21ರಿಂದ ಆದಿಚುಂಚನಗಿರಿಯಲ್ಲಿ ಜಾತ್ರೆ ವೈಭವ
ಸಾಮೂಹಿಕ ವಿವಾಹ, ಸಿದ್ದೇಶ್ವರಸ್ವಾಮಿ ಉತ್ಸವ ಮತ್ತಿತರ ಧಾರ್ಮಿಕ ಕಾರ್ಯ ಆಯೋಜನೆ
Team Udayavani, Mar 17, 2021, 2:14 PM IST
ನಾಗಮಂಗಲ: ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮಾ.21 ರಿಂದ29ರವರೆಗೆ ನಡೆಯುವ ಆದಿಚುಂಚನಗಿರಿ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಕ್ಷೇತ್ರದಲ್ಲಿ ವಿವಿಧಪೂಜಾ ಕೈಂಕರ್ಯ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಮಾ.21ರ ಬೆಳಗ್ಗೆ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಅವರು ನಾಂದಿಪೂಜೆ ಹಾಗೂ ಧರ್ಮ ಧ್ವಜಾರೋಹಣ ಮಾಡುವಮೂಲಕ ಜಾತ್ರೆಗೆ ಚಾಲನೆ ನೀಡುವರು. ಮಾ.22ರರಾತ್ರಿ 7 ಕ್ಕೆ ಸರ್ವಾಲಂಕೃತ ಶ್ರೀ ಚಂದ್ರಮೌಳೇಶ್ವರಸ್ವಾಮಿ ಉತ್ಸವ ನಡೆಯಲಿದ್ದು, ಮಾ.23ರ ರಾತ್ರಿ 7ಕ್ಕೆ ಮಲ್ಲೇಶ್ವರಸ್ವಾಮಿ ಉತ್ಸವ ನಡೆಯಲಿದೆ. ಮಾ.24ರಬೆಳಗ್ಗೆ 9.30ಕ್ಕೆ ಸಾಮೂಹಿಕ ವಿವಾಹ, ಸಂಜೆ 7ಕ್ಕೆ ಸಿದ್ದೇಶ್ವರಸ್ವಾಮಿ ಉತ್ಸವ ನಡೆಯಲಿದೆ. ಮಾ.25ರ ಸಂಜೆ 7ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿಯ ಹೂವಿನ ಪಲ್ಲಕ್ಕಿ ಉತ್ಸವ, ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಮುತ್ತಿನ ಪಲ್ಲಕ್ಕಿ ಉತ್ಸವ ನಡೆಯಲಿದೆ.
ಜ್ವಾಲಾಪೀಠಾರೋಹಣ: ಮಾ.26ರ ಬೆಳಗ್ಗೆ 7.30ಕ್ಕೆ ಶ್ರೀ ಕಾಲಭೈರವೇಶ್ವರಸ್ವಾಮಿಗೆ ಸುವರ್ಣ ಕವಚಾಲಂಕಾರ,ಗಂಗಾಧರೇಶ್ವರ ಸ್ವಾಮಿಗೆ ರಜತ ನಾಗಭರಣಅಲಂಕಾರ, ಅದೇ ದಿನ ಬೆಳಗ್ಗೆ 9.30ಕ್ಕೆ ಆದಿಚುಂಚನಗಿರಿಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಉದ್ಘಾಟನೆನಡೆಯಲಿದೆ. ಸಂಜೆ 7ಕ್ಕೆ ಶ್ರೀ ನಿರ್ಮಲಾನಂದನಾಥಸ್ವಾಮೀಜಿ ಅವರಿಂದ ಜ್ವಾಲಾಪೀಠಾರೋಹಣ,ಸಿದ್ಧಸಿಂಹಾಸನ ಪೂಜೆ ನಡೆಯುತ್ತದೆ. ರಾತ್ರಿ 9 ಗಂಟೆಗೆಚಂದ್ರ ಮಂಡಲೋತ್ಸವ ಪೂಜೆ ಜರುಗಲಿದೆ.
ನಾಟಕ ಪ್ರದರ್ಶನ: ಮಾ.27ರ ಬೆಳಗ್ಗೆ ಕ್ಷೇತ್ರಾಧಿದೇವತೆಗಳಿಗೆ ಅಭಿಷೇಕ ಸೇರಿ ವಿವಿಧ ಪೂಜಾಮಹೋತ್ಸವ ನಡೆಯಲಿದ್ದು, ರಾತ್ರಿ 7ಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಬಳಿಕ ಶ್ರೀ ಕಾಲಭೈರವೇಶ್ವರ ಸ್ವಾಮಿಯ ತಿರುಗಣಿ ಉತ್ಸವ,ಪುಷ್ಕರಣಿಯಲ್ಲಿ ತೆಪ್ಪೋತ್ಸವದ ನಂತರ ನಾಟಕಪ್ರದರ್ಶನ ಕಾರ್ಯಕ್ರಮಗಳು ನಡೆಯಲಿವೆ.
ಮಾ.29ರ ಬೆಳಗ್ಗೆ 9ಗಂಟೆಗೆ ಕ್ಷೇತ್ರದ ಬಿಂದು ಸರೋವರದಲ್ಲಿ ಅವಭೃತ ಸ್ನಾನ, ಮಹಾಭಿಷೇಕಮತ್ತು ಸಭಾ ಕಾರ್ಯಕ್ರಮದ ಬಳಿಕಧರ್ಮಧ್ವಜಾವರೋಹಣದೊಂದಿಗೆ 9 ದಿನಗಳಜಾತ್ರೆಗೆ ತೆರೆಬೀಳಲಿದೆ ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದೆ.
28ಕ್ಕೆ ನಿರ್ಮಲಾನಂದನಾಥ ಶ್ರೀಗಳ ಅಡ್ಡಪಲ್ಲಕ್ಕಿ ಉತ್ಸವ :
ಮಾ.28ರ ಮುಂಜಾನೆ ಬ್ರಾಹ್ಮಿ ಮೂಹೂರ್ತದಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿಯ ಮಹಾರಥೋತ್ಸವ, ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಬಹಳ ವಿಜೃಂಭಣೆಯಿಂದ ಜರುಗಲಿದೆ. ಇದೇದಿನ ಸಂಜೆ 6ಕ್ಕೆ ಅಕ್ಕಪಕ್ಕ ಗ್ರಾಮಗಳಿಂದ ಆಗಮಿಸುವ ನೂರಾರು ಗ್ರಾಮದೇವತೆಗಳ ಉತ್ಸವ ಮೂರ್ತಿಗಳೊಂದಿಗೆ ಗಿರಿ ಪ್ರದಕ್ಷಿಣಿ ನಡೆಯಲಿದೆ. ಬಳಿಕ ಶ್ರೀ ಸೋಮೇಶ್ವರ ಸ್ವಾಮಿಯ ಉತ್ಸವ ಜರುಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ