10ರಿಂದ ಧ್ವನಿ ಬೆಳಕು ಕಾರ್ಯಕ್ರಮ: ಡೀಸಿ
Team Udayavani, Oct 7, 2019, 3:28 PM IST
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಇತಿಹಾಸ ಬಿಂಬಿಸುವ ಧ್ವನಿ-ಬೆಳಕು ಕಾರ್ಯಕ್ರಮ ಅ.10ರಿಂದ ಪ್ರತಿನಿತ್ಯ ಸಂಜೆ 7ರಿಂದ 7.40ರ ವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಹೇಳಿದರು.
ಪಟ್ಟಣದಲ್ಲಿ ಧ್ವನಿ-ಬೆಳಕು ಕಾರ್ಯಕ್ರಮ ಪುನರ್ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅ.10ರಿಂದ ಪ್ರತಿನಿತ್ಯ 7 ರಿಂದ 7.40ರ ವರೆಗೆ ಕಾರ್ಯಕ್ರಮ ಆರಂಭಗೊಳ್ಳಲಿದೆ. ದೇಶದ ಇತಿಹಾಸ ದಲ್ಲೇ ಮೊದಲ ಧ್ವನಿ-ಬೆಳಕು ಕಾರ್ಯ ಕ್ರಮ ಇದಾಗಿದೆ. ಸ್ಥಳೀಯ, ರಾಜ್ಯ, ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಸೆಳೆ ಯುವ ಉದ್ದೇಶದಿಂದ ಪ್ರತಿನಿತ್ಯ ಕಾರ್ಯ ಕ್ರಮ ಆಯೋಜಿಸಲಾಗುವುದು ಎಂದರು.
ಶ್ರೀರಂಗಪಟ್ಟಣದ ಗತವೈಭವ, ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜೊತೆಗೆ ಶ್ರೀರಂಗಪಟ್ಟಣ ಇತಿಹಾಸ ವೈಭವ ಮರುಕಳಿಸುವ ನವರಾತ್ರಿ ವೈಭವವನ್ನೂ ನಿರಂತರವಾಗಿ ನಡೆಸಲು ನಿರ್ಧರಿಸಲಾಗಿದೆ. ಪ್ರಥಮವಾಗಿ ಕನ್ನಡದಲ್ಲಿ ಕಾರ್ಯಕ್ರಮ ಪ್ರದರ್ಶನ ನಡೆಯಲಿದೆ. ಬಳಿಕ
ಆಂಗ್ಲ ಭಾಷೆಯಲ್ಲೂ ಧ್ವನಿ-ಬೆಳಕು ಕಾರ್ಯಕ್ರಮ ಪ್ರದರ್ಶನ ನಡೆಸುವ ಚಿಂತನೆ ಹೊಂದಿದ್ದೇವೆಂದರು. ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ, ಕಾರ್ಯಕ್ರಮದ ಆಯೋಜಕ ಕೃಷ್ಣ ಕುಮಾರ್, ನಿರ್ದೇಶಕ ವಾಸು ದೀಕ್ಷಿತ್, ನಟ ಅರ್ಜುನ್, ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಎಂ.ಕೆ. ರಾಮಕೃಷ್ಣ, ಜಿಪಂ ಸಿಇಒ ಯಾಲಕ್ಕಿಗೌಡ , ಉಪವಿಭಾಗಾಧಿಕಾರಿ ಶೈಲಜಾ, ಪ್ರವಾಸೊದ್ಯಮ ಇಲಾಖೆ ಹರೀಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ