ಸಮರ್ಪಕ ವಿದ್ಯುತ್ಗೆ ರೈತರ ಧರಣಿ
ವಿವಿಧ ಗ್ರಾಮಗಳಿಗೆ ವಿದ್ಯುತ್ ಕಡಿತ: ಸೆಸ್ಕ್ ಕಚೇರಿಗೆ ಮುತ್ತಿಗೆ
Team Udayavani, Jul 21, 2019, 2:50 PM IST
ಶ್ರೀರಂಗಪಟ್ಟಣ ತಾಲೂಕಿನ ವಿವಿಧ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ರೈತ ಸಂಘದ ಮುಖಂಡರು, ಕಾರ್ಯಕರ್ತರು ಪಟ್ಟಣದ ಸೆಸ್ಕ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣ: ತಾಲೂಕಿನ ವಿವಿಧ ಗ್ರಾಮಗಳಿಗೆ ಸಮರ್ಪಕ ವಿದ್ಯುತ್ಗೆ ಒತ್ತಾಯಿಸಿ ರೈತ ಸಂಘದ ಮುಖಂಡರು ಪಟ್ಟಣದ ಸೆಸ್ಕ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ರೈತ ಸಂಘದ ಅಧ್ಯಕ್ಷ ಮರಳಗಾಲ ಕೃಷ್ಣೇಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರ ಹಾಗೂ ಸೆಸ್ಕ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿದಿನ ವಿದ್ಯುತ್ ಕಣ್ಣಾಮುಚ್ಚಾಲೆಯಾಡುತ್ತಿದ್ದು ತಾಲೂಕಿನ ವಿವಿಧ ವಿದ್ಯುತ್ ಘಟಕಗಳ ದುರಸ್ತಿ ಕಾರ್ಯ ಎಂದು ನೆಪ ಹೇಳಿ ವಿದ್ಯುತ್ ಕಡಿತ ಮಾಡುವುದು ಸಾಮಾನ್ಯವಾಗಿದೆ. ದುರಸ್ತಿ ಕಾರ್ಯ ಇಲ್ಲದಿದ್ದರೂ ಅರ್ಧ ಗಂಟೆಗೊಮ್ಮ ಪ್ರತಿದಿನ ವಿದ್ಯುತ್ ಕಡಿತ ಮಾಡುವುದರ ಕ್ರಮವೇನು ಎಂದು ಇಲಾಖೆಯ ಎಇಇ ನಂದೀಶ್ ಅವರಿಗೆ ತರಾಟೆ ತೆಗೆದುಕೊಂಡರು.
ಕೃಷಿ ಪಂಪ್ಸೆಟ್ಗಳಿಗೆ 7 ಗಂಟೆ ವಿದ್ಯುತ್ ನೀಡುತ್ತೇವೆ ಎಂದು ಹೇಳಿ ರಾತ್ರಿಯಲ್ಲಿ 3 ಗಂಟೆ ಹಾಗೂ ಹಗಲುನಲ್ಲಿ 4 ಗಂಟೆ ವಿದ್ಯುತ್ ಸರಬರಾಜು ಮಾಡಿ, ಅದರಲ್ಲಿಯೂ ಕಡಿತಗೊಳಿಸಲಾಗುತ್ತಿದೆ. ಟೀಸಿಗಳು ಆಕಸ್ಮಿಕವಾಗಿ ವಿದ್ಯುತ್ ಅವಗಡದಿಂದ ಸುಟ್ಟು ಹೋದರೂ ಆನ್ಲೈನ್ ಮೂಲಕ ಮಾಹಿತಿ ನೀಡಿದರೆ ಎರಡು ದಿನದಲ್ಲಿ ಮತ್ತೆ ಅಳವಡಿಸಲಾಗುತ್ತದೆ ಎಂದು ಹೇಳುವ ಸರ್ಕಾರ ತಿಂಗಳಾದರೂ ಟೀಸಿ ಕೆಟ್ಟಿದ್ದರೆ ಅದರ ದುರಸ್ತಿ ಮಾಡಿಲ್ಲ. ಕೂಡಲೇ ವಿದ್ಯುತ್ ಕಡಿತ ಮಾಡುವುದನ್ನು ಸ್ಥಗಿತಗೊಳಿಸಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಕಾರ್ಯಾದ್ಯಕ್ಷ ಸ್ವಾಮೀಗೌಡ, ಪಿಎಸ್ಎಸ್ಕೆ ಮಾಜಿ ನಿರ್ದೇಶಕ ಪಾಂಡು, ಬಾಲಕೃಷ್ಣ, ಬಿ.ಎಸ್.ರಮೇಶ್, ಕೃಷ್ಣಪ್ಪ, ದೊಡ್ಡಪಾಳ್ಯ ಜಯರಾಂ, ಚಂದ್ರು ಜವರೇಗೌಡ, ಕೆಂಪೇಗೌಡ, ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ