ಜಲಜೀವನ್ ಮಿಷನ್ ಯೋಜನೆ ಜಿಲ್ಲೆಗೆ ವಿಸ್ತರಿಸಿ
Team Udayavani, Jun 1, 2021, 1:05 PM IST
ಭಾರತೀನಗರ: ಜಲ ಜೀವನ್ ಮಿಷನ್’ ಯೋಜನೆಯನ್ನು 690 ಕೋಟಿ ರೂ.ಗಳಲ್ಲಿ ಕೇವಲ ಮೂರು ತಾಲೂಕುಗಳಿಗೆ ನೀಡಿದ್ದು, ಇದನ್ನು ಇಡೀ ಜಿಲ್ಲೆಗೆ ವಿಸ್ತರಿಸುವ ಮೂಲಕ ಶಿವಮೊಗ್ಗ ಜಿಲ್ಲೆಯ ಮೇಲಿನ ಪ್ರೀತಿ ಜನ್ಮ ಕೊಟ್ಟ ಮಂಡ್ಯ ಜಿಲ್ಲೆ ತಾಯಿಯ ಬಗ್ಗೆಯೂ ಇಡಬೇಕೆಂದು ಶಾಸಕ ಡಿ.ಸಿ.ತಮ್ಮಣ್ಣ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿಯವರು 2019-2020ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದ ಎಲ್ಲ ಜನವಸತಿಗಳಿಗೆ ಶುದ್ಧ ಕುಡಿಯುವ ನೀರನ್ನು ನದಿ ಮೂಲಗಳಿಂದ ಒದಗಿಸುವ ಕಾರ್ಯಕ್ರಮಕ್ಕೆ 53,000 ಕೋಟಿ ರೂ. ಘೋಷಿಸಿದ್ದರು ಎಂದು ತಿಳಿಸಿದ್ದಾರೆ.
ಮೈಸೂರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತದವರು ಆರು ಯೋಜನೆಗಳ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿ, ಆರು ಯೋಜನೆಗಳಲ್ಲಿ ಕೆ.ಆರ್.ಪೇಟೆ, ಪಾಂಡವಪುರ, ನಾಗಮಂಗಲತಾಲೂಕುಗಳ ನೀರು ಸರಬರಾಜು ಯೋಜನೆಯನ್ನು 700 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಹಾಗೂ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು ಮತ್ತು ಮಳವಳ್ಳಿ ನಾಲ್ಕು ತಾಲೂಕುಗಳ ನೀರು ಸರಬರಾಜು ಯೋಜನೆಯನ್ನು 800 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಯೋಜನೆ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು. ಎಂದಿದ್ದಾರೆ.
ಕಳೆದ ಮೇ26ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂದಾಜು ವೆಚ್ಚ 6,768.85 ಕೋಟಿರೂ. ವೆಚ್ಚದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೀರು ಸರಬರಾಜುಯೋಜನೆಗೆಅನುಮೋದನೆ ನೀಡಿರುತ್ತೀರಿ.
ಮಂಜೂರಾಗಿರುವ ಯೋಜನೆಗಳಲ್ಲಿ ವಿಜಯಪುರ ಒಂದನೇ ಹಂತದ 1,431.8 ಕೋಟಿ ರೂ. ಜೊತೆಗೆ ಎರಡನೇ ಹಂತದ ಯೋಜನೆಯಡಿಯಲ್ಲಿ 954.51 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರ ಜೊತೆಗೆ ಅನುಮೋದನೆಯಾಗಿದ್ದ 4,000 ಕೋಟಿ ರೂ. ಯೋಜನೆಯಲ್ಲಿ ಮಂಡ್ಯ ಜಿಲ್ಲೆಯ ನಾಲ್ಕು ತಾಲೂಕುಗಳಿಗೆ 800 ಕೋಟಿ ರೂ.ಗಳ ಯೋಜನೆಯನ್ನು ಕೈಬಿಟ್ಟಿದ್ದೀರಿ ಮತ್ತು ಪೂರ್ಣವಾಗಿ ಕೋಲಾರ ಜಿಲ್ಲೆಯ ಯೋಜನೆಗಳನ್ನು ಪರಿಗಣಿಸಿಯೇ ಇಲ್ಲ. ಇದಕ್ಕೆ ಕಾರಣವೇನು ತಿಳಿದು ಬಂದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ