ರೈತರಿಗೆ ಮಾಹಿತಿ ನೀಡಲು ಗ್ರಾಮಗಳಿಗೇ ಕೃಷಿ ರಥಯಾತ್ರೆ
Team Udayavani, Jun 15, 2019, 3:25 PM IST
ಮಂಡ್ಯದ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಇಲಾಖೆ ಆಯೋಜಿಸಿದ್ದ 'ಸಮಗ್ರ ಕೃಷಿ ಅಭಿಯಾನ ರಥಕ್ಕೆ' ಅಪರ ಜಿಲ್ಲಾಧಿಕಾರಿ ಯೋಗೇಶ್ ಚಾಲನೆ ನೀಡಿದರು. ಕೃಷಿ ಇಲಾಖೆ ಅಧಿಕಾರಿಗಳಿದ್ದರು.
ಮಂಡ್ಯ: ರೈತರ ಹಿತದೃಷ್ಟಿಯಿಂದ ಸರ್ಕಾರ ಹಲವಾರು ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳುವುದರೊಂದಿಗೆ ಆರ್ಥಿಕವಾಗಿ ಸುಧಾರಣೆ ಕಂಡುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಕಿವಿಮಾತು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಕೃಷಿ ಇಲಾಖೆ ಆಯೋಜಿಸಿದ್ದ ‘ಸಮಗ್ರ ಕೃಷಿ ಅಭಿಯಾನ ರಥಕ್ಕೆ’ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯಗಳು ದೊರಕ ಬೇಕು ಎಂದು ತಿಳಿಸಿದರು.
ಮಾಹಿತಿ ತಿಳಿಸುವ ಉದ್ದೇಶ: ಕೃಷಿ ಇಲಾಖೆಗೆ ಸಂಬಂಧಿಸಿದ ಪೂರ್ಣ ಮಾಹಿತಿಯನ್ನು ತಿಳಿಸಲು ಮಾಹಿತಿ ರಥಕ್ಕೆ ಚಾಲನೆ ನೀಡಲಾಗಿದೆ. ಮಂಡ್ಯ ತಾಲೂಕಿನ ಎಲ್ಲ ಹೋಬಳಿ ಕೇಂದ್ರಗಳಲ್ಲಿ ಸಂಚರಿಸುವುದರ ಜತೆಗೆ ಕಾರ್ಯಕ್ರಮ ಆಯೋಜಿಸಿ ಕೃಷಿ ಮತ್ತು ಕೃಷಿಯೇತರ ಇಲಾಖೆ ವಸ್ತು ಪ್ರದರ್ಶನ, ಇನ್ನಿತರೆ ಕೃಷಿಗೆ ಸಂಬಂಧಪಟ್ಟ ಮಾಹಿತಿ ನೀಡಲಾಗು ವುದು ಎಂದು ಹೇಳಿದರು.
ಜಂಟಿ ಕೃಷಿ ನಿರ್ದೇಶಕಿ ರಾಜ ಸುಲೋಚನಾ ಮಾತನಾಡಿ, ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷ ವಾಕ್ಯದೊಡನೆ ಜೂ.14, 15ರಂದು ಕೆರಗೋಡು ಹೋಬಳಿ, 16ರಂದು ಬಸರಾಳು, 18 ಮತ್ತು 19 ಕಸಬಾ, 20 ಮತ್ತು 21ರಂದು ದುದ್ದ, 22 ಹಾಗೂ 23ರಂದು ಕೊತ್ತತ್ತಿ ಹೋಬಳಿಯಲ್ಲಿ ಮಾಹಿತಿ ರಥ ಸಂಚರಿಸಲಿದೆ. ಬೆಳೆಗಳ ಪದ್ಧತಿ, ಬೀಜೋಪಚಾರ, ಪೋಷಕಾಂಶ ನಿರ್ವಹಣೆ, ನೀರು ನಿರ್ವಹಣೆ, ಕಬ್ಬು ಮತ್ತು ಭತ್ತದ ತಳಿಗಳು ಸೇರಿದಂತೆ ಇನ್ನಿತರೆ ಮಾಹಿತಿ ನೀಡಲಾಗುವುದು ಎಂದರು.
ಈ ವೇಳೆ ತಾಲೂಕು ಪಂಚಾಯಿತಿ ಸದಸ್ಯ ಕೆ.ಸಿ.ಪ್ರಶಾಂತ್ಬಾಬು, ಕೃಷಿ ಇಲಾಖೆಯ ಉಪ ನಿರ್ದೇಶಕಿ ಮಮತಾ, ಸಹಾಯಕ ಕೃಷಿ ನಿರ್ದೇಶಕಿ ಪ್ರತಿಭಾ, ಕೃಷಿ ಅಧಿಕಾರಿ ಟಿ.ಕೃಷ್ಣಯ್ಯ, ರೇಷ್ಮೆ ಇಲಾಖೆ ಸಿದ್ದರಾಜು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್