ರೈತರ ಬದುಕು ಹಸನಾಗಲು ಸಂಘಟಿತ ಹೋರಾಟ ಮುಖ್ಯ
Team Udayavani, Oct 3, 2022, 3:49 PM IST
ಭಾರತೀನಗರ: ರೈತರ ಬದುಕು ಹಸನಾಗಬೇಕಾದರೆ ಸಂಘಟನೆಯ ಹೋರಾಟ ಅತಿಮುಖ್ಯ ಎಂದು ರಾಜ್ಯ ರೈತ ಸಂಘದ ಕಾರ್ಯದರ್ಶಿ ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು.
ಇಲ್ಲಿಗೆ ಸಮೀಪದ ಅಣ್ಣೂರು ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವ ಮೊದಲೇ ಎಚ್ಚೆತ್ತುಕೊಂಡು ಹಕ್ಕುಗಳನ್ನು ಪಡೆಯಲು ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.
ಸಂಘದಿಂದ ಉಚ್ಚಾಟನೆ: ರೈತ ಸಂಘದಲ್ಲಿ ದುಡಿ ಯುವಂತಹ ಕಾರ್ಯಕರ್ತರು ಯಾವುದೇ ಸ್ವಾರ್ಥ ಇಟ್ಟು ಕೊಳ್ಳಬಾರದು. ರೈತರ ಬದುಕಿಗಾಗಿ ಹೋರಾಟ ನಡೆಸ ಬೇಕು. ಅಂತಹವರಿಗೆ ಮಾತ್ರ ರೈತ ಸಂಘ ಮನ್ನಣೆ ನೀಡುತ್ತದೆ. ಇಲ್ಲದಿದ್ದರೆ ಸಂಘದಿಂದ ಉಚ್ಚಾಟಿಸಲಾಗು ವುದು. ಸರ್ಕಾರಿ ಶಾಲೆ ಅಭಿವೃದ್ಧಿ ಪಡಿಸಬೇಕಾದ ಜನ ಪ್ರತಿನಿಧಿಗಳೇ ಸ್ವಂತ ಕಾಲೇಜು ಕಟ್ಟಿಕೊಂಡು, ಹಣ ಮಾಡಲು ಮುಂದಾಗಿದ್ದಾರೆ ಎಂದು ವಿಷಾದಿಸಿದರು.
ಟನ್ ಕಬ್ಬಿಗೆ 5,700 ರೂ. ಖರ್ಚು: ರಾಜ್ಯ ರೈತ ಸಂಘದ ಮುಖಂಡ ಪ್ರಸನ್ನ ಎನ್.ಗೌಡ ಮಾತನಾಡಿ, ರೈತರು ಕಬ್ಬು ಬೆಳೆದು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಟನ್ ಕಬ್ಬಿಗೆ 5,700 ರೂ. ಖರ್ಚು ಬೀಳುತ್ತಿದೆ. ಸರ್ಕಾರವನ್ನು ಒತ್ತಾಯಿಸಿದರೆ ಯಾವುದೇ ಪ್ರತಿಫಲ ಸಿಗುತ್ತಿಲ್ಲ. ಇದ ಕ್ಕೆಲ್ಲ ನಮ್ಮ ಜನಪ್ರತಿನಿಧಿಗಳೇ ಕಾರಣ. ಕನಿಷ್ಠ ಟನ್ ಕಬ್ಬಿಗೆ 4500 ರೂ. ನಿಗದಿ ಮಾಡಬೇಕೆಂದು ಒತ್ತಾಯಿಸಿದರು.
ರೈತಸಂಘ ಹೋರಾಟ ಅತಿ ಮುಖ್ಯ: ಕೆಆರ್ಎಸ್ ಅಣೆಕಟ್ಟೆ ಸುತ್ತ ಕಲ್ಲುಗಣಿಗಾರಿಕೆ ನಡೆಯುತ್ತಿದೆ. ಇದನ್ನು ತಡೆಯಲು ಮುಂದಾಗಬೇಕು. ರೈತರು, ಕೈಗಾರಿಕಾ ಪ್ರದೇಶ, ಇನ್ನಿತರೆ ಉದ್ದೇಶಗಳಿಗಾಗಿ ರೈತಸಂಘ ಹೋರಾಟ ಅತಿ ಮುಖ್ಯವಾಗಿದೆ ಎಂದು ತಿಳಿಸಿದರು.
ಕಂಬಕ್ಕೆ ಕಟ್ಟಿಹಾಕಿ: ಜಲಜೀವನ್ ಮೀಷನ್ ಯೋಜನೆ ಯಡಿ ಮೀಟರ್ ಅಳವಡಿಕೆ ಮತ್ತು ರೈತರ ಬೋರ್ ವೆಲ್ಗೆ ಮೀಟರ್ ಅಳವಡಿಕೆಗೆ ಬಂದರೆ ಅಧಿಕಾರಿ ಗಳನ್ನು ಕಂಬಕ್ಕೆ ಕಟ್ಟಿಹಾಕಿ ಮೀಟರ್ ಅಳವಡಿಕೆಗೆ ಅವಕಾಶ ಕೊಡಬೇಡಿ ಎಂದು ಎಚ್ಚರಿಕೆ ನೀಡಿದರು.
ಬೇಡಿಕೆಗಳ ಈಡೇರಿಸಿ: ರಾಜ್ಯ ರೈತ ಸಂಘದ ಮುಖಂಡ ಎಸ್.ಸಿ.ಮಧುಚಂದನ್ ಮಾತನಾಡಿ, ರೈತರ ಬೇಡಿಕೆಗಾಗಿ ಅ.5ರಂದು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆಯನ್ನು ಜಿಲ್ಲೆಯ 5 ಭಾಗದಲ್ಲಿ ಹಮ್ಮಿಕೊಂಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿ ಬೇಡಿಕೆಗಳ ಈಡೇರಿಕೆಗಾಗಿ ಪ್ರೋತ್ಸಾ ಹಿಸಬೇಕೆಂದು ಕೋರಿದರು.
ಕಾರ್ಯಕ್ರಮಕ್ಕೂ ಮೊದಲು ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ಹೆದ್ದಾರಿಯಿಂದ ಎತ್ತಿನಗಾಡಿಯ ಮೂಲಕ ರೈತ ಮುಖಂಡರನ್ನು ಮೆರವಣಿಗೆ ನಡೆಸಿ, ಪಟಾಕಿ ಸಿಡಿಸಿ ಗ್ರಾಮಕ್ಕೆ ಬರಮಾಡಿಕೊಂಡರು. ಗ್ರಾಮದ ಮುಖ್ಯದ್ವಾರದಲ್ಲಿ ಗ್ರಾಮ ಘಟಕದ ನಾಮ ಫಲಕ ಅನಾವರಣಗೊಳಿಸಿದರು. ಕಾರ್ಯಕ್ರಮದ ವೇಳೆ ಮಕ್ಕಳ ತಜ್ಞ ಡಾ.ಮೋಹನ್ಬಾಬು, ದರ್ಶನ್ ಪುಟ್ಟಣ್ಣಯ್ಯ ಅವರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಜಿ.ಕೆ. ರಾಮಕೃಷ್ಣ, ಕಾರ್ಯಾಧ್ಯಕ್ಷ ಜೆ.ಡಂ.ವೀರಸಂಗಯ್ಯ, ಎಸ್.ಬಿ. ಪುಟ್ಟಸ್ವಾಮಿ, ಯಧುಶೈಲ ಸಂಪತ್ತು, ಜಿ.ಎಸ್.ಲಿಂಗಪ್ಪಾಜಿ, ಜಿ.ಎಂ.ಶಂಕರ್, ವರದರಾಜು, ಎಸ್.ಕೆ.ರವಿಕುಮಾರ್, ಮರಿಸ್ವಾಮಿ, ಪಟೇಲ್ ಬೋರೇಗೌಡ, ಕೃಷ್ಣಪ್ಪ, ಶಿವರಾಜು, ರಾಜೇಶ, ಧನಂಜಯ, ಶಂಕರ್, ಚನ್ನಪ್ಪ, ಅಣ್ಣೂರು ಗ್ರಾಮ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
MUST WATCH
ಹೊಸ ಸೇರ್ಪಡೆ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ