ಕೃಷಿ ಕೆಲಸಕ್ಕೆ ಗೈರು, ಪ್ರಚಾರಕ್ಕೆ ಹಾಜರ್‌

20 ದಿನಗಳಿಂದ ಕೃಷಿ ಚಟುವಟಿಕೆ ಕಡಿಮೆ ,ಗ್ರಾಪಂ ಚುನಾವಣೆಯಿಂದ ಭತ್ತ, ರಾಗಿ ಕಟಾವು ವಿಳಂಬ

Team Udayavani, Dec 21, 2020, 3:32 PM IST

ಕೃಷಿ ಕೆಲಸಕ್ಕೆ ಗೈರು, ಪ್ರಚಾರಕ್ಕೆ ಹಾಜರ್‌

ಮಂಡ್ಯ: ಜಿಲ್ಲೆ ಕೃಷಿಗೆ ಹೆಸರುವಾಸಿಯಾಗಿದೆ. ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ಅದರಂತೆ ರಾಜಕೀಯದಲ್ಲೂ ಇಂಡಿಯಾದಲ್ಲಿ ಸದ್ದು ಮಾಡುತ್ತದೆ. ಚುನಾವಣೆ ಬಂತೆಂದರೆ ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟವೂ ನಡೆಯುತ್ತದೆ. ಅದರಂತೆ ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಕಾವು ಏರಿದೆ.

ಪ್ರತಿ ದಿನ ಗದ್ದೆ, ಹೊಲ, ತೋಟ ಎಂದು ಕೃಷಿಚಟುವಟಿಕೆಗಳಲ್ಲಿ ತೊಡಗುತ್ತಿದ್ದ ರೈತರು ಕಳೆದ 20 ದಿನಗಳಿಂದ ಕಡಿಮೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದರಿಂದ ವ್ಯವಸಾಯದತ್ತ ಮುಖ ಮಾಡುತ್ತಿಲ್ಲ.

ಕೃಷಿ ಕೂಲಿಕಾರ್ಮಿಕರ ಕೊರತೆ: ಪ್ರಸ್ತುತ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿ ಬೆಳೆಗಳ ಫಸಲು ಕಟಾವಿಗೆ ಬಂದಿದೆ. ಆದರೆ, ಗ್ರಾಮ ಪಂಚಾಯಿತಿ ಚುನಾವಣೆಯಿಂದ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಾಡತೊಡಗಿದೆ. ಪ್ರತಿದಿನಪ್ರಚಾರಕ್ಕೆಂದುತೆರಳುವಮಂದಿಕೃಷಿಕೆಲಸಕಾರ್ಯಗಳಿಗೆ ವಿರಾಮ ಹಾಕಿದ್ದಾರೆ. ಇದರಿಂದ ಭತ್ತ ಹಾಗೂ ರಾಗಿ ಕಟಾವು ವಿಳಂಬವಾಗುತ್ತಿದೆ.

ಅಭ್ಯರ್ಥಿಗಳ ಹಿಂದೆ ದಂಡು: ಒಂದೊಂದು ಮೀಸಲು ಸ್ಥಾನಕ್ಕೆ ಕನಿಷ್ಠ 4ರಿಂದ 5 ಮಂದಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿರುವುದರಿಂದ ಪ್ರತಿ ಅಭ್ಯರ್ಥಿಗಳ ಹಿಂದೆ 5 ರಿಂದ 10 ಮಂದಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪ್ರತಿ ದಿನ ತಿಂಡಿ, ಊಟ, ಹಾಗೂ ,ಖರ್ಚಿಗೆ ಹಣ ಸಿಗುತ್ತಿರುವುದರಿಂದ ಚುನಾವಣೆಯಲ್ಲೇ ಮಗ್ನರಾಗಿದ್ದಾರೆ. ತಂಡೋಪ ತಂಡಗಳಾಗಿ ಪ್ರಚಾರ ನಡೆಯುತ್ತಿದೆ.

ಕೆಲಸ ನಿಭಾಯಿಸುತ್ತಿರುವ ಮಹಿಳೆಯರು: ಗ್ರಾಮದ ಗಂಡಸರು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಮಹಿಳೆಯರು ಕೃಷಿ ಚಟುವಟಿಕೆಗಳನ್ನು ನಿಭಾಯಿಸುವಂತಾಗಿದೆ. ಮಹಿಳಾ ಕಾರ್ಮಿಕರು ಮುಯ್ನಾಳುಗಳನ್ನಾಗಿ ಮಾಡಿಕೊಂಡು ಭತ್ತಹಾಗೂ ರಾಗಿ ಕಟಾವಿಗೆ ತೆರಳುತ್ತಿದ್ದಾರೆ.

ಒತ್ತಡಕ್ಕೆ ಪ್ರಚಾರ: ಕೆಲವು ರೈತರು ಸಂಬಂಧಿಕರ ಒತ್ತಡಕ್ಕೆ ಮಣಿದು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.ಗ್ರಾಮದಲ್ಲಿ ಸ್ನೇಹಿತರು, ಸಂಬಂಧಿಕರೇ ಅಭ್ಯರ್ಥಿಗಳಾಗಿರುವುದರಿಂದ ನನ್ನ ಪರವಾಗಿ ಪ್ರಚಾರ ಮಾಡಲಿಲ್ಲ ಎಂದು ಅಸಮಾಧಾನ, ಮನಸ್ತಾಪ ಬರಬಾರದು ಎಂಬ ಉದ್ದೇಶದಿಂದ ಪ್ರಚಾರದಲ್ಲಿ ತೊಡಗಿಸಿಕೊಂಡರೆ, ಮತ್ತೆ ಕೆಲವರು ಇಬ್ಬರೂಅಭ್ಯರ್ಥಿಗಳು ನಮ್ಮವರೇ ಒಬ್ಬರ ಪರ ಪ್ರಚಾರ ಮಾಡಿದರೆ ಮತ್ತೂಬ್ಬರಿಗೆ ನಿಷ್ಠುರ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ತಟಸ್ಥರಾಗಿದ್ದು, ಸದ್ದಿಲ್ಲದೆ ಹೊಲ, ಗದ್ದೆಗಳಿಗೆ ತೆರಳುತ್ತಾರೆ. ಇತ್ತ ನಮ್ಮ ಸಂಬಂಧಿಕರೇ ನಿಂತಿದ್ದಾರೆ. ಅತ್ತನನ್ನ ಸ್ನೇಹಿತನೂ ನಿಂತಿದ್ದಾನೆ. ಯಾರ ಪರ ಪ್ರಚಾರಮಾಡುವುದು. ಅದಕ್ಕೆ ಯಾರ ಕೈಗೂ ಸಿಗದಂತೆ ಮೌನವಾಗಿರುವುದು ಒಳ್ಳೆಯದು ಎಂದು ಗ್ರಾಮದ ರೈತರೊಬ್ಬರು ತಿಳಿಸಿದರು.

 

-ಎಚ್‌.ಶಿವರಾಜು

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.