ಚುನಾವಣೆ ಮುಗಿದರೂ ಚರ್ಚೆಗಳ ಕಾವು ನಿಂತಿಲ್ಲ

ಅಂಗಡಿ, ಹೋಟೆಲ್ಗಳಲ್ಲಿಯೂ ಸೋಲು-ಗೆಲುವಿನದ್ದೇ ಲೆಕ್ಕಾಚಾರ

Team Udayavani, Apr 23, 2019, 4:03 PM IST

mandya 2

ಶ್ರೀರಂಗಪಟ್ಟಣ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲೋಕಸಭಾ ಚುನಾವಣೆ ಮುಗಿದು ಇನ್ನು ಫ‌ಲಿತಾಂಶಕ್ಕೆ ತಿಂಗಳು ಬಾಕಿ ಇದ್ದರೂ ಚುನಾವಣೆ ಚರ್ಚೆಗಳ ಕಾವು ಮಾತ್ರ ನಿಂತಿಲ್ಲ. ಮಳೆ ಬಂದು ನಿಂತರೂ ಮರದ ಹನಿ ನಿಂತಿಲ್ಲ ಎಂಬ ಗಾದೆಯಂತೆ ಮಂಡ್ಯ ಕ್ಷೇತ್ರದ ಲೋಕಸಭಾ ಚುನಾವಣೆ ಸಾಕ್ಷಿಯಾಗಿದೆ.

ಇತ್ತೀಚೆಗೆ ಮುಗಿದ ಲೋಕಸಭಾ ಚುನಾವಣೆ ಮತಪೆಟ್ಟಿಗೆಗಳು ಸ್ಟ್ರಾಂಗ್‌ ರೂಂನಲ್ಲಿ ಭದ್ರವಾಗಿ ಅಡಗಿ ಕುಳಿತಿವೆ. ಮಂಡ್ಯ ಕ್ಷೇತ್ರ ದೇಶದ ಗಮನ ಸೆಳೆದ ಕ್ಷೇತ್ರವಾಗಿದೆ. ಸಿನಿ ಸ್ಟಾರ್‌ ಹಾಗೂ ಮುಖ್ಯಮಂತ್ರಿಗಳ ಪುತ್ರರ ಸ್ಪರ್ಧೆಯಿಂದ ಜಿದ್ದಾಜಿದ್ದಿನ ಚುನಾವಣಾ ಕಣವಾಗಿ ಮಾರ್ಪಟ್ಟಿತ್ತು. ಜೊತೆಗೆ ಗ್ರಾಮಗಳಲ್ಲಿ ಇದುವರೆಗೂ ಯಾವ ಚುನಾವಣೆಯಲ್ಲೂ ನಡೆಯದಷ್ಟು ಅಬ್ಬರದ ಪ್ರಚಾರ, ರೋಡ್‌ ಶೋಗಳು ಈ ಚುನಾವಣೆಯಲ್ಲಿ ನಡೆಯಿತೆಂದೇ ಹೇಳಬಹುದು.

ಬೆಂಗಲಿಗರ ಲೆಕ್ಕಾಚಾರ: ಇದೀಗ ಅಭ್ಯರ್ಥಿಗಳ ಬೆಂಬಲಿಗರು ತಮ್ಮ ತಮ್ಮ ಗ್ರಾಮಗಳಲ್ಲಿ ನಡೆದ ಮತಗಳ ಕುರಿತು ಲೆಕ್ಕಾಚಾರ, ಅಭ್ಯರ್ಥಿಗಳು ಸೋಲು-ಗೆಲುವಿನ ಬಿಸಿ ಬಿಸಿ ಚರ್ಚೆಗಳು ಸಾರ್ವಜನಿಕ ವಲಯಗಳಾದ ಹೋಟೆಲ್, ಟೀ ಅಂಗಡಿಗಳ ಮುಂದೆ ನಡೆಯುತ್ತಿವೆ. ಮೈತ್ರಿಕೂಟ ಅಭ್ಯರ್ಥಿ ನಿಖೀಲ್ ಕುಮಾರಸ್ವಾಮಿ ಬೆಂಬಲಿಗರು ಒಂದು ಕಡೆ ಕುಳಿತು ಚರ್ಚೆ ಮಾಡಿ ನಿಖೀಲ್ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತ ಪಡೆದು ಸಂಸದರಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿಕೊಳ್ಳುವುದು ಒಂದು ಕಡೆಯಾದರೆ, ಮತ್ತೂಂದೆಡೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ ಬೆಂಬಲಿಗರು ಕುಳಿತು ಸುಮಲತಾ ಅವರೇ ಹೆಚ್ಚು ಮತಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆಂದು ಹೇಳಿಕೊಳ್ಳುವುದು ಸಾಮಾನ್ಯವಾಗಿದೆ.

ಸ್ವಾಭಿಮಾನಿಗಳ ಮತ: ಹಣಬಲ, ಜನಬಲ, ಅನುಕಂಪ, ಜಿಲ್ಲೆಯ ಅಭಿವೃದ್ಧಿ ಕುರಿತಾಗಿ ಈಗೆ ಚರ್ಚೆಗಳು ನಡೆದು ಮೈತ್ರಿಕೂಟದ ಅಭ್ಯರ್ಥಿ ಪರ ಮುಖ್ಯಮಂತ್ರಿಗಳು, ಜೆಡಿಎಸ್‌ ಶಾಸಕರು, ಕಾರ್ಯಕರ್ತರ ಒಲವು ಹಾಗೂ ಪಕ್ಷೇತರ ಅಭ್ಯರ್ಥಿ ಪರ ರೆಬಲ್ಸ್ಟಾರ್‌ ಅಂಬರೀಶ್‌ ಅಭಿಮಾನಿಗಳು, ನಟರಾದ ದರ್ಶನ್‌ ಹಾಗೂ ಯಶ್‌ ಹಾಗೂ ಅಂಬರೀಶ್‌ ಅಭಿಮಾನಿಗಳು ಒಂದೆಡೆ ಸೇರಿ ಸ್ವಾಭಿಮಾನಿಗಳ ಮತಗಳ ಲೆಕ್ಕಾಚಾರದಲ್ಲಿ ಸೋಲು ಗೆಲವುಗಳ ಲೆಕ್ಕಾಚಾದಲ್ಲಿ ತೊಡಗಿದ್ದಾರೆ.

ಬೆಟ್ಟಿಂಗ್‌ ಭರಾಟೆ: ಕೆಲ ಭಾಗಗಳಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿಕೂಟದ ಅಭ್ಯರ್ಥಿ ನಿಖೀಲ್ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಇಬ್ಬರು ಅಭ್ಯರ್ಥಿಗಳ ಬೆಂಬಲಿಗರು ಬೆಟ್ಟಿಂಗ್‌ ಕಟ್ಟುತ್ತಿರುವ ಪ್ರಕರಣಗಳು ಗುಟ್ಟಾಗಿ ನಡೆಯುತ್ತಿವೆ. ಚುನಾವಣಾ ನೀತಿ ಸಂಹಿತೆ ಅಡಿ ಬೆಟ್ಟಿಂಗ್‌ಗೆ ಅಧಿಕಾರಿಗಳು ಕಡಿವಾಣ ಹಾಕಿದ್ದು, ಬೆಟ್ಟಿಂಗ್‌ ಚರ್ಚೆಗಳು ಅಷ್ಟಾಗಿ ಹೊರ ಬರುತ್ತಿಲ್ಲ. ಚುನಾವಣಾಧಿಕಾರಿಗಳು ಈಗಾಗಲೇ ಬೆಟ್ಟಿಂಗ್‌ ಬಗ್ಗೆ ಶಿಸ್ತು ಕ್ರಮಕ್ಕೆ ಮುಂದಾಗಿರು ವುದರಿಂದ ನಿಗೂಢವಾಗಿವೆ. ಒಟ್ಟಾರೆ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ 2,11,641ಮತದಾರರಲ್ಲಿ, ಪುರುಷರು 1,04,723, ಮಳೆಯರು 1,06,882 ಇತರೆ 36 ಮತದಾರ ರಿದ್ದು, ಅದರಲ್ಲಿ 1,73,346 ಮತಗಳು ಚಲಾವಣೆಯಾಗಿವೆ. 86,857 ಪುರುಷರು, 86474 ಮಹಿಳೆಯರು ಸೇರಿ ಇತರ 15 ಮಂದಿ ಮತ ಚಲಾಯಿಸಿದ್ದಾರೆ. ಮತದಾರರ ಒಲವು ಯಾರಕಡೆ ಇದೆಯೋ ಮೇ 23ರ ಫ‌ಲಿತಾಂಶದವರೆಗೂ ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.