ಕೃಷಿ ಕೆಲಸಕ್ಕೆ ಗೈರು, ಪ್ರಚಾರಕ್ಕೆ ಹಾಜರ್‌

20 ದಿನಗಳಿಂದ ಕೃಷಿ ಚಟುವಟಿಕೆ ಕಡಿಮೆ ,ಗ್ರಾಪಂ ಚುನಾವಣೆಯಿಂದ ಭತ್ತ, ರಾಗಿ ಕಟಾವು ವಿಳಂಬ

Team Udayavani, Dec 21, 2020, 3:32 PM IST

ಕೃಷಿ ಕೆಲಸಕ್ಕೆ ಗೈರು, ಪ್ರಚಾರಕ್ಕೆ ಹಾಜರ್‌

ಮಂಡ್ಯ: ಜಿಲ್ಲೆ ಕೃಷಿಗೆ ಹೆಸರುವಾಸಿಯಾಗಿದೆ. ಭತ್ತ, ಕಬ್ಬು ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುತ್ತಾರೆ. ಅದರಂತೆ ರಾಜಕೀಯದಲ್ಲೂ ಇಂಡಿಯಾದಲ್ಲಿ ಸದ್ದು ಮಾಡುತ್ತದೆ. ಚುನಾವಣೆ ಬಂತೆಂದರೆ ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟವೂ ನಡೆಯುತ್ತದೆ. ಅದರಂತೆ ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಕಾವು ಏರಿದೆ.

ಪ್ರತಿ ದಿನ ಗದ್ದೆ, ಹೊಲ, ತೋಟ ಎಂದು ಕೃಷಿಚಟುವಟಿಕೆಗಳಲ್ಲಿ ತೊಡಗುತ್ತಿದ್ದ ರೈತರು ಕಳೆದ 20 ದಿನಗಳಿಂದ ಕಡಿಮೆ ಮಾಡಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದರಿಂದ ವ್ಯವಸಾಯದತ್ತ ಮುಖ ಮಾಡುತ್ತಿಲ್ಲ.

ಕೃಷಿ ಕೂಲಿಕಾರ್ಮಿಕರ ಕೊರತೆ: ಪ್ರಸ್ತುತ ಜಿಲ್ಲೆಯಲ್ಲಿ ಭತ್ತ ಹಾಗೂ ರಾಗಿ ಬೆಳೆಗಳ ಫಸಲು ಕಟಾವಿಗೆ ಬಂದಿದೆ. ಆದರೆ, ಗ್ರಾಮ ಪಂಚಾಯಿತಿ ಚುನಾವಣೆಯಿಂದ ಕೃಷಿ ಕೂಲಿ ಕಾರ್ಮಿಕರ ಕೊರತೆ ಕಾಡತೊಡಗಿದೆ. ಪ್ರತಿದಿನಪ್ರಚಾರಕ್ಕೆಂದುತೆರಳುವಮಂದಿಕೃಷಿಕೆಲಸಕಾರ್ಯಗಳಿಗೆ ವಿರಾಮ ಹಾಕಿದ್ದಾರೆ. ಇದರಿಂದ ಭತ್ತ ಹಾಗೂ ರಾಗಿ ಕಟಾವು ವಿಳಂಬವಾಗುತ್ತಿದೆ.

ಅಭ್ಯರ್ಥಿಗಳ ಹಿಂದೆ ದಂಡು: ಒಂದೊಂದು ಮೀಸಲು ಸ್ಥಾನಕ್ಕೆ ಕನಿಷ್ಠ 4ರಿಂದ 5 ಮಂದಿ ಅಭ್ಯರ್ಥಿಗಳು ಸ್ಪರ್ಧೆ ಮಾಡಿರುವುದರಿಂದ ಪ್ರತಿ ಅಭ್ಯರ್ಥಿಗಳ ಹಿಂದೆ 5 ರಿಂದ 10 ಮಂದಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪ್ರತಿ ದಿನ ತಿಂಡಿ, ಊಟ, ಹಾಗೂ ,ಖರ್ಚಿಗೆ ಹಣ ಸಿಗುತ್ತಿರುವುದರಿಂದ ಚುನಾವಣೆಯಲ್ಲೇ ಮಗ್ನರಾಗಿದ್ದಾರೆ. ತಂಡೋಪ ತಂಡಗಳಾಗಿ ಪ್ರಚಾರ ನಡೆಯುತ್ತಿದೆ.

ಕೆಲಸ ನಿಭಾಯಿಸುತ್ತಿರುವ ಮಹಿಳೆಯರು: ಗ್ರಾಮದ ಗಂಡಸರು ಚುನಾವಣೆಯಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಮಹಿಳೆಯರು ಕೃಷಿ ಚಟುವಟಿಕೆಗಳನ್ನು ನಿಭಾಯಿಸುವಂತಾಗಿದೆ. ಮಹಿಳಾ ಕಾರ್ಮಿಕರು ಮುಯ್ನಾಳುಗಳನ್ನಾಗಿ ಮಾಡಿಕೊಂಡು ಭತ್ತಹಾಗೂ ರಾಗಿ ಕಟಾವಿಗೆ ತೆರಳುತ್ತಿದ್ದಾರೆ.

ಒತ್ತಡಕ್ಕೆ ಪ್ರಚಾರ: ಕೆಲವು ರೈತರು ಸಂಬಂಧಿಕರ ಒತ್ತಡಕ್ಕೆ ಮಣಿದು ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.ಗ್ರಾಮದಲ್ಲಿ ಸ್ನೇಹಿತರು, ಸಂಬಂಧಿಕರೇ ಅಭ್ಯರ್ಥಿಗಳಾಗಿರುವುದರಿಂದ ನನ್ನ ಪರವಾಗಿ ಪ್ರಚಾರ ಮಾಡಲಿಲ್ಲ ಎಂದು ಅಸಮಾಧಾನ, ಮನಸ್ತಾಪ ಬರಬಾರದು ಎಂಬ ಉದ್ದೇಶದಿಂದ ಪ್ರಚಾರದಲ್ಲಿ ತೊಡಗಿಸಿಕೊಂಡರೆ, ಮತ್ತೆ ಕೆಲವರು ಇಬ್ಬರೂಅಭ್ಯರ್ಥಿಗಳು ನಮ್ಮವರೇ ಒಬ್ಬರ ಪರ ಪ್ರಚಾರ ಮಾಡಿದರೆ ಮತ್ತೂಬ್ಬರಿಗೆ ನಿಷ್ಠುರ ಕಟ್ಟಿಕೊಳ್ಳಬೇಕಾಗುತ್ತದೆ ಎಂದು ತಟಸ್ಥರಾಗಿದ್ದು, ಸದ್ದಿಲ್ಲದೆ ಹೊಲ, ಗದ್ದೆಗಳಿಗೆ ತೆರಳುತ್ತಾರೆ. ಇತ್ತ ನಮ್ಮ ಸಂಬಂಧಿಕರೇ ನಿಂತಿದ್ದಾರೆ. ಅತ್ತನನ್ನ ಸ್ನೇಹಿತನೂ ನಿಂತಿದ್ದಾನೆ. ಯಾರ ಪರ ಪ್ರಚಾರಮಾಡುವುದು. ಅದಕ್ಕೆ ಯಾರ ಕೈಗೂ ಸಿಗದಂತೆ ಮೌನವಾಗಿರುವುದು ಒಳ್ಳೆಯದು ಎಂದು ಗ್ರಾಮದ ರೈತರೊಬ್ಬರು ತಿಳಿಸಿದರು.

 

-ಎಚ್‌.ಶಿವರಾಜು

ಟಾಪ್ ನ್ಯೂಸ್

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

CWC2023 ಟೀಂ ಇಂಡಿಯಾದ ಮಧ್ಯಮ ಕ್ರಮಾಂಕ ಹೆಸರಿಸಿದ ಸೆಹವಾಗ್; ಸ್ಟಾರ್ ಬ್ಯಾಟರ್ ಗಿಲ್ಲ ಚಾನ್ಸ್

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

Madhya Pradesh: ಭೋಪಾಲ್​ನಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

krs

Karnataka Bandh: ಮಂಡ್ಯ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ

tdy-5

Pandavapur: ಅಕ್ರಮ ದಾಖಲೆ ಸೃಷ್ಟಿ ಆರೋಪ: ಅಧಿಕಾರಿಗಳ ಪರಿಶೀಲನೆ

Road Mishap: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು

Road Mishap: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ್ಯು

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

Cauvery issue; ನಟ ದರ್ಶನ್‌ ವಿರುದ್ಧ ಕಾವೇರಿ ಹೋರಾಟಗಾರರ ಆಕ್ರೋಶ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

Cauvery Issue; ಸುಪ್ರೀಂ ಆದೇಶ ವಿರೋಧಿಸಿ ಮಂಡ್ಯ ಬಂದ್; ವ್ಯಾಪಕ ಬೆಂಬಲ

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

1-sadas

Khalistani ಉಗ್ರರ ವರ್ತನೆಗೆ ಸ್ಕಾಟ್‌ಲ್ಯಾಂಡ್‌ ಗುರುದ್ವಾರ ತೀವ್ರ ಖಂಡನೆ;ಪೊಲೀಸ್ ತನಿಖೆ

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Sagara ಒಂದು ಹೆಬ್ಬಾವಿನ ಕಥೆ; ಬಾಯಿಗೆ ಸಿಕ್ಕಿದ್ದು ಹೊಟ್ಟೆಗಿಲ್ಲ!

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Panaji ಮತ್ತೆ ಗೋವಾದಲ್ಲಿ ಮಳೆಯ ಆರ್ಭಟ; ಹಲವೆಡೆ ರಸ್ತೆಗಳು ಜಲಾವೃತ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Asian Games: ಸ್ಟೀಪಲ್ ಚೇಸ್ ನಲ್ಲಿ ದಾಖಲೆಯೊಂದಿಗೆ ಬಂಗಾರ ಗೆದ್ದ ಅವಿನಾಶ್ ಸಬ್ಲೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Burhanpur; ನೇಣಿಗೆ ಶರಣಾದ ಬಿಜೆಪಿ ಬೆಂಬಲಿತ ಪಂಚಾಯತ್ ಅಧ್ಯಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.