ಕೆರೆಗೆ ಟೊಮೆಟೋ ಸುರಿದು ಆಕ್ರೋಶ
Team Udayavani, Mar 30, 2020, 4:34 PM IST
ಪಾಂಡವಪುರ: ಟೊಮೆಟೋ ಖರೀದಿಗೆ ಒಪ್ಪಂದ ಮಾಡಿಕೊಂಡಿದ್ದ ಕಂಪನಿ ನಿಗದಿತ ಸಮಯಕ್ಕೆ ಖರೀದಿಸಲಿಲ್ಲವೆಂಬ ಕಾರಣಕ್ಕೆ ಕೆರೆಗೆ ಟೊಮೆಟೋ ಸುರಿದು ರೈತನೊಬ್ಬ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ತಾಲೂಕಿನ ಟಿ.ಎಸ್.ಛತ್ರ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಇಂಗಲಕುಪ್ಪೆ ಗ್ರಾಮದ ರೈತ ಸಂತೋಷ್ ಟೊಮೆಟೋ ನಾಶ ಮಾಡಿದ ರೈತ. ಗ್ರಾಮದಲ್ಲಿ ಒಂದು ಎಕರೆಗೂ ಹೆಚ್ಚು ಪ್ರದೇಶದಲ್ಲಿ ಟೊಮೆಟೋ ಬೆಳೆದು ಖರೀದಿಸಲು ಫಾಸ್ಟ್ಟೆಕ್ ಕಂಪನಿಯೊಂದಿಗೆ ಒಪ್ಪಂದವನ್ನೂ ಮಾಡಿಕೊಂಡಿದ್ದನು. ಪ್ರಸ್ತುತ ದೇಶ ಲಾಕ್ಡೌನ್ ಆಗಿರುವುದರಿಂದ ರೈತ ಬೆಳೆದ ಬೆಳೆ ಖರೀದಿಸಲು ಕಂಪನಿಗೆ ಸಾಧ್ಯವಾಗಿರಲಿಲ್ಲ. ಇದರಿಂದ ಹತಾಶನಾದ ರೈತ ಟೊಮೆಟೋ ಕೆರೆಗೆ ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾನೆ.
ಕೋವಿಡ್ 19 ಸೋಂಕಿನ ಭೀತಿಯಿಂದ ಮಾರುಕಟ್ಟೆ ಇಲ್ಲದೆ ರೈತರು ಅತಂತ್ರ ಸ್ಥಿತಿ ಎದುರಿಸುತ್ತಿದ್ದಾರೆ. ಈಗಲಾದರೂ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ರೈತರು ಬೆಳೆದಿರುವ ಬೆಳೆಗಳನ್ನು ಸಕಾಲದಲ್ಲಿ ಖರೀದಿಗೆ ವ್ಯವಸ್ಥೆ ಮಾಡಿ ರೈತರ ಬದುಕನ್ನು ರಕ್ಷಣೆ ಮಾಡುವಂತೆ ರೈತ ಸಮುದಾಯ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್