ಬಿಲ್‌ ಪಾವತಿಸದ ಕಚೇರಿಗಳಿಗೆ ವಿದ್ಯುತ್‌ ಕಟ್‌


Team Udayavani, Jan 3, 2020, 12:29 PM IST

mandya-tdy-1

ನಾಗಮಂಗಲ: ಒಂದು ವರ್ಷದಿಂದ ಬಿಲ್‌ ಪಾವತಿಸಲಿಲ್ಲವೆಂದು ಮಿನಿ ವಿಧಾನಸೌಧದ ಕಟ್ಟಡದಲ್ಲಿರುವ ಕಂದಾಯ, ಆಹಾರ ಇಲಾಖೆ ಕಚೇರಿಗಳಿಗೆ ಸ್ಥಳೀಯ ಸೆಸ್ಕ್ ವಿದ್ಯುತ್‌ ಕಡಿತಗೊಂಡು ನೌಕರರ ಜೊತೆಗೆ ಸಾರ್ವಜನಿಕರು ಪರದಾಡುವಂತಾಯಿತು.

ಮಿನಿ ವಿಧಾನಸೌದದ ಮೂರನೇ ಮಹಡಿಯಲ್ಲಿನ ಕೊಠಡಿ ಸಂಖ್ಯೆ: 207, 208, 209 ಮತ್ತು ಆಹಾರ ಇಲಾಖೆ ಕಚೇರಿಗಳಲ್ಲಿ ವಿದ್ಯುತ್‌ ಕಡಿತಗೊಂಡಿದ್ದು, ಗಣಕ ಯಂತ್ರಗಳ ಮುಂದೆ ಕೆಲ ನೌಕರರು ಸುಮ್ಮನೆ ಕುಳಿತಿದ್ದರೆ, ಇನ್ನೂ ಕೆಲವರು ಕಾರಿಡಾರಿನಲ್ಲಿ ಓಡಾಡು ತ್ತಿದ್ದರು. ಆಹಾರ ಇಲಾಖೆ ನೌಕರರು, ಬರುವ ಸಾರ್ವಜನಿಕರಿಗೆ ಉತ್ತರ ನೀಡಬೇಕೆಂದು ಲ್ಯಾಪ್‌ಟಾಪ್‌ ಹಿಡಿದು ಖಾಸಗಿ ಸೈಬರ್‌ ಸೆಂಟರ್‌ಗಳಿಗೆ ಮೊರೆ ಹೋಗಿದ್ದರು.

ಘಟನೆ ಹಿನ್ನೆಲೆ: ಈ ಮೊದಲು ಕಂದಾಯ ಇಲಾಖೆ ಅಧೀನದಲ್ಲಿರುವ ಆಹಾರ ಇಲಾಖೆ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು 2017ರಲ್ಲಿ ತನ್ನ ಕಾರ್ಯ ಬೇರೊಂದು ಕೋಣೆಗೆ ವರ್ಗಾಯಿಸಿಕೊಂಡಿದ್ದು ಮೇಲಿನ ಕೋಣೆಗಳಲ್ಲಿ ಆರ್‌ ಆರ್‌ಟಿ ಮತ್ತು ಸರ್ವೆ ಇಲಾಖೆ ಕಾರ್ಯ ನಿರ್ವಹಿಸುತ್ತಿರುವುದರಿಂದ ಅಂದಿನಿಂದ ಇಂದಿನವರೆಗೆ ಬರೋಬ್ಬರಿ 61 ಸಾವಿರ ರೂ.ಗಳಿಗೂ ಹೆಚ್ಚಿನ ಹಣ ಬಾಕಿ ಉಳಿಸಿಕೊಂಡಿದೆ. ವಿಶೇಷವೆಂದರೇ ಆ ಬಿಲ್‌ ಬರುತ್ತಿರುವುದು ಕಂದಾಯ ಇಲಾಖೆ ಹೆಸರಿನಲ್ಲಿ,ಅವರು ಕಟ್ಟಲಿ ಎಂದು ಇವರು, ಇವರು ಕಟ್ಟಲಿ ಎಂದು ಯಾವ ಇಲಾಖೆ  ಯವರೂ ಬಿಲ್‌ ಕಟ್ಟಿಲ್ಲವೆನ್ನಲಾಗಿದೆ. ವಿದ್ಯುತ್‌ ಕಡಿತಗೊಳಿಸಿರುವುದು ಇದೇ ಮೊದಲೇನಲ್ಲ. ಈಗಾಗಲೇ ಎರಡು ಬಾರಿ ಈ ಮೂರು ಕೋಣೆಗಳ ವಿದ್ಯುತ್‌ ಕಡಿತಗೊಳಿಸಿದ್ದು, ವಿಷಯ ಶಾಸಕ ಸುರೇಶ್‌ ಗೌಡರ ಬಳಿಗೂ ಹೋಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಸೆಸ್ಕ್ ಅಧಿಕಾರಿಗಳಿಗೆ ಹೇಳಿ ಕಡಿತಗೊಳಿಸದಂತೇ ತಡೆ ಹಿಡಿದಿದ್ದರು. ಆದರೇ ಈಗ ಮತ್ತೆ ಪುನರಾವರ್ತನೆಯಾಗಿದೆ.

ಕಂದಾಯ ಅಧಿಕಾರಿಗಳನ್ನು ಕೇಳಿದರೆ ಶ್ರೀರಂಗ ಪಟ್ಟಣದಲ್ಲೂ ಹೆಚ್ಚುವರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಲ್ಲಿನ ಸಮಸ್ಯೆಗಳ ಬಗ್ಗೆ ಗಮನಹರಿಸಲಾಗುತ್ತಿಲ್ಲ. ವಿದ್ಯುತ್‌ ಕಡಿತದಿಂದ ಮೂರು ಇಲಾಖೆ ಗಣಕ ಯಂತ್ರಗಳು ಕೆಲಸವಿಲ್ಲದೆ ಸ್ಥಗಿತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಯಿತು. ಪಡಿತರ ಚೀಟಿ ಪಡೆಯಲೆಂದು ಮತ್ತು ಅದರ ಮಾಹಿತಿ ಕೇಳಲು ಬರುವವರಿಗೆ ಉತ್ತರ ನೀಡಲಾಗದೆ ಆಹಾರ ನಿರೀಕ್ಷಕರು ಖಾಸಗಿ ಸೈಬರ್‌ ಕೇಂದ್ರಗಳತ್ತ ಮುಖ ಮಾಡಿ ನಾಮಕಾವಸ್ಥೆಗೆ ಬಂದ ಅರ್ಜಿಗಳನ್ನು ಪಡೆದುಕೊಳ್ಳಲು ಒಬ್ಬರನ್ನು ಕೂರಿಸಿದ್ದರು. ಆರ್‌ಆರ್‌ಟಿ ಮತ್ತು ಸರ್ವೆ ಇಲಾಖೆ ನೌಕರರು ಬಂದವರಿಗೆ ಉತ್ತರ ನೀಡಲಾಗದೆ ಪರದಾಡುತ್ತಿದ್ದುದು ಕಂಡು ಬಂದಿತು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

Mandya Lok Sabha Constituency; ಸ್ಟಾರ್‌ ಚಂದ್ರು ಪರ ಇಂದು ನಟ ದರ್ಶನ್‌ ಪ್ರಚಾರ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.