ಸರ್ಕಾರದ ವೈಫಲ್ಯದ ವಿರುದ್ಧ ರೈತ ಸಂಘ ಕಿಡಿ
Team Udayavani, Dec 31, 2022, 3:50 PM IST
ಮದ್ದೂರು: ಪಟ್ಟಣದ ಕೊಪ್ಪ ವೃತ್ತದಲ್ಲಿ ರೈತ ಸಂಘದ ಕಾರ್ಯಕರ್ತರು ಮೈಸೂರು, ಬೆಂಗಳೂರು ಹೆದ್ದಾರಿ ತಡೆ ನಡೆಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರ ಕೃಷಿ ಉತ್ಪನ್ನ ಹಾಗೂ ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಿ ಮಂಡ್ಯ ಜಿಲ್ಲಾ ಕೇಂದ್ರದಲ್ಲಿ ಕಳೆದ 2 ತಿಂಗಳಿನಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬಂಧಿಸಿ ಧರಣಿ ಸ್ಥಳದಲ್ಲಿದ್ದ ಟೆಂಟ್ ಕಿತ್ತೂಗೆದ ಕ್ರಮವನ್ನು ಖಂಡಿಸಿದರು.
ರೈತ ಸಂಘದ ಮುಖಂಡ ಸೋ.ಶಿ.ಪ್ರಕಾಶ್ ಮಾತನಾಡಿ, ಕೇಂದ್ರ – ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಅಧಿಕಾರಸ್ಥ ರಾಜಕಾರಣಿಗಳು ರೈತರ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದ್ದು ರೈತ ಸಂಘಟನೆ ಕಳೆದ ಐದು ದಶಕಗಳಿಂದಲೂ ಹೋರಾಟ ನಡೆಸುತ್ತಲೇ ಬಂದಿ ದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ದೂರಿದರು. ಪೊ›.ಎಂ.ಡಿ.ನಂಜುಂಡಸ್ವಾಮಿ ಅವರ ಆಶಯದಂತೆ ರೈತರ ಹಕ್ಕುಗಳಿಗೆ ಒತ್ತಾಯಿಸಿದ ಪ್ರತಿಭಟನಾ ನಿರತರನ್ನು ಏಕಾಏಕಿ ಬಂಧಿಸಿ ಧರಣಿ ಸ್ಥಳದ ಟೆಂಟ್ ಹಾಗೂ ಇತರೆ ವಸ್ತುಗಳನ್ನು ಕಿತ್ತೂಗೆದ ಪೊಲೀಸರ ಕ್ರಮವನ್ನು ಖಂಡಿಸಿದರು.
ಸಂಚಾರ ವ್ಯತ್ಯಯ: ದಿಢೀರ್ ರಸ್ತೆ ತಡೆಯಿಂದಾಗಿ ಅರ್ಧ ಗಂಟೆಗೂ ಹೆಚ್ಚುಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಯಿತು. ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ಪ್ರತಿಭಟನಾ ನಿರತರನ್ನು ಮನವೊಲಿಸುವಲ್ಲಿ ಯಶಸ್ವಿಯಾದ ರಲ್ಲದೇ ರಸ್ತೆತಡೆ ತೆರೆವುಗೊಳಿಸಿದರು.
ಕಾಂಗ್ರೆಸ್ ಮುಖಂಡ ಬಿ.ವಿ.ಶಂಕರೇಗೌಡ, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ರೈತ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್ಬಾಬು ಇದ್ದರು. ಕೆಸ್ತೂರು ವರದಿ: ಮದ್ದೂರು ತಾಲೂಕು ಆತಗೂರು ಹೋಬಳಿ ಕೆಸ್ತೂರು ಗ್ರಾಮ ದಲ್ಲಿ ರೈತ ಸಂಘದ ಕಾರ್ಯಕರ್ತರು ರಸ್ತೆತಡೆ ನಡೆಸಿದರು. ರೈತರ ಬೇಡಿಕೆಗಳ ಈಡೇರಿಕೆ ವೈಫಲ್ಯ, ಧರಣಿ ನಿರತ ರೈತರ ಮೇಲಿನ ದೌರ್ಜನ್ಯ ಹಾಗೂ ರೈತರ ಬಂಧನ ಖಂಡಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ರೈತ ಸಂಘದ ಮುಖಂಡರಾದ ಅಶೋಕ್, ಚಂದ್ರಹಾಸ, ಶಿವ, ಕುಮಾರಸ್ವಾಮಿ, ಬಸವೇಗೌಡ ಕೃಷ್ಣ, ಮೋಹನ್, ಕುಮಾರ್, ಭವಿತಾ, ಸುರೇಶ್, ಕೃಷ್ಣ, ಸೂರಿ, ರವಿ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ