ಪರಿಹಾರಕ್ಕಾಗಿ ರೈತ ಸಂಘದಿಂದ ಧರಣಿ
Team Udayavani, Aug 4, 2020, 8:26 AM IST
ಮದ್ದೂರು: ಚಿರತೆ ದಾಳಿ ತಪ್ಪಿಸಿ. ದಾಳಿಯಿಂದ ಹಾನಿಯಾದ ಜಾನುವಾರು ಮಾಲೀಕರಿಗೆ ಪರಿಹಾರ, ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳಿಗೆ ಪರಿಹಾರದ ಹಣವನ್ನು ಸಕಾಲದಲ್ಲಿ ವಿತರಿಸುವಂತೆ ಒತ್ತಾಯಿಸಿ, ರೈತ ಸಂಘ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ತಾಲೂಕಿನ ಕೊಪ್ಪ ಸಂತೆ ಮೈದಾನದಲ್ಲಿ ಜಮಾವಣೆಗೊಂಡ ಸಂಘಟನೆ ಕಾರ್ಯ ಕರ್ತರು, ಮದ್ದೂರು ಕೊಪ್ಪ ಮಾರ್ಗದ ರಸ್ತೆ ತಡೆ ನಡೆಸಿ ಜಿಲ್ಲಾ ಹಾಗೂ ತಾಲೂಕು ಆಡಳಿತ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ನಾಡ ಕಚೇರಿಗೆ ಮುತ್ತಿಗೆ ಹಾಕಿದರು. ಕೊಪ್ಪದಲ್ಲಿ ಚಿರತೆ ಹಾವಳಿ: ಕೊಪ್ಪ ಭಾಗದಲ್ಲಿ ಚಿರತೆಗಳ ಹಾವಳಿ ಮಿತಿ ಮೀರಿದ್ದು, ಪ್ರತಿನಿತ್ಯ ಜಾನುವಾರು, ಮೇಕೆ, ಕುರಿ ಇನ್ನಿತರೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕುತ್ತಿರುವ ಘಟನೆಗಳು ನಡೆಯುತ್ತಿವೆ. ಆದರೂ ಅರಣ್ಯ ಇಲಾಖೆ ಅಧಿಕಾರಿಗಳು ಕಂಡು ಕಾಣದಂತೆ ಮೌನಕ್ಕೆ ಶರಣಾಗಿದ್ದು, ಜಾನುವಾರುಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ರೈತ ಕುಟುಂಬಗಳ ಬದುಕು ದುಸ್ಥರವಾಗಿದೆ ಎಂದು ದೂರಿದರು.
ಈಗಾಗಲೇ ಚಿರತೆ ಹಾವಳಿಗೆಅನೇಕ ಜಾನುವಾರು ಗಳು ಮೃತಪಟ್ಟಿದ್ದು, ಸಂಬಂಧಿಸಿದ ಅಧಿಕಾರಿ ಗಳು ಪರಿಹಾರ ನೀಡಲು ಮುಂದಾಗದಿದ್ದಲ್ಲಿ ತಾಲೂಕು ಕಚೇರಿ ಬಳಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು. ರೈತ ಮುಖಂಡರಾದ ಕೀಳಘಟ್ಟ ನಂಜುಂಡಯ್ಯ, ಹುರಗಲವಾಡಿ ರಾಮಯ್ಯ, ಉಮೇಶ್, ಎಂ. ಶಿವಕುಮಾರ್, ಎಚ್.ಬಿ.ರವಿ, ರಾಮೇಗೌಡ, ಪುಟ್ಟಸ್ವಾಮೀಗೌಡ, ಕೆಂಚಯ್ಯ, ಮುಕುಂದ, ನಾಗರಾಜು, ಕೃಷ್ಣ, ಶಂಕರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್