ನಕಲಿ ಆರೋಗ್ಯ ಕಾರ್ಡ್‌ ವಿತರಣೆ


Team Udayavani, Apr 29, 2019, 10:56 AM IST

health-card

ಮಂಡ್ಯ: ಜಿಲ್ಲೆಯ ವಿವಿಧೆಡೆ ನಕಲಿ ಆರೋಗ್ಯ ಕಾರ್ಡ್‌ ವಿತರಿಸುವ ದಂಧೆ ದಿನೇದಿನೆ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಮಂಡ್ಯ ತಾಲೂಕಿನ ಶಿವಳ್ಳಿಯಲ್ಲಿ ನಕಲಿ ಆರೋಗ್ಯ ಕಾರ್ಡ್‌ ವಿತರಿಸುವ ಪ್ರಕರಣವೊಂದು ಬೆಳಕಿಗೆ ಬಂದ ಬೆನ್ನಲ್ಲೇ ಭಾನುವಾರ ತಾಲೂಕಿನ ಕಮ್ಮನಾಯಕಹಳ್ಳಿಯಲ್ಲೂ ನಕಲಿ ಆರೋಗ್ಯ ಕಾರ್ಡ್‌ ವಿತರಣೆ ಮಾಡಲು ನಕಲಿ ಏಜೆನ್ಸಿಗಳ ತಂಡವೊಂದು ಮುಂದಾಗಿರುವುದು ಪತ್ತೆಯಾಗಿದೆ.

ನಕಲಿ ಕಾರ್ಡ್‌ ವಿತರಣೆ ಮಾಡುತ್ತಿರುವ ಬಗ್ಗೆ ಪ್ರಶ್ನಿಸಿದ ಗ್ರಾಮದ ವ್ಯಕ್ತಿಯೊಬ್ಬರಿಗೆ ನಕಲಿ ಏಜೆನ್ಸಿಯ ಏಜೆಂಟರು ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಗಮನಕ್ಕೂ ತರಲಾಗಿದೆ. ವಿಷಯ ಬಹಿರಂಗಗೊಳ್ಳುತ್ತಿದ್ದಂತೆ ನಕಲಿ ಏಜೆನ್ಸಿಯವರು ಗ್ರಾಮದಿಂದ ಕಾಲ್ಕಿತ್ತಿದ್ದಾರೆ.

ಘಟನೆ ವಿವಿರ: ಮಂಡ್ಯ ತಾಲೂಕಿನ ಕಮ್ಮನಾಯಕನಹಳ್ಳಿಯಲ್ಲಿ ಭಾನುವಾರ ಸಿಎಸ್‌ಸಿ (ಕನ್ಷ್ಯೊಮರ್‌ ಸರ್ವೀಸ್‌ ಸೆಂಟರ್‌) ಹೆಸರಿನ ಏಜೆನ್ಸಿಯವರೆಂದು ಹೇಳಿಕೊಂಡ ನಕಲಿ ಏಜೆಂಟರು ಗ್ರಾಮಸ್ಥರಿಗೆ ಆರೋಗ್ಯ ಕಾರ್ಡ್‌ ನೀಡುವುದಾಗಿ ಅವರಿಂದ ವಿವರ ಪಡೆದುಕೊಂಡು ಪ್ರತಿ ಕಾರ್ಡ್‌ಗೆ 200 ರೂ. ಪಡೆಯುತ್ತಿದ್ದರು.

ಇದನ್ನು ಗಮನಿಸಿದ ಯೋಗೇಶ್‌, ನೀವು ಯಾವ ಏಜೆನ್ಸಿಯವರು, ಈ ರೀತಿ ಕಾರ್ಡ್‌ ಮಾಡುವುದಕ್ಕೆ ನಿಮಗೆ ಅಧಿಕಾರ ನೀಡಿರುವವರು ಯಾರು? ಪ್ರತಿ ಕಾರ್ಡ್‌ ಕನಿಷ್ಠ 10 ರೂ.ಗಳಿಂದ 35 ರೂ.ವರೆಗೆ ಮಾತ್ರ ಪಡೆದುಕೊಳ್ಳಬೇಕು. ನೀವು ಅಕ್ರಮವಾಗಿ 200 ರೂ. ಪಡೆದುಕೊಳ್ಳುತ್ತಿದ್ದೀರಿ ಏಕೆ? ನಿಮಗೆ ಯಾರು ಪರವಾನಗಿ ನೀಡಿದ್ದಾರೆಂಬ ಅನುಮತಿ ಪತ್ರ ತೋರಿಸಿ ಎಂದು ಪ್ರಶ್ನಿಸಿದ್ದಾರೆ.

ಇದರಿಂದ ತಬ್ಬಿಬ್ಟಾದ ನಕಲಿ ಏಜೆನ್ಸಿ ತಂಡ ನಮಗೆ ಸಿಎಸ್‌ಸಿ ಕಡೆಯಿಂದ ಬಂದಿದ್ದೇವೆ. ನಮಗೆ ಸೇವಾ ಶುಲ್ಕವನ್ನೆಲ್ಲಾ ಸೇರಿಸಿ 200 ರೂ. ಪಡೆಯುತ್ತಿದ್ದೇವೆ. ಇದನ್ನೆಲ್ಲಾ ಪ್ರಶ್ನಿಸಲು ನೀವು ಯಾರು ಎಂದು ಯೋಗೇಶ್‌ ಮೇಲೆ ಮುಗಿಬಿದ್ದು, ಆರೋಗ್ಯ ಕಾರ್ಡ್‌ ಪ್ರಕ್ರಿಯೆ ಮುಂದು ವರಿಸಿದರು.

ಡಿಹೆಚ್ಒಗೆ ದೂರು: ಇದಕ್ಕೆ ಬೆದರದ ಯೋಗೇಶ್‌, ನೋಡಿ, ನೀವು ಈ ರೀತಿ ಮಾಡುತ್ತಿರುವುದು ಸರಿಯಲ್ಲ. ನೀವೆಲ್ಲಾ ಸೇರಿಕೊಂಡು ಜನÃ‌ನ್ನು ವಂಚಿಸುತ್ತಿದ್ದೀರಿ. ನಾನು ಈ ಬಗ್ಗೆ ದೂರು ಕೊಡುತ್ತೇನೆ ಎಂದಾಗ ನಕಲಿ ಏಜೆನ್ಸಿಯವರು ಇವರೊಂದಿಗೆ ಮಾತಿನ ಚಕಮಕಿ ನಡೆಸಿದರು. ಕೊನೆಗೂ ಯೋಗೇಶ್‌ ಈ ವಿಷಯವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಪಿ.ಮಂಚೇಗೌಡರ ಗಮನಕ್ಕೆ ತಂದರು. ಆಗ ಅವರು ಕೂಡಲೇ ಪೊಲೀಸ್‌ಗೆ ದೂರು ಕೊಡಿ. ಮುಂದಿನದನ್ನು ನಾನು ನೋಡಿಕೊಳ್ಳುತ್ತೇನೆ. ನಾವು ಪ್ರತಿ ಕಾರ್ಡ್‌ಗೆ 200 ರೂ. ಪಡೆಯುವಂತೆ ಯಾರಿಗೂ ಅನುಮತಿ ನೀಡಿಲ್ಲ ಎಂದು ಹೇಳಿದರು.

ಕೊನೆಗೆ ಏಜೆಂಟರು ಅಲ್ಲಿಂದ ಹೋದವರು ಮತ್ತಷ್ಟು ಜನರನ್ನು ಕರೆತಂದು ಯೋಗೇಶ್‌ ನಿವಾಸದ ಎದುರು ಗಲಾಟೆ ಮಾಡಲು ಮುಂದಾದರು. ದೂರವಾಣಿ ಮೂಲಕ ಕರೆ ಮಾಡಿದ ವ್ಯಕ್ತಿಯೊಬ್ಬರು ನಾನು ಚೀರನಹಳ್ಳಿ ಶಂಕರ್‌ ಬಾವಮೈದ. ಇದನ್ನೆಲ್ಲಾ ಕೇಳ್ಳೋಕೆ ನೀನ್ಯಾರು ಎಂದೆಲ್ಲಾ ಬೆದರಿಕೆ ಹಾಕಿದ್ದಾರೆ. ಕೊನೆಗೆ ಎಲ್ಲರೂ ಅಲ್ಲಿಂದ ತೆರಳಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.