ನಕಲಿ ಚಿನ್ನದ ನಾಣ್ಯ ಕೊಟ್ಟು 15 ಲಕ್ಷ ರೂ. ವಂಚನೆ


Team Udayavani, Dec 16, 2019, 5:03 PM IST

mandya-tdy-2

ಮಂಡ್ಯ: ಬೆಂಗಳೂರು ಮೂಲದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರ ದೂರದ ಸಂಬಂಧಿಯೊಬ್ಬರಿಗೆ ನಕಲಿ ಚಿನ್ನದ ನಾಣ್ಯ ನೀಡಿ 15 ಲಕ್ಷ ರೂ. ಪಡೆದು ವಂಚಿಸಿರುವ ಘಟನೆ ಮದ್ದೂರು ಪಟ್ಟಣದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ತೆಲಂಗಾಣ ರಾಜ್ಯದ ಹೈದರಾಬಾದ್‌ನ ರವೀಂದ್ರ ನಾಯಕ್‌ ಅವರಿಂದ ಹುಬ್ಬಳ್ಳಿ ಮೂಲದ ಶಿವ ಎಂಬುವರು 15 ಲಕ್ಷ ರೂ. ಪಡೆದು ನಕಲಿ ಚಿನ್ನದ ನಾಣ್ಯ ನೀಡಿ ವಂಚಿಸಿದ್ದು, ಈ ಬಗ್ಗೆ ರವೀಂದ್ರ ನಾಯಕ್‌ ಶನಿವಾರ ಮದ್ದೂರು ಪೊಲೀಸರಿಗೆ ದೂರು ನೀಡಿದ್ದಾರೆ. ಬೆಂಗಳೂರು ಪಶ್ಚಿಮ ವಲಯ ಡಿಸಿಪಿ ಡಿ.ರಮೇಶ್‌ ದೂರದ ಸಂಬಂಧಿಯಾಗಿರುವ ರವೀಂದ್ರ ನಾಯಕ್‌ ಆಂಧ್ರದಲ್ಲಿ ಡ್ರಿಲ್ಲಿಂಗ್‌ ಕೆಲಸ ಮಾಡುತ್ತಿದ್ದು, ಅವರೊಂದಿಗೆ ಆರೋಪಿ ಶಿವ ಕೂಡ ಕೆಲಸ ಮಾಡುತ್ತಿದ್ದನು. ಆನಂತರದಲ್ಲಿ ಶಿವ ಕೆಲಸ ಬಿಟ್ಟಿದ್ದರೂ ಸಹ ರವೀಂದ್ರ ನಾಯಕ್‌ ಅವರೊಂದಿಗೆ ದೂರವಾಣಿ ಸಂಪರ್ಕದಲ್ಲಿದ್ದನು. ನಂತರದಲ್ಲಿ ರವೀಂದ್ರ ನಾಯಕ್‌ ಕೂಡ ಕೆಲಸ ತೊರೆದು ಕ್ಯಾಬ್‌ ಚಾಲಕನಾಗಿದ್ದನು.

ಕೆಲವು ದಿನಗಳ ಹಿಂದೆ ಆರೋಪಿ ಶಿವ ನನಗೆ ಹಣಕಾಸಿನ ತೊಂದರೆ ಇದೆ. ಹೀಗಾಗಿ 15 ಲಕ್ಷ ರೂ. ಹಣ ಬೇಕಾಗಿದೆ. ಹಣದ ಭದ್ರತೆಗಾಗಿ 1 ಕೆ.ಜಿ. ಚಿನ್ನದ ನಾಣ್ಯಗಳನ್ನು ಕೊಡುವುದಾಗಿ ತಿಳಿಸಿದ್ದನು. ಅದರಂತೆ ಮದ್ದೂರಿನ ಕೊಪ್ಪ ಮೇಲ್ಸೆತುವೆ ಬಳಿ ಬರುವಂತೆ ರವೀಂದ್ರನಾಯಕ್‌ಗೆ ಸೂಚಿಸಿದ್ದನು. ಈತನ ಮಾತನ್ನು ನಂಬಿದ ರವೀಂದ್ರ ನಾಯಕ್‌ ಕಳೆದ ನ. 22ರಂದು ಮದ್ದೂರು ಪಟ್ಟಣದ ಕೊಪ್ಪ ಮೇಲ್ಸೆತುವೆ ಬಳಿ ರಾತ್ರಿ 7 ಗಂಟೆ ಸಮಯದಲ್ಲಿ ಆರೋಪಿ ಶಿವನನ್ನು ಭೇಟಿ ಮಾಡಿದ

ರವೀಂದ್ರ ನಾಯಕ್‌, ಅವನಿಗೆ 15 ಲಕ್ಷ ರೂ. ಕೊಟ್ಟು ಚಿನ್ನದ ನಾಣ್ಯಗಳಿದ್ದ ಬ್ಯಾಗ್‌ನ್ನು ಪಡೆದುಕೊಂಡಿದ್ದಾನೆ. ಚಿನ್ನದ ನಾಣ್ಯಗಳ ಗೌಪ್ಯತೆ ಕಾಪಾಡಲು ಹಾಗೂ ಬೇರೆ ಯಾರಿಗೂ ವಿಷಯ ಗೊತ್ತಾಗದಿರುವಂತೆ ತಿಳಿಸಿದ ಶಿವ ಮೂರು ದಿನಗಳ ಬಳಿಕ ಬ್ಯಾಗ್‌ನ್ನು ತೆಗೆದು ನೋಡುವಂತೆ ಹೇಳಿ ಕಳುಹಿಸಿದ್ದಾನೆ. ಚಿನ್ನದ ನಾಣ್ಯಗಳಿದ್ದ ಬ್ಯಾಗ್‌ನೊಂದಿಗೆ ಹೈದಾ ಬಾದ್‌ಗೆ ವಾಪಸಾದ ರವೀಂದ್ರ ನಾಯಕ್‌ ಶಿವ ನೀಡಿದ ಸೂಚನೆಯಂತೆ ಮೂರು ದಿನಗಳ ಬಳಿಕ ಬ್ಯಾಗ್‌ ತೆರೆದು ಅದರಲ್ಲಿದ್ದ ನಾಣ್ಯಗಳನ್ನು ಪರಿಶೀಲಿಸಿದಾಗ ಅವು ನಕಲಿ ಚಿನ್ನದ ನಾಣ್ಯಗಳು ಎಂಬ ಸತ್ಯ ಅರಿವಾಯಿತು.

ಆನಂತರ ತಾನು ಮೋಸ ಹೋಗಿರುವ ಬಗ್ಗೆ ಡಿಸಿಪಿ ಡಿ.ರಮೇಶ್‌ ಅವರಿಗೆ ವಿಷಯ ತಿಳಿಸಿದ ರವೀಂದ್ರ ನಾಯಕ್‌, ನ್ಯಾಯಕ್ಕಾಗಿ ಅವರ ಮೊರೆ ಹೋಗಿದ್ದಾನೆ. ಅವರ ಸೂಚನೆಯಂತೆ ಮದ್ದೂರು ಪೊಲೀಸರಿಗೆ ರವೀಂದ್ರ ನಾಯಕ್‌ ದೂರು ನೀಡಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

ಟಾಪ್ ನ್ಯೂಸ್

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

Lok Sabha Elections: ಎಚ್‌ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್‌

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.