ಬೆಳೆ ನಷ್ಟ ಪರಿಹಾರ ಎಲ್ಲರಿಗೂ ವಿಸ್ತರಿಸಿ
ಬೆಳೆ ನಷ್ಟ ಪರಿಹಾರ ಎಲ್ಲಾ ತಾಲೂಕುಗಳಿಗೆ ವಿಸ್ತರಿಸಲು ಆಗ್ರಹಿಸಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು, ರೈತರಿಂದ ಪ್ರತಿಭಟನೆ
Team Udayavani, May 18, 2019, 4:20 PM IST
ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ಗೌಡ ನೇತೃತ್ವದಲ್ಲಿ ತಹಶೀಲ್ದಾರ್ ಬಿ.ಗೀತಾ ಅವರಿಗೆ ಮನವಿ ಸಲ್ಲಿಸಲಾಯಿತು.
ಮದ್ದೂರು: ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಿಗೆ ವಿಸ್ತರಿಸಿ ಪರಿಹಾರ ನೀಡುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಬಿ.ಗೀತಾ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್ಗೌಡ ನೇತೃತ್ವದಲ್ಲಿ ಪಟ್ಟಣದ ತಾಲೂಕು ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು, ರೈತರು, ಸರ್ಕಾರ ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಗಮನಹರಿಸುವಂತೆ ಆಗ್ರಹಿಸಿದರು.
ಎಲ್ಲಾ ತಾಲೂಕುಗಳನ್ನು ಸೇರಿಸಿ: ಜಿಲ್ಲೆಯ ಪಾಂಡವಪುರ ಹಾಗೂ ಶ್ರೀರಂಗಪಟ್ಟಣ ತಾಲೂಕು ಗಳನ್ನು ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿ ಹಾರಕ್ಕೆ ಸೀಮಿತಗೊಳಿಸಿದ್ದು ಕೂಡಲೇ ಎಲ್ಲಾ ತಾಲೂ ಕುಗಳನ್ನು ಬೆಳೆ ನಷ್ಟ ಪರಿಹಾರಕ್ಕೆ ಸೇರಿಸಿ ಪರಿಹಾರ ವಿತರಿಸುವ ಜತೆಗೆ ಸಂಕಷ್ಟದಲ್ಲಿರುವ ರೈತರಿಗೆ ಅನುಕೂಲ ಕಲ್ಪಿಸುವಂತೆ ಮನವಿ ಮಾಡಿದರು.
ಕಬ್ಬು ಬಾಕಿ ಪಾವತಿಸಿ: ತಾಲೂಕಿನ ಚಾಮುಂಡೇಶ್ವರಿ ಹಾಗೂ ಕೊಪ್ಪ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡಿದ ರೈತರಿಗೆ ಕೋಟ್ಯಂತರ ರೂ. ಹಣ ಬಾಕಿ ಉಳಿಸಿ ಕೊಂಡಿದ್ದು ಸರ್ಕಾರಕ್ಕೆ ಹಾಗೂ ಜಿಲ್ಲಾಡಳಿತಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ವಹಿಸಿರುವ ಅಧಿಕಾರಿಗಳ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ಕ್ರಮ ಖಂಡಿಸಿದರು.
ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಹಣ ಬಿಡುಗಡೆಗೆ ಅಗತ್ಯ ಕ್ರಮ ವಹಿಸುವಂತೆ ತಪ್ಪಿದಲ್ಲಿ ಮುಂದಾಗುವ ಅನಾಹುತಗಳಿಗೆ ಜಿಲ್ಲಾಡಳಿತವೇ ನೇರ ಹೊಣೆಯಾಗಲಿದೆ ಎಂದು ಎಚ್ಚರಿಕೆ ನೀಡಿದರಲ್ಲದೇ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಯ ಸ್ಟೇಂಟ್ ವಾಶ್ ಮೇಜರ್ ಟ್ಯಾಂಕ್ ಹೊಡೆದು ಲಕ್ಷಾಂತರ ರೂ. ಬೆಳೆ ನಷ್ಟ ಹೊಂದಿದ್ದು ಕೂಡಲೇ ಜಿಲ್ಲಾಡಳಿತ ನಷ್ಟ ಹೊಂದಿರುವ ರೈತರಿಗೆ ಪರಿಹಾರ ವಿತರಿಸುವಂತೆ ಆಗ್ರಹಿಸಿದರು.
ಕುಡಿವ ನೀರು ಪೂರೈಸಿ: ಜಿಲ್ಲಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು ಗ್ರಾಮೀಣ ಪ್ರದೇಶದಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ, ಅಗತ್ಯವಿರುವೆಡೆ ಬೋರ್ವೆಲ್ ಕೊರೆಸಲು ಅಧಿಕಾರಿಗಳು ಮುಂದಾಗಬೇಕೆಂದರು.
ಈಗಾಗಲೇ ಶಾಲೆಗಳು ಆರಂಭವಾಗಿದ್ದು ಖಾಸಗಿ ಶಿಕ್ಷಣ ಸಂಸ್ಥೆಗಳು ಅಧಿಕ ಡೊನೇಷನ್ ಪಡೆಯುತ್ತಿದ್ದು ಇದರಿಂದಾಗಿ ಬಡದವರು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಕೊಡಿಸುವುದೇ ದುಸ್ತರವಾಗಿದೆ. ಕೂಡಲೇ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಸಭೆ ಕರೆದು ಪ್ರತಿ ಶಾಲೆಯಲ್ಲಿ ನಾಮಫಲಕದಲ್ಲಿ ಪಡೆಯುವ ಶುಲ್ಕದ ಮಾಹಿತಿ ಪ್ರಕಟಿಸುವಂತೆ ಒತ್ತಾಯಿಸಿದರು.
ತಾಲೂಕಿನ ಕುಂದನಕುಪ್ಪೆ ಹಾಗೂ ಹೊಸೂರು ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಸ್ಥಳೀಯ ಗ್ರಾಪಂ ಅಧಿಕಾರಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದು ಇನ್ನಿತರೆ ಬೇಡಿಕೆಗಳ ಸಂಬಂಧ ಜಿಲ್ಲಾಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ರಮೇಶ್ಗೌಡ, ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ತಾಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಪದಾಧಿಕಾರಿಗಳಾದ ಯರಗನಹಳ್ಳಿ ಮಹಾಲಿಂಗು, ಉಮೇಶ್, ಕುಮಾರ್, ಶೇಖರ್, ಶ್ರೀನಿವಾಸ್, ಮಹೇಶ್, ಕೃಷ್ಣ, ನಿಖೀಲ್, ರಂಜಿತ್ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್