![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಮಕ್ಕಳಲ್ಲಿ ನೈತಿಕ ಮೌಲ್ಯ ಬೆಳೆಸಲು ಇಒ ಸಲಹೆ
ಸರ್ಕಾರವೇ ಆಯೋಜಿಸುತ್ತಿರುವ ಬೇಸಿಗೆ ಶಿಬಿರಗಳಿಗೆ ಮಕ್ಕಳನ್ನು ಸೇರಿಸಿ • ಮಕ್ಕಳ ಪ್ರತಿಭೆಗೆ ಶಿಬಿರಗಳು ಉತ್ತಮ ವೇದಿಕೆ
Team Udayavani, May 5, 2019, 12:35 PM IST
![mandya-tdy-5..](https://www.udayavani.com/wp-content/uploads/2019/05/mandya-tdy-5..-620x412.jpg)
ಪಾಂಡವಪುರ: ಭವಿಷ್ಯದ ದೃಷ್ಟಿಯಿಂದ ಪೋಷಕರು ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಅಗತ್ಯ ಎಂದು ತಾಪಂ ಇಒ ಮುನಿರಾಜು ಹೇಳಿದರು.
ಪಟ್ಟಣದ ಕೃಷ್ಣಾನಗರದಲ್ಲಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಮಗಳೂರಿನ ಬಾಲ ಭವನ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಆಯೋಜಿ ಸಿದ್ದ ‘ಮಕ್ಕಳ ಬೇಸಿಗೆ ಶಿಬಿರ-2019 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸತ್ಪ್ರಜೆ ಗಳಾಗಿ ರೂಪಿಸಿ: ಮಕ್ಕಳದ್ದು ಮುಗ್ದ ಮನಸ್ಸು. ಬೆಳೆಯುವ ಪೈರು ಮೊಳಕೆಯಲ್ಲಿ ಎನ್ನುವಂತೆ ಮಕ್ಕಳಿಗೆ ಒಳ್ಳೆಯದನ್ನು ಕಲಿಸಿದರೆ ಮುಂದೆ ಉತ್ತಮ ಪ್ರಜೆಗಳಾಗುತ್ತಾರೆ. ಇಲ್ಲದಿದ್ದರೆ ಮಕ್ಕಳು ಕೆಟ್ಟ ಹಾದಿ ತುಳಿಯುವರು. ಹೀಗಾಗಿ ಬೇಸಿಗೆ ರಜೆಗಳಲ್ಲಿ ಅವರನ್ನು ಮನೆಯಲ್ಲಿ ಹಿಡಿದಿಟ್ಟುಕೊಳ್ಳುವುದು ದುಸ್ಸಾಹಸವೇ ಸರಿ. ಜತೆಗೆ ಮಕ್ಕಳು ಚಿಕ್ಕ ವಯಸ್ಸಿನಲ್ಲಿ ಕಲಿತದನ್ನು ದೊಡ್ಡವರಾದರೂ ಬಿಡುವುದಿಲ್ಲ. ಆದ್ದರಿಂದ ಅವರನ್ನು ಬಾಲ್ಯದಲ್ಲಿ ತಿದ್ದಿ ಬೆಳೆಸಿದರೆ ಮುಂದೆ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವ ಜತೆಗೆ ಸತ್ಪ್ರಜೆ ಗಳಾಗುತ್ತಾರೆ. ಜತೆಗೆ ಪೋಷಕರು ಮಕ್ಕಳಿಗೆ ಮೊಬೈಲ್ ನೀಡದೆ ಅವರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಶಿಬಿರಗಳಲ್ಲಿ ಸೇರಿಸಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪಾಂಡವಪುರ ಮೇಲ್ವಿಚಾರಕಿ ಭಾಗ್ಯಮ್ಮ ಮಾತನಾಡಿ, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳ ಅನಾವರಣಕ್ಕೆ ಇಂತಹ ಬೇಸಿಗೆ ಶಿಬಿರಗಳು ಪೂರಕವಾಗಿವೆ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಬೇಸಿಗೆ ಶಿಬಿರಗಳಲ್ಲಿ ಸೇರಿಸಬೇಕು. ಶಿಬಿರಗಳಲ್ಲಿ ಮಕ್ಕಳಲ್ಲಿ ಕ್ರಿಯಾತ್ಮಕ ಚಟುವಟಿಕೆಗಳ ಅನಾವರಣಕ್ಕೆ ಉತ್ತಮ ಅವಕಾಶಗಳು ದೊರೆಯುತ್ತವೆ. ಹಾಗೆಂದು ದುಬಾರಿ ಶುಲ್ಕ ತೆತ್ತು, ಅದಕ್ಕೂ ಒಂದು ಸಾಲ ಮಾಡಬೇಕಿಲ್ಲ. ಬದಲಾಗಿ ಸರ್ಕಾರವೇ ಮಕ್ಕಳಿಗೆ ಬೇಸಿಗೆ ಶಿಬಿ ರಗಳನ್ನೂ ಆಯೋಜಿಸುತ್ತಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಝಕೀಯಾಭಾನು, ಸಿಬ್ಬಂದಿಗಳಾದ ಅನುಪಮಾ, ರೇವತಿ, ಪ್ರವೀಣ್, ಕಾರ್ತೀಕ್, ಅಂಗನವಾಡಿ ಕಾರ್ಯಕರ್ತೆಯರಾದ ಭಾರತಿ ಕುಮಾರ್, ಮೇರಿ, ಸಂಪನ್ಮೂಲ ವ್ಯಕ್ತಿಗಳಾದ ನೃತ್ಯ ಶಿಕ್ಷಕ ದರಸಗುಪ್ಪೆ ಮುರಳಿ, ಸೌಮ್ಯ, ಅರ್ಪಿತಾ ಇತರರಿದ್ದರು. ಶಿಬಿರದಲ್ಲಿ 50ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.