ವಂಶ ರಾಜಕಾರಣ ಜಗತ್ತಿನ ಎಲ್ಲ ದೇಶಗಳಲ್ಲಿದೆ


Team Udayavani, Apr 16, 2019, 4:54 PM IST

man-1
ಕೆ.ಆರ್‌.ಪೇಟೆ: ಭಾರತದಲ್ಲಿ ತಾತನ ಜೊತೆ ಮೊಮ್ಮಕ್ಕಳು ಪಾರ್ಲಿಮೆಂಟ್‌ಗೆ ಹೋಗುವುದು ಹೆಮ್ಮೆ. ಅದರಲ್ಲಿ ತಪ್ಪೇನಿದೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಿ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ವಿಶ್ವನಾಥ್‌ ಕುಟುಂಬ ರಾಜಕಾರಣವನ್ನು ಸಮರ್ಥಿಸಿಕೊಂಡರು.
ಪಟ್ಟಣದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿಕೂಟದ ಅಭ್ಯರ್ಥಿ ನಿಖೀಲ್‌ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿ, ಬಹಳ ಜನ ವಂಶ ರಾಜಕಾರಣ ಎಂದು ಜೆಡಿಎಸ್‌ನ್ನು ಟೀಕಿಸುತ್ತಿದ್ದು, ವಂಶ ರಾಜಕಾರಣ ಜಗತ್ತಿನ ಎಲ್ಲ ದೇಶದಲ್ಲಿಯೂ ಇದೆ. ಅಲೆನಿಯಾ ದೇಶದಲ್ಲಿ 50 ವರ್ಷದಿಂದ ಒಂದೇ ಕುಟುಂಬ ಆಡಳಿತ ನಡೆಸುತ್ತಿದೆ. ಲಾಲೂಪ್ರಸಾದ್‌ ಯಾದವ್‌, ಕರುಣಾನಿಧಿ ಸೇರಿದಂತೆ ಹಲವರು ವಂಶರಾಜಕಾರಣ ಮಾಡುತ್ತಿದ್ದಾರೆ. ಪ್ರಜ್ವಲ್‌, ನಿಖೀಲ್‌ ಹಾಗೂ ದೇವೇಗೌಡರು ಚುನಾವಣೆಯಲ್ಲಿ ಗೆಲ್ಲುವುದು ಖಚಿತ ಎಂದು ಭವಿಷ್ಯ ನುಡಿದರು.
ಸುಮಲತಾ ಬಿಜೆಪಿ ಅಭ್ಯರ್ಥಿ: ಭಾರತದಲ್ಲಿ ಎರಡು ತತ್ವಗಳ ನಡುವೆ ಸಂಘರ್ಷ ನಡೆಯುತ್ತಿದ್ದು, ನಕಲಿ ರಾಷ್ಟ್ರವಾದಿಗಳು ಹಾಗೂ ಬಹುತ್ವವಾದಿಗಳ ತತ್ವದಲ್ಲಿ ಚುನಾವಣೆ ನಡೆಯುತ್ತಿದೆ ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದರೆ ದೇಶಪ್ರೇಮಿಗಳು, ತೆಗಳಿದರೆ ದ್ರೋಹಿಗಳು ಎಂಬಂತಾಗಿದೆ. ಬಿಜೆಪಿಯವರು ಮಂಡ್ಯ ಬಜೆಟ್‌ ಅಂದರು. ಇವತ್ತು ಹಿಮ್ಮೇಳದಿಂದ ಸುಮಲತಾ ಅವರನ್ನು ಬಿಟ್ಟಿದ್ದಾರೆ. ಸುಮಲತಾ ಸ್ವತಂತ್ರ ಅಭ್ಯರ್ಥಿಯಲ್ಲ, ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಎಂದರು. ಕರ್ನಾಟಕಕ್ಕೆ ಏನು ಕೊಟ್ರಿ ಮೋದಿ. ಕುಮಾರಸ್ವಾಮಿ ಸರ್ಕಾರ ಬಂದ ನಂತರ ಕರ್ನಾಟಕಕ್ಕೆ ನರೇಗಾದಲ್ಲಿ ಹಣ ಬಿಡುಗಡೆಯಾಗಿಲ್ಲ. ಉದ್ಯೋಗ ಕೊಡುತ್ತೀನಿ ಎಂದು ಹೇಳಿ ಉದ್ಯೋಗ ಕಿತ್ತುಕೊಳ್ಳುತ್ತಿದ್ದೀರಿ ಎಂದು ಟೀಕಿಸಿದರು.
ಅಂಬಿ ಬಿಜೆಪಿಗೆ ಕೈ ಜೋಡಿಸಿರಲಿಲ್ಲ: ಅಂಬರೀಶ್‌- ಕುಮಾರಸ್ವಾಮಿ ಕುಟುಂಬ ಎಷ್ಟು ಚೆನ್ನಾಗಿತ್ತು. ಅವರು ಅಗಲಿದ ಸಮಯದಲ್ಲಿ ಮುಖ್ಯಮಂತ್ರಿಗಳು ಬಹಳ ಗೌರವಯುತವಾಗಿ ಕಳುಹಿಸಿಕೊಟ್ಟರು. ಅಂಬರೀಶ್‌ ಸಮಾಧಿಗೆ ವರನಟ ಡಾ.ರಾಜ್‌ ಕುಮಾರ್‌ ಸಮಾಧಿ ಪಕ್ಕದಲ್ಲೇ ಜಾಗ ಮಾಡಿಕೊಟ್ಟರು. ಆದರೆ, ಇವತ್ತು ಕೆಲವರು ಸೇರಿಕೊಂಡು ಎರಡು ಕುಟುಂಬದ ನಡುವೆ ವಿಷ ಬೀಜ ಬಿತ್ತಿದರು. ಆ ವಿಷಬೀಜ ಬಿತ್ತಿದ್ದು ಯಾರೆಂದು ನಿಮಗೆಲ್ಲರಿಗೂ ಗೊತ್ತು ಎಂದು ಪರೋಕ್ಷವಾಗಿ ಬಿಜೆಪಿಯನ್ನು ಟೀಕಿಸಿದರು. ಅಂಬರೀಶ್‌ ಎಂದೂ ಕೋಮುವಾದಿ ಬಿಜೆಪಿ ಜೊತೆ ಕೈಜೋಡಿಸಿರಲಿಲ್ಲ. ಆದರೆ, ಇಂದು ಅಂಬಿ ಕುಟುಂಬ ಕೋಮುವಾದಿಗಳ ಜೊತೆ ಕೈಜೋಡಿಸಿದ್ದಾರೆ. ಅಂತಹ ಸನ್ನಿವೇಶವನ್ನು ಕೆಲವು ಕುಹಕಿಗಳು ಮಾಡಿಬಿಟ್ಟರು. ಅಂಬರೀಶ್‌ ಕುಟುಂಬ ಬಿಜೆಪಿಗೆ ಶರಣಾಗಿದ್ದನ್ನು ಯಾರೂ ಕ್ಷಮಿಸುವ ಹಾಗಿಲ್ಲ ಎಂದರು.
ಮತ್ತೆ ಭಾರತದಲ್ಲಿ ಮೈತ್ರಿ ಪಕ್ಷ ಬರುತ್ತೆ ಎನ್ನಲಾಗುತ್ತಿದೆ. ಹಾಗೇನಾದರೂ ಮೈತ್ರಿ ಪಕ್ಷ ಅಧಿಕಾರಕ್ಕೆ ಬಂದರೆ ದೇವೇಗೌಡರಿಗೆ ಪ್ರಧಾನಿಯಾಗುವ ಅವಕಾಶವಿದೆ. ಎಲ್ಲಾ ಪ್ರಾಂತೀಯ ಪಕ್ಷಗಳು ರಾಷ್ಟ್ರದಲ್ಲಿ ಸರ್ಕಾರ ರಚನೆ ಮಾಡುವ ಅನಿವಾರ್ಯತೆ ಬಂದಿದ್ದು, ಈ ಅನಿವಾರ್ಯತೆಯಲ್ಲಿ ದೇವೇಗೌಡರು ಪ್ರಧಾನಿಯಾಗುವುದನ್ನು ಯಾರೂ ಇಲ್ಲ ಎನ್ನಲಾಗುವುದಿಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.