ರೈತರು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ
Team Udayavani, Jan 27, 2019, 10:27 AM IST
ಪಾಂಡವಪುರ: ರೈತರು ಇಂದಿನ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ತೋಟಗಾರಿಕೆ ಮಹಾ ವಿದ್ಯಾಲಯದ ಡೀನ್ ಡಾ. ರಾಜೇಂದ್ರಪ್ರಸಾದ್ ಸಲಹೆ ನೀಡಿದರು.
ತಾಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾ ವಿದ್ಯಾಲಯ ಮೈಸೂರು, ತಾಪಂ, ಲಕ್ಷ್ಮೀಸಾಗರ ಗ್ರಾಪಂ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತೋಟಗಾರಿಕೆ ವಸ್ತು ಪ್ರದರ್ಶನ ಹಾಗೂ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ರೈತರ ಬೆಳೆಗಳಿಗೆ ಅಗತ್ಯಕ್ಕನುಗುಣವಾಗಿ ಔಷಧಿ ಸಿಂಪಡಣೆ ಮಾಡಬೇಕು, ಜತೆಗೆ ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಖರ್ಚು ಕಡಿಮೆ, ಹೆಚ್ಚು ಉತ್ಪಾದನೆ ಮಾಡಬೇಕು. ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ವಿದ್ಯಾರ್ಥಿಗಳೂ ಕಳೆದ 3 ತಿಂಗಳಿನಿಂದ ಈ ವ್ಯಾಪ್ತಿಯ ಹಲವಾರು ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು ರೈತರೊಂದಿಗೆ 60ಕ್ಕೂ ಹೆಚ್ಚು ಚರ್ಚೆ ಮಾಡಿ ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ ಎಂದರು.
ಜಿಪಂ ಸದಸ್ಯರಾದ ಶಾಂತಲಾ, ಅನುಸೂಯ, ತಾಪಂ ಸದಸ್ಯೆ ಗಾಯತ್ರಿ, ಮಾಣಿಕ್ಯನಹಳ್ಳಿ ಗ್ರಾಪಂ ಅಧ್ಯಕ್ಷೆ ಅನಿತಾರಾಣಿ, ಲಕ್ಷ್ಮೀಸಾಗರ ಗ್ರಾಪಂ ಅಧ್ಯಕ್ಷೆ ಸೌಭಾಗ್ಯ, ಟಿ.ಎಸ್.ಛತ್ರ ಗ್ರಾಪಂ ಅಧ್ಯಕ್ಷೆ ಶೃತಿ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಎಸ್.ಪಿ.ಸೌಮ್ಯ, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್, ಕೃಷಿ ಅಧಿಕಾರಿಗಳಾದ ಎಚ್.ವಿ.ಜಗದೀಶ್, ಯೋಗೇಶ್, ಸಹಾಯಕ ಪ್ರಾಧ್ಯಾಪಕರಾದ ಜಗದೀಶ್, ಹರೀಶ್, ಮುತ್ತುರಾಜ್, ಡಾ.ಆರ್.ಕೆ.ರಾಮಚಂದ್ರ, ಡಾ.ಎನ್.ಮಮತಾಲಕ್ಷ್ಮೀ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ