಿ ತಂಪಾಗುವುದರ ಜತೆಗೆ ಜಾಗತಿಕ ತಾಪಮಾನವೂ ಕ್ಷೀಣಿಸುತ್ತದೆ. ಪ್ರಾಕೃತಿಕ ಸಮತೋಲನ ಕಾಪಾಡಿದಾಗ ಜೀವಸಂಕುಲದ ಉಳಿವು ಸಾಧ್ಯವಾಗುತ್ತದೆ. ಅದಕ್ಕಾಗಿ ಎಲ್ಲರಲ್ಲೂ ಪರಿಸರದ ಬಗ್ಗೆ ಅರಿವು ಮೂಡಿಸಬೇಕು. ನಾವು ಜೀವಂತವಾಗಿರಲು ಪ್ರಕೃತಿಯನ್ನೇ ಉಳಿಸದೆ, ಕೋಟಿಗಟ್ಟಲೆ ಆಸ್ತಿ, ಹಣ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ಪ್ರವಾಸಿ ತಾಣಗಳ ಸುತ್ತಮುತ್ತ ಪರಿಸರ ಹಾನಿ ಹೆಚ್ಚಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಪರಸರ ಹಾಳು ಮಾಡಲಾಗುತ್ತಿದೆ. ಇನ್ನಾದರೂ ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ. ಒಂದು ಮರ ಕಡಿದು ಅಭಿವೃದ್ಧಿಪಡಿಸಿದರೆ ನಾಲ್ಕು ಮರ ನೆಟ್ಟು ಪರಿಸರವನ್ನು ಕಾಪಾಡುವ ಕೆಲಸ ಆಗಬೇಕು. ಆಗ ಮಾತ್ರ ಪರಿಸರಕ್ಕೆ ನಾವು ನಿಜವಾಗಲೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಸಲಹೆ ನೀಡಿದರು.
ಯುವ ಶಕ್ತಿಯ ಮುಂದೆ ಯಾವ ಶಕ್ತಿಯೂ ಏನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಪರಿಸರದ ಬಗ್ಗೆ ಯುವ ಶಕ್ತಿ ಕಾಳಜಿ ವಹಿಸಬೇಕಿದೆ. ಪ್ರತಿ ವಿಚಾರದಲ್ಲೂ ತಮ್ಮ ಕರ್ತವ್ಯ ಏನೆಂಬುದನ್ನು ಅರಿತು ಕೆಲಸ ಮಾಡಬೇಕು. ಪರಿಸರವನ್ನು ಉಳಿಸಿ ಬೆಳೆಸುವುದು ಯುವಶಕ್ತಿಯ ಮುಂದಿರುವ ಸವಾಲಾಗಿದೆ ಎಂದು ಹೇಳಿದರು. ಶಾಸಕ ಎಂ.ಶ್ರೀನಿವಾಸ್ ಸೇರಿದಂತೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು.
ಸರಳ ಕಾರ್ಯಕ್ರಮ: ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಗಿರೀಶ್ ಕಾರ್ನಾಡ್ ನಿಧನದ ಹಿನ್ನಲೆಯಲ್ಲಿ ಸ್ವಚ್ಚಮೇವ ಜಯತೆ ಕಾರ್ಯಕ್ರಮ ಸರಳವಾಗಿ ನಡೆಯಿತು. ಸಂಸದೆ ಸುಮಲತಾ ಅವರು ಶಾಲೆ ಆವರಣದಲ್ಲಿ ಗಿಡ ನೆಟ್ಟು ನೀರೆರೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಗಿರೀಶ್ ಕಾರ್ನಾಡ್ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ