ನಾಲೆಗಳಿಗೆ ನೀರು ಹರಿಸಲು ರೈತರ ಆಗ್ರಹ
Team Udayavani, Jun 23, 2020, 4:50 AM IST
ಶ್ರೀರಂಗಪಟ್ಟಣ: ಕೆಆರ್ಎಸ್ ಜಲಾಶಯದಿಂದ ಶೀಘ್ರದಲ್ಲೇ ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ, ರೈತ ಸಂಘದ ಮುಖಂಡರು ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ತಾಲೂಕಿನ ಕೆಆರ್ಎಸ್ ನೀರಾವರಿ ಕಚೇರಿಗೆ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ರೈತ ಸಂಘದ ಪದಾಧಿಕಾರಿಗಳು ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ರೈತರೊಂದಿಗೆ ಸರ್ಕಾರ ಚೆಲ್ಲಾಟ: ರೈತ ಮುಖಂಡ ಕೆಂಪುಗೌಡ ಮಾತನಾಡಿ, ಪ್ರಸ್ತುತ ಅಣೆಕಟ್ಟೆಯಲ್ಲಿ 94 ಅಡಿ ನೀರು ಸಂಗ್ರಹವಾಗಿದೆ. ಬೆಳೆದು ನಿಂತಿರುವ ಕಬ್ಬು ಹಾಗೂ ಇತರೆ ಬೆಳೆಗಳಿಗೆ ನೀರು ಹರಿಸದೇ ರೈತರೊಂದಿಗೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 2-3 ತಿಂಗಳಿಂದ ಕೋವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದು, ಇದೀಗ ತಾವು ಬೆಳೆದಿರುವ ಬೆಳೆಗಳಿಗೆ ನೀರಿಲ್ಲದೇ ಪರದಾಡುತ್ತಿದ್ದಾರೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು.
3 ದಿನಗಳಲ್ಲಿ ಎಲ್ಲಾ ನಾಲೆಗಳಿಗೆ ನೀರು ಹರಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ರಾಜು, ಈ ಸಂಬಂಧ ಅಧಿಕಾರಿಗಳ ಮೂಲಕ ಸರ್ಕಾರದ ಗಮನಕ್ಕೆ ತಂದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆಂಪುಗೌಡ, ಕೃಷ್ಣೇಗೌಡ, ಪಾಂಡು, ಜಯ್ಕುಮಾರ್, ಮಂಜು, ಗೋವಿಂದೇಗೌಡ, ರಾಮೇಗೌಡ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ