ಶ್ರೀರಂಗಪಟ್ಟಣ: ರೈತರ ಹೈಡ್ರಾಮ, ಸಚಿವ ಅಶೋಕ್ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
Team Udayavani, Oct 4, 2021, 3:25 PM IST
ಶ್ರೀರಂಗಪಟ್ಟಣ: ಕಂದಾಯ ಸಚಿವ ಆರ್.ಅಶೋಕ್ ಕಾರಿಗೆ ಅಡ್ಡ ಮಲಗಿ ರೈತರು ಪ್ರತಿಭಟನೆ ನಡೆಸಿ ಹೈಡ್ರಾಮ ಮಾಡಿದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಇಂದು ಶ್ರೀರಂಗಪಟ್ಡಣದಲ್ಲಿ ನಡೆದ ಸಾಮೂಹಿಕ ತಿಥಿ ಕಾರ್ಯದಲ್ಲಿ ಪಾಲ್ಗೊಂಡು ಬಳಿಕ ಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯಕ್ಕೆ ಸಚಿವ ಆರ್ ಅಶೋಕ್ ಭೇಟಿ ನೀಡಿದ ವೇಳೆ ರೈತ ಸಂಘ ಹಾಗೂ ದಸಂಸದ ಕಾರ್ಯಕರ್ತರು ದೇವಸ್ಥಾನದ ಮುಂಭಾಗ ಆಗಮಿಸಿ ಬಿಜೆಪಿ ಸ ರ್ಕಾರ ಕೊಲೆಗಡುಕ ಸರ್ಕಾರ, ಡೌನ್ ಡೌನ್ ಬಿಜೆಪಿ ಎಂದು ಘೋಷಣೆ ಕೂಗುತ್ತಾ ರೈತರನ್ನು ಕೊಲೆ ಮಾಡಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿ ಧರಣಿ ಕುಳಿತು,ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ದೇವಾಲಯದಿಂದ ಹೊರಗೆ ಬಂದ ಸಚಿ ವರು ಪ್ರತಿಭಟನಾಕಾರನನ್ನು ನಿರ್ಲಕ್ಷ್ತ ಮಾಡಿ ಕಾರು ಹತ್ತಿ ಹೊರಡಲು ಮುಂದಾದಾಗ ಸಚಿವರ ಕಾರು ಅಡ್ಡಗಟ್ಟಿದ ಪ್ರತಿಭಟನಾಕಾರರು.ಕಾರಿಗೆ ಅಡ್ಡ ಮಲಗಿ ಬಾಯಿ ಬಡಿದುಕೊಂಡು ಹೈಡ್ರಾಮ ಮಾಡಿದರು. ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರು ಸಾಕಷ್ಟು ಹರಸಾಹಸ ಪಟ್ಟರು.
ಈ ವೇಳೆ ಪೊಲೀಸರು, ಬಿಜೆಪಿ ಕಾ ರ್ಯಕರ್ತರು ಹಾಗೂ ಪ್ರತಿಭಟನಾಕಾರರು ನ ಡುವೆ ತಳ್ಳಾಟ ನೂಕಾಟ ಆರಂಭವಾಯಿತು. ಅಲ್ಲದೆ ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೆ ಬಂದಿತ್ತು. ಅಲ್ಲದೆ ಅಶೋಕ್ ಕಾರಿಗೆ ಹಾನಿಗೊಳಿಸಿದರು. ಕೊನೆಗೆ ಕಾರಿನಿಂದ ಕೆಳಗಿಳಿದು ಬಂದ ಸಚಿವ ಅಶೋಕ್ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು.
ಈ ವೇಳೆ ಸರ್ಕಾರಿ ಕಚೇರಿಗಳಲ್ಲಿ ಲಂಚ ಇಲ್ಲದೆ ಕೆಲಸ ನಡೆಯುತ್ತಿಲ್ಲ,ಭೂ ಸುಧಾರಣೆ ಕಾಯ್ದೆ ವಾಪಾಸ್ ಪಡೆಯುವುದು ಸೇರಿ ಮೈಷುಗರ್ ಕಾರ್ಖಾನೆ ಸರ್ಕಾರವೇ ನಡೆಸುವಂತೆ ಸಚಿವರಿಗೆ ಪ್ರತಿಭಟನಾಕಾರರು ಮನವಿ ಮಾಡಿದ್ರು. ಮನವಿ ಪಡೆದ ಬಳಿಕ ಸಚಿವರು ಅಲ್ಲಿಂದ ವಾಪಸ್ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ