ಇಒ-ಸದಸ್ಯರ ತಿಕ್ಕಾಟಕ್ಕೆ ಮೂರು ಸಭೆ ಬಲಿ

ಸಮನ್ವಯ ಕೊರತೆಯಿಂದ ಸಾರ್ವಜನಿಕ ಕೆಲಸಗಳು ಸ್ಥಗಿತ ! ಇಒ ವರ್ಗಾವಣೆಗೆ ಸದಸ್ಯರ ಪಟ್ಟು 

Team Udayavani, Feb 7, 2021, 3:01 PM IST

eo

ಮಂಡ್ಯ: ತಾಪಂ ವ್ಯವಸ್ಥೆ ರದ್ದುಪಡಿಸುವ ಶಿಫಾರಸ್ಸು ಮಾಡಿರುವ ಹೊತ್ತಲ್ಲೇ ಮಂಡ್ಯ ತಾಪಂನಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸದಸ್ಯರ ನಡುವಿನ ತಿಕ್ಕಾಟಕ್ಕೆ ಮೂರು ಸಾಮಾನ್ಯ ಸಭೆಗಳು ಬಲಿಯಾಗಿವೆ.

ಕಳೆದ 6 ತಿಂಗಳಿನಿಂದ ಒಂದೂ ಸಭೆಯೂ ನಡೆದಿಲ್ಲ.ಕಳೆದ ಬಾರಿ ನಡೆದ ಸಭೆಯಲ್ಲಿ ಶಾಸಕ  ಎಂ.ಶ್ರೀನಿವಾಸ್‌ ಅವರ ಎದುರೇ ತಾಪಂ ಇಒ ಎಂ.ಗಂಗಣ್ಣ ವಿರುದ್ಧ ಸದಸ್ಯರು ದೂರುಗಳ ಸುರಿಮಳೆಗೈದು ಸಭೆ ಮುಂದೂಡಿದ್ದರು. ಈಗ ಶನಿವಾರ ನಡೆಯಬೇಕಿದ್ದ ಸಭೆಯನ್ನೂ ಮುಂದೂಡಲಾಗಿದೆ. ಇದರಿಂದ ತಾಪಂನಲ್ಲಿ ನಡೆಯಬೇಕಿದ್ದ ಯೋಜನೆ, ಅಭಿವೃದ್ಧಿ ಕಾರ್ಯ ಕುಂಠಿತಗೊಳ್ಳುವಂತಾಗಿದೆ. ತಾಪಂ ಇಒ ಮೇಲೆ ಸದಸ್ಯರ ಆರೋಪ: ತಾಪಂ ಇಒ ಎಂ.ಗಂಗಣ್ಣ ವಿರುದ್ಧ ಸದಸ್ಯರು ಆರೋಪ ಮಾಡುತ್ತಿದ್ದಾರೆ.

ಯಾವುದೇ ಸಾರ್ವಜನಿಕ ಕೆಲಸಗಳಿಗೆ ಸ್ಪಂದಿಸುತ್ತಿಲ್ಲ. ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿಲ್ಲ. ಸರ್ವಾಧಿಕಾರಿ ಧೋರಣೆ ತಾಳುತ್ತಿದ್ದಾರೆ. ಇದುವರೆಗೂ ಯಾವೊಬ್ಬ ಸದಸ್ಯರನ್ನು ಕರೆದು ಮಾತನಾಡಿಸುವ ಸೌಜನ್ಯವಿಲ್ಲ. ನಮ್ಮ ಕ್ಷೇತ್ರಗಳ ಯೋಜನೆಗಳನ್ನು ನಮ್ಮ ಗಮನಕ್ಕೆ ತರದೆ ನೇರವಾಗಿ ಅವರೇ ಮಾಡುತ್ತಿದ್ದಾರೆ. ಇದರಿಂದ ಕ್ಷೇತ್ರದ ಜನರಿಗೆ ಉತ್ತರ ಹೇಳಲು ಸಾಧ್ಯವಾಗುತ್ತಿಲ್ಲ ಎಂದು ಸದಸ್ಯರು ಆರೋಪಿಸುತ್ತಿದ್ದಾರೆ.

ಸಮನ್ವಯದ ಕೊರತೆ: ತಾಪಂ ಆಡಳಿತದಲ್ಲಿ ಸಮನ್ವಯ ಕೊರತೆ ಉಂಟಾಗಿದೆ. ಇಒ ಹಾಗೂ ಸದಸ್ಯರ ನಡುವಿನ ಭಿನ್ನಾಭಿಪ್ರಾಯಗಳಿಂದ ಅಭಿವೃದ್ಧಿ ಕೆಲಸ ಕುಂಠಿತಗೊಂಡಿವೆ. ಕಳೆದ 6 ತಿಂಗಳಿನಿಂದ ಸರಿಯಾಗಿ ಕೆಲಸಗಳು ಆಗುತ್ತಿಲ್ಲ. 2 ಸಭೆಗಳು ಯಾವುದೇ ಅಭಿವೃದ್ಧಿ ಚರ್ಚೆಯಾಗದೆ ಆರೋಪ- ಪ್ರತ್ಯಾರೋಪಗಳಲ್ಲೇ ಮುಂದೂಡಿಯಾಗಿತ್ತು.

 ಇದನ್ನೂ ಓದಿ :ಕೃಷಿ ಕಾಯ್ದೆ ವಾಪಸ್‌ಗೆ ಹೆದ್ದಾರಿ ತಡೆ

ಜಿಪಂ ಹಾದಿಯಲ್ಲಿ ತಾಪಂ?: ಜಿಪಂನಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ನಡುವಿನ ಪ್ರತಿಷ್ಠೆಯ ರಾಜಕಾರಣಕ್ಕೆ ಈಗಾಗಲೇ ಜಿಪಂ ಆಡಳಿತ ಸಂಪೂರ್ಣವಾಗಿ ವಿಫಲವಾಗಿದೆ. ಅಧ್ಯಕ್ಷರನ್ನು ಸ್ಥಾನದಿಂದ ಕೆಳಗಿಳಿಸಲು ಸ್ವಪಕ್ಷದ ಸದಸ್ಯರು ಪಟ್ಟು ಹಿಡಿದಿದ್ದಾರೆ. ಇತ್ತ ಅಧ್ಯಕ್ಷರು ರಾಜೀನಾಮೆ  ನೀಡದಿರುವುದರಿಂದ ಯಾವುದೇ ಯೋಜನೆಗಳಿಗೆ ಅನುಮೋದನೆ ಸಿಕ್ಕಿರಲಿಲ್ಲ. ಇದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ಅನುದಾನದ ಕ್ರಿಯಾಯೋಜನೆಗೆ ಅನುಮೋದನೆ ನೀಡಿತ್ತು. ಇದಕ್ಕೆ ಜೆಡಿಎಸ್‌ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ತಾಪಂನಲ್ಲೂ ಅಧಿಕಾರಿ ಹಾಗೂ ಸದಸ್ಯರ ನಡುವಿನ ಗುದ್ದಾಟಕ್ಕೆ ಸಭೆಗಳು ನಡೆಯುತ್ತಿಲ್ಲ. ಇದರಿಂದ ಕಳೆದ 6 ತಿಂಗಳಿನಿಂದ ಆಡಳಿತ ಯಂತ್ರ ಕುಸಿದಿದೆ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.