ಅಕ್ರಮ ಗಣಿಗಾರಿಕೆ ತಡೆಯಲು ರೈತ ಸಂಘ ಆಗ್ರಹ
ನಿಷೇಧಾಜ್ಞೆ ನಡುವೆಯೂ ನಡೆಸುತ್ತಿರುವ ಗಣಿಗಾರಿಕೆ • ತಹಶೀಲ್ದಾರ್ ನಾಗೇಶ್ರನ್ನು ಭೇಟಿ ಮಾಡಿ ತಡೆಯುವಂತೆ ಮನವಿ
Team Udayavani, Jul 26, 2019, 3:52 PM IST
ಶ್ರೀರಂಗಪಟ್ಟಣ: ತಾಲೂಕಿನ ಚನ್ನನಕೆರೆ, ಮುಂಡಗದೊರೆ ಸೇರಿ ಇತರೆಡೆ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕಲ್ಲು ಅಕ್ರಮ ಗಣಿಕಾರಿಕೆ ಮತ್ತು ಜಲ್ಲಿ ಕ್ರಷರ್ ಉದ್ಯಮ ನಡೆಯುತ್ತಿದ್ದು ಅದನ್ನು ನಿಲ್ಲಿಸಬೇಕು ಎಂದು ರೈತ ಸಂಘದ ಮುಖಂಡರು, ಕಾರ್ಯಕರ್ತರು ಆಗ್ರಹಿಸಿದರು.
ತಾಲೂಕು ಕಚೇರಿಯಲ್ಲಿ ತಹಶಿಲ್ದಾರ್ ಡಿ.ನಾಗೇಶ್ ಅವರನ್ನು ಭೇಟಿ ಮಾಡಿ ಈಗಾಗಲೇ ಹಲವಾರು ಬಾರಿ ದೂರು ನೀಡಿದ್ದರೂ ಇದು ವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು, ಕೂಡಲೇ ಅಕ್ರಮ ಗಣಿಗಾರಿಕೆ, ಜಲ್ಲಿ ಕ್ರಷರ್ ಉದ್ಯಮ ನಿಲ್ಲಿಸದಿದ್ದರೆ ನಿರಂತರ ಹೋರಾಟಕ್ಕೆ ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಂಡೆಗಳ ಸ್ಫೋಟಕ ನಿಂತಿಲ್ಲ: ತಾಲೂಕಿನ ಮುಂಡುಗದೊರೆ, ಹಂಗರಹಳ್ಳಿ, ಟಿ.ಎಂ.ಹೊಸೂರು, ಶ್ರೀರಾಂಪುರ ಬಳಿ ಅಕ್ರಮ ಗಣಿಗಾರಿಕೆ ಪ್ರತಿದಿನ ನಡೆಯುತ್ತಲೇ ಇದೆ. ರಾತ್ರಿ ವೇಳೆ ದೊಡ್ಡ ಪ್ರಮಾಣದಲ್ಲಿ ಕಲ್ಲು ಬಂಡೆಗಳನ್ನು ಸ್ಫೋಟಿಸಲಾಗುತ್ತಿದೆ. ಸರ್ಕಾರಕ್ಕೆ ಸೇರಿದ ಅರಣ್ಯ ಭೂಮಿ ಮತ್ತು ಗೋಮಾಳದಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಗಣಿಕಾರಿಕೆ ನಡೆಯುತ್ತಿದೆ. ಇದರಿಂದ ಅರಣ್ಯ ನಾಶ, ಸರ್ಕರಿ ಭೂಮಿ ಒತ್ತುವರಿ ಮಾಡಿಕೊಂಡಿರುವ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಮಂಜೇಶ್ ಗೌಡ ಆಗ್ರಹಿಸಿದರು.
6 ಕ್ರಷರ್ ಬಂದ್ಗೆ ಆದೇಶ: ತಹಶೀಲ್ದಾರ್ ನಾಗೇಶ್ ಮಾತನಾಡಿ, ನಾನು ನಿಮ್ಮ ಹೋರಾಟಕ್ಕೆ ಸ್ಪಂದಿಸಿ ಜಿಲ್ಲಾಧಿಕಾರಿಗಳು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ವರದಿ ನೀಡಿದ್ದೇನೆ. ಆ ಹಿನ್ನೆಲೆಯಲ್ಲಿ ಅವರ ಆದೇಶದ ಮೇರೆಗೆ ತಾಲೂಕಿನ 6 ಜಲ್ಲಿ ಕ್ರಷರ್ಗಳನ್ನು ನಿಲ್ಲಿಸಲಾಗಿದೆ. ಒಂದೆರಡು ದಿನದಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಜಲ್ಲಿ ಕ್ರಷರ್ಗಳ ಸ್ಥಳ ಪರಿಶೀಲಿಸಿ ನಿಲ್ಲಿಸ ಲಾಗುವುದು. ಅಕ್ರಮಗಳ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಮುಂಡಗದೊರೆ ಮೋಹನ, ಮಲ್ಲೇಶ್, ರವೀಂದ್ರ, ತೇಜಸ್ ರೈತರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ