ಬೇಡಿಕೆ ಈಡೇರಿಕೆಗೆ ರೈತ ಸಂಘ ಪ್ರತಿಭಟನೆ
Team Udayavani, Jul 8, 2020, 5:43 AM IST
ಮಂಡ್ಯ/ಮದ್ದೂರು: ಎಪಿಎಂಸಿ, ಭೂ ಸುಧಾರಣೆ, ವಿದ್ಯುತ್ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಹಾಗೂ ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಡೀಸಿ ಕಚೇರಿ ಬಳಿ ಜಮಾಯಿಸಿದ ಕಾರ್ಯ ಕರ್ತರು, ಪ್ರತಿಭಟನಾ ಸಭೆ ನಡೆಸಿ ಹಲವು ನಿರ್ಣಯಗಳನ್ನು ಕೈಗೊಂಡರು. ನಂತರ ಡೀಸಿ ಡಾ.ಎಂ.ವಿ.ವೆಂಕಟೇಶ್ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಸರ್ಕಾರಗಳ ವಿರುದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು. ವಿದ್ಯುತ್ ಖಾಸಗೀಕರಣ ಮತ್ತು ಭೂಸುಧಾರಣೆ ಕಾಯ್ದೆಗಳ ತಿದ್ದುಪಡಿ ಜಾರಿಗೆ ತರಬಾರದು. ಕೆಆರ್ಎಸ್ ಸುತ್ತಮುತ್ತ ಯಾವುದೇ ಗಣಿಗಾರಿಕೆ ಮಾಡಬಾರದು ಎಂಬ ಸರ್ಕಾರದ ಆದೇಶವಿದ್ದರೂ ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಲ್ಲಿಸುವುದರ ಜೊತೆಗೆ ಶ್ರೀರಂಗಪಟ್ಟಣದ ಟಿ.ಎಂ. ಹೊಸೂರು, ಮಂಡ್ಯದ ಅನುಕುಪ್ಪೆ ಗ್ರಾಮದಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ನೀರು ಬಿಡುಗಡೆ ಮಾಡಿ: ಕೆಆರ್ಎಸ್, ಹೇಮಾವತಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ನಾಲೆಗಳು ಹಾಗೂ ಅಣೆಕಟ್ಟುಗಳ ಅಡ್ಡ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಬೇಕು. ಮೈಷುಗರ್ ಕಾರ್ಖಾನೆ ಸರ್ಕಾರದ ಸ್ವಾಮ್ಯದಲ್ಲಿಯೇ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು. ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ಮಾಜಿ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್, ಕೆ.ಎಸ್.ಬಾಲಚಂದ್ರ, ಜಿ.ಎಸ್.ಲಿಂಗಪ್ಪಾಜಿ, ಎಸ್.ಕೆ.ರವಿಕುಮಾರ್, ಕೆ.ಟಿ.ಗೋವಿಂದೇಗೌಡ, ಅಣ್ಣೂರು ಮಹೇಂದ್ರ, ಪಿ.ಬಾಲಕೃಷ್ಣ, ಚಂದ್ರುಶಿವಳ್ಳಿ, ಅಮೃತಿ ರಾಜಶೇಖರ್, ಮಹಿಳಾಧ್ಯಕ್ಷೆ ಲತಾಶಂಕರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ