ಕೃಷಿಯಿಂದ ರೈತರ ಬದುಕು ಹಸನು


Team Udayavani, Dec 7, 2020, 8:05 PM IST

ಕೃಷಿಯಿಂದ ರೈತರ ಬದುಕು ಹಸನು

ಮಂಡ್ಯ: ಕೃಷಿಯಿಂದ ರೈತರ ಬದುಕು ಹಸನಾಗಲು ಸಾಧ್ಯವಿದೆ ಎಂಬುದನ್ನು ರೈತರು ಅರಿತುಕೊಳ್ಳಬೇಕು. ಕೃಷಿ ಖುಷಿ ಕೊಡುತ್ತದೆ. ಕೃಷಿ ವಿಧಾನದಿಂದ ಮಾಡಬೇಕಾದ ರೀತಿಯಲ್ಲಿ ಮಾಡಿದರೆ ಕೈಹಿಡಿಯಲಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ನಗರದ ರೈತ ಸಭಾಂಗಣದಲ್ಲಿ ಕೆ.ಬಸವರಾಜೇ ಗೌಡರ ಆಪ್ತ ಬಳಗ, ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್‌ ವತಿಯಿಂದ ಹಮ್ಮಿಕೊಂಡಿದ್ದ ನಿವೃತ್ತ ಕಾರ್ಯ ಪಾಲಕ ಅಭಿಯಂತರ ಕೆ.ಬಸವರಾಜೇಗೌಡ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಪ್ರಸಿದ್ಧ ವಿಜಾnನಿ ಐನ್‌ಸ್ಟೈನ್‌ ಅವರು ದೊಡ್ಡ ವ್ಯಕ್ತಿ ಯಾಗುವುದಕ್ಕಿಂತ ಸಣ್ಣ ರೈತನ ಮಗನಾಗಿ ಹುಟ್ಟಬೇಕು ಎಂದು ಹೇಳಿದ್ದರು. ಅದಕ್ಕೂ ಮುಂಚೆ ರಾಷ್ಟ್ರಕವಿಕುವೆಂಪುಈಮಾತನ್ನು ಹೇಳಿದ್ದರು. ಅದರಂತೆ ನಾವು ಬದುಕುವ ರೀತಿ ನೆಮ್ಮದಿ ತರಬೇಕು. ಯಾವುದಕ್ಕೂ ಅಂಜದೆ, ಅಳುಕದೆ ಜೀವನ ನಡೆಸಬೇಕು ಎಂದರು. ಅದೇ ರೀತಿ ಬಸವರಾಜೇಗೌಡ ಅವರು ಕೃಷಿಯೆ ಡೆಗೆ ಹೋಗಲು ನಿರ್ಧರಿಸಿರುವುದು ಒಳ್ಳೆಯ ವಿಚಾರವಾಗಿದೆ. ಒಳ್ಳೆಯವರು ಎಂದಿಗೂ ಸಮಾಜಕ್ಕೆ ಒಳಿತನ್ನು ಬಯಸುತ್ತಾರೆ. ಅದರಲ್ಲಿ ಬಸವರಾಜೇಗೌಡರು ಒಬ್ಬರು ಎಂದು ಪ್ರಶಂಸಿದರು.

ಒಳ್ಳೆಯ ಕೆಲಸಕ್ಕೆ ಕೈಜೋಡಿಸಿ: ರೈತರು ಬೆಳೆದಂತಹ ಭತ್ತ, ರಾಗಿಯನ್ನು ಭಿಕ್ಷೆ ಬೇಡಿ ಚುಂಚನಗಿರಿ ಮಠಕ್ಕೆ ಕಳುಹಿಸಿಕೊಟ್ಟಿದ್ದಾರೆ. ಅಂಥ ವ್ಯಕ್ತಿತ್ವ ಅವರದ್ದು. ಅವರ ಪತ್ನಿಯೂ ಸಹ ಅನ್ಯೋನ್ಯತೆಯಿಂದ ಅವರ ಸಾಧನೆಗೆ ಕೈಜೋಡಿಸುವ ಮೂಲಕ ಸಮಾಜದ ಒಳ್ಳೆಯ ಕೆಲಸಕ್ಕೆ ಕೈಜೋಡಿಸಿದ್ದಾರೆ ಎಂದರು.

ಸಮಾಜಕ್ಕೆ ಕೆಟ್ಟದ್ದನ್ನು ಬಯಸಬೇಡಿ: ಬಸವರಾಜೇ ಗೌಡರ ಒಳ್ಳೆಯ ಕೆಲಸಗಳಿಗೆ ಜನರು ಬೆಂಬಲಿಸಿದ್ದಾರೆ. ಜೀವನ ಪ್ರೀತಿ,ಕುಟುಂಬ ಪ್ರೀತಿಯ ಜತೆಗೆ ಸಮಾಜದಮೇಲಿನ ವಾತ್ಸಲ್ಯ ಹೆಚ್ಚಿದೆ. ಅದಕ್ಕಾಗಿ ಜನರು ಅವರನ್ನು ಇಷ್ಟಪಡುತ್ತಾರೆ. ಸಮಾಜಕ್ಕೆ ಕೆಟ್ಟದ್ದನ್ನು ಬಯಸಬಾರದು. ಸಾಯುವ ಸಂದರ್ಭದಲ್ಲಿ ಕೆಟ್ಟದ್ದನ್ನು ಬಯಸಿದರೆ, ಮುಂದಿನ ಜನ್ಮದಲ್ಲೂ ಅದೇ ಮನಸ್ಥಿತಿ ಬರಲಿದೆ. ಸಾಯುವ ಸಂದರ್ಭದಲ್ಲಿ ಉತ್ತಮ ರೀತಿಯಲ್ಲಿ ಸಾವನ್ನಪ್ಪಿದರೆ ಮುಂದಿನ ಜನ್ಮ ದಲ್ಲೂ ಒಳ್ಳೆಯವನಾಗಿಯೇ ಹುಟ್ಟುತ್ತಾನೆ. ಆದ್ದರಿಂದ ಪ್ರತಿಯೊಬ್ಬರೂ ಸಮಾಜಕ್ಕೆ ಕೊಡುಗೆ ನೀಡಲು ಮುಂದಾಗಬೇಕು ಎಂದು ಹೇಳಿದರು.

ಓದಿಸಲು ಸಾಧ್ಯವಾಗುತ್ತಿರಲಿಲ್ಲ: ಅಭಿನಂದನೆ ಸ್ವೀಕರಿಸಿದ ಕೆ.ಬಸವರಾಜೇಗೌಡ ಮಾತನಾಡಿ, ನಮ್ಮ ತಂದೆ ರೈತರಾಗಿದ್ದರು. ಆದರೆ, ಅವರಿಗೆ ನನ್ನನ್ನು ಇಂಜಿ ನಿಯರ್‌ ಓದಿಸಬೇಕು ಎಂಬ ಬಯಕೆ ಇತ್ತು. ಆದರೆ,ಓದಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೂ ನಾನು ಓದಿ ಇಂಜಿನಿಯರ್‌ ಆಗಿದ್ದೇನೆ. ನನ್ನ ಏಳಿಗೆಗೆ ಕಾರಣಕರ್ತರಾದ ಕೆ.ವಿ.ಶಂಕರಗೌಡ ಹಾಗೂ ಜಿ. ಮಾದೇಗೌಡರನ್ನು ಸ್ಮರಿಸುತ್ತೇನೆ ಎಂದರು.

ನಿವೃತ್ತ ಕಾರ್ಯಪಾಲಕ ಅಭಿಯಂತರ ಕೆ.ಬಸವ ರಾಜೇಗೌಡ ದಂಪತಿಯನ್ನು ಅಭಿನಂದಿಸಲಾಯಿತು. ಮಾಜಿ ಸಂಸದ ಜಿ.ಮಾದೇಗೌಡ, ಕಾವೇರಿ ನೀರಾವರಿನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಜೈಪ್ರಕಾಶ್‌, ವಿಶ್ರಾಂತ ಪ್ರಾಂಶುಪಾಲ ಡಾ.ಎಸ್‌.ಬಿ.ಶಂಕರೇಗೌಡ, ಮೈಸೂರಿನ ಉಪ ಪೊಲೀಸ್‌ ಆಯುಕ್ತ ಡಾ.ಪ್ರಕಾಶ್‌ ಗೌಡ, ನಿವೃತ್ತ ಜಂಟಿ ಕೃಷಿ ನಿರ್ದೇಶಕ ಡಾ.ಬಿ.ಕೃಷ್ಣ, ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.