ಕಟಾವು ಯಂತ್ರ ಸಿಗದೆ ರೈತರ ಪರದಾಟ

ಜಿಲ್ಲಾಡಳಿತ ನಿಗದಿಪಡಿಸಿದ ದರಕ್ಕೆ ಒಲ್ಲೆ ಎನುತ್ನಿರುವ ಖಾಸಗಿ ಯಂತ್ರದ ಮಾಲೀಕರು, ರೈತರಿಗೆ ಬೆಳೆ ನಾಶದ ಆತಂಕ

Team Udayavani, Dec 21, 2020, 3:47 PM IST

ಕಟಾವು ಯಂತ್ರ ಸಿಗದೆ ರೈತರ ಪರದಾಟ

ಮಂಡ್ಯ: ಜಿಲ್ಲೆಯಲ್ಲಿ ಭತ್ತ ಬೆಳೆ ಕಟಾವಿಗೆ ಬಂದಿದೆ. ಆದರೆ, ಕಟಾವು ಯಂತ್ರಗಳು ಸಿಗದ ಪರಿಣಾಮ ಕಟಾವು ವಿಳಂಬ ವಾಗುತ್ತಿರುವುದರಿಂದ ರೈತರು ಬೆಳೆ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ.

ಮಂಡ್ಯ ಜಿಲ್ಲೆಯ7ತಾಲೂಕುಗಳಲ್ಲಿ ಸುಮಾರು 57,488 ಹೆಕ್ಟರ್ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದೆ. ಈಗಾಗಲೇ ವಿವಿಧ ತಾಲೂಕುಗಳಲ್ಲಿ ಭತ್ತದ ಫಸಲು ಕಟಾ ವಿಗೆ ಬಂದಿದ್ದು, ಕಟಾವು ಮಾಡಲು ರೈತರು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ, ಕಟಾವು ಯಂತ್ರಗಳು ಕಡಿಮೆ ಇರುವುದರಿಂದ ಬೇಡಿಕೆ ಹೆಚ್ಚಾಗಿದೆ. ಇದರಿಂದ ಹೆಚ್ಚಿನ ದರ ನೀಡಬೇಕಾಗಿದೆ.

ನಿಗದಿತ ಸಮಯಕ್ಕೆ ಸಿಗದ ಯಂತ್ರಗಳು: ಭತ್ತ ಕಟಾವು ಪ್ರಾರಂಭವಾಗಿರುವುದರಿಂದ ತಮಿಳುನಾಡು, ಆಂಧ್ರ ಪ್ರದೇಶ ಸೇರಿದಂತೆ ಹೊರ ರಾಜ್ಯಗಳಿಂದ ಕಟಾವು ಯಂತ್ರಗಳು ಜಿಲ್ಲೆಗೆ ಆಗಮಿಸಿವೆ. ಆದರೆ, ಏಕ ಕಾಲದಲ್ಲಿ ಭತ್ತ ಕಟಾವು ಬಂದಿರುವುದರಿಂದ ನಿಗದಿತ ಸಮಯಕ್ಕೆ ಕಟಾವು ಯಂತ್ರಗಳು ಸಿಗುತ್ತಿಲ್ಲ.

ಕೃಷಿ ಕೂಲಿ ಕಾರ್ಮಿಕರ ಕೊರತೆ: ಭತ್ತ ಕಟಾವಿಗೆ ಕೃಷಿ ಕೂಲಿ ಕಾರ್ಮಿಕರ ಕೊರತೆ ಉಂಟಾಗಿದೆ. ಕೋವಿಡ್ ಹಾಗೂ ಪ್ರಸ್ತುತ ಗ್ರಾಪಂ ಚುನಾವಣೆಯಿಂದ ಕಾರ್ಮಿಕರು ಕೃಷಿ ಚಟುವಟಿಕೆಗಳಿಂದ ದೂರು ಉಳಿದಿದ್ದು, ಚುನಾವಣೆ ಯಲ್ಲಿ ತೊಡಗಿಸಿಕೊಂಡಿರುವುದು ಇದಕ್ಕೆ ಕಾರಣವಾಗಿದೆ. ಇದರಿಂದ ಬೆಳೆ ಬೆಳೆದ ರೈತರಿಗೆ ದಿಕ್ಕು ತೋಚದಂತಾಗಿದೆ.

3 ಸಾವಿರ ಕೊಟ್ಟರೂ ಬಾರದ ಯಂತ್ರಗಳು: ಸಮಯ ಮೀರುತ್ತಿರುವುದರಿಂದ ರೈತರು ಬೆಳೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಆದ್ದರಿಂದ ಜಿಲ್ಲಾಡಳಿತ ನಿಗದಿಪಡಿಸಿದಕ್ಕಿಂತ ಹೆಚ್ಚು ದರ ನೀಡಿ ಮುಂಚಿತವಾಗಿ ಬುಕ್ಕಿಂಗ್‌ ಮಾಡಿಕೊಳ್ಳ ಬೇಕು. ಕೆಲ ರೈತರು ಕೊಡಲು ಸಿದ್ಧರಿದ್ದರೂ ಯಂತ್ರಗಳು ಬರುತ್ತಿಲ್ಲ. ಇದರಿಂದ ರೈತರು ತೊಂದರೆ ಅನುಭವಿಸುವಂತಾಗಿದೆ.

ಕಾಳು ಉದುರುವ ಆತಂಕ: ಈಗಾಗಲೇ ಭತ್ತ ಕಟಾವಿಗೆ ಬಂದಿರುವುದರಿಂದ ನಿಗದಿತ ಸಮಯದಲ್ಲಿ ಕಟಾವು ಮಾಡದಿದ್ದರೆ ಕಾಳು ಉದುರುವ ಆತಂಕ ಎದುರಾಗಿದೆ. ಒಂದು ವೇಳೆಕೃಷಿ ಕಾರ್ಮಿಕರಿಂದಕಟಾವು ಮಾಡಿಸಿದರೂ ಸಹ ಕಟಾವುಮಾಡುವಾಗಭತ್ತದ ಕಾಳುಹೆಚ್ಚುಉದುರುವ ಸಾಧ್ಯತೆ ಇದೆ. ಇದರಿಂದ ರೈತರಿಗೆ ನಷ್ಟವಾಗಲಿದೆ.

ಮಧ್ಯವರ್ತಿಗಳ ಹಾವಳಿ :

ಭತ್ತ ಕಟಾವು ಮಾಡುವ ಯಂತ್ರಗಳನ್ನು ಮುಂಚಿತವಾಗಿಯೇ ಮಧ್ಯವರ್ತಿಗಳು ಬುಕ್ಕಿಂಗ್‌ ಮಾಡಿಕೊಂಡಿರುವುದರಿಂದ ರೈತರಿಗೆ ನಿಗದಿತ ಸಮಯದಲ್ಲಿ ಸಿಗುತ್ತಿಲ್ಲ. ಮಧ್ಯವರ್ತಿಗಳ ಮೂಲಕವೇ ಯಂತ್ರಗಳ ಬುಕ್ಕಿಂಗ್ ಮಾಡಿಕೊಳ್ಳಬೇಕಾಗಿದೆ. ಮಧ್ಯವರ್ತಿಗಳಿಗೆ ಭತ್ತಕಟಾವು ಮಾಡಿಸುವ ರೈತರು ಹಣ ಸಂಗ್ರಹಿಸಿ ಕೊಟ್ಟರೆ ಮಾತ್ರ ಯಂತ್ರಗಳು ಬರಲಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಜಿಲ್ಲಾಧಿಕಾರಿ ಆದೇಶಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು : ಕಳೆದ ಡಿ.4ರಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರು, ಜಿಲ್ಲೆಯಲ್ಲಿ ಭತ್ತದ ಬೆಳೆಯುಕಟಾವಿಗೆ ಬಂದಿರುವುದರಿಂದಕೃಷಿ ಕಾರ್ಮಿಕರ ಕೊರತೆ ಹೆಚ್ಚಾಗಿದೆ. ಇದರಿಂದ ಹೊರ ರಾಜ್ಯದ ಕಟಾವು ಯಂತ್ರಗಳನ್ನು ರೈತರು ಅವಲಂಬಿಸಿದ್ದಾರೆ. ಆದ್ದರಿಂದ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ನಿರ್ಧರಿಸಿದಂತೆ ಭತ್ತ ಕಟಾವು ಮಾಡುವಕಂಬೈಂಡ್‌ ಹಾರ್ವೆಸ್ಟರ್ ಚೈನ್‌/ಟ್ರಾಕ್‌ ಮಾಡೆಲ್‌ ಹಾಗೂ ಟಯರ್‌ ಮಾಡೆಲ್‌ ಯಂತ್ರಗಳಿಗೆ ಪ್ರತಿ ಗಂಟೆಗೆ 2300 ರೂ. ಹಾಗೂ 2100 ರೂ. ದರನಿಗದಿಪಡಿಸಲಾಗಿದೆ. ಅದನ್ನು ಬಿಟ್ಟುಹೆಚ್ಚುವರಿ ಹಣವಸೂಲಿ ಮಾಡಬಾರದು ಎಂದು ಆದೇಶ ನೀಡಿದ್ದಾರೆ. ಆದರೂ, ಆದೇಶವನ್ನು ದಿಕ್ಕರಿಸಿ ಯಂತ್ರದಮಾಲೀಕರು ಬೇಡಿಕೆ ಹೆಚ್ಚಿರುವುದರಿಂದ  ಹೆಚ್ಚಿನ ದರ ನೀಡಿದರೆ ಮಾತ್ರ ಕಟಾವು ಮಾಡಲು ಮುಂದಾಗುತ್ತಿದ್ದಾರೆ.

ಭಕ್ತ ಕಟಾವಿಗೆ ಬಂದಿದೆ. ನಿಗದಿತ ಸಮಯದಲ್ಲಿ ಭತ್ ಕಟಾವು ಮಾಡದಿದ್ದರೆ ಕಾಳು ಉದುರಲಿವೆ.ಇತ್ತ ಕೃಷಿ ಕಾರ್ಮಿಕರು ಸಿಗುತ್ತಿಲ್ಲ. ಹೇಗಾದರೂ ಮಾಡಿಕರೆ ತಂದರೆ ಕಟಾವು ಮಾಡುವಾಗ ಹೆಚ್ಚು ಕಾಳುಗಳು ಉದುರುತ್ತವೆ. ಇದರಿಂದ ನಷ್ಟವಾಗಲಿದೆ. ಇತ್ತ ಗಂಟೆಗೆ 3 ಸಾವಿರ ಕೊಡುತ್ತೇನೆ ಎಂದರೂಯಂತ್ರಗಳು ಸಿಗುತ್ತಿಲ್ಲ. ಏನುಮಾಡುವುದು ಎಂದು ತೋಚುತ್ತಿಲ್ಲ. –ಭಾಸ್ಕರ್‌, ರೈತ, ಚಿಕ್ಕ ಮಂಡ್ಯ

ಇವತ್ತು ನಾಳೆ ಎಂದು ಸಬೂಬು ಹೇಳುತ್ತಿದ್ದಾರೆ. ಆದರೆ,ಯಂತ್ರಗಳುಇನ್ನೂ ಬರುತ್ತಿಲ್ಲ.ಕಟಾವು ಅವಧಿ ಮೀರುತ್ತಿದೆ.ಇತ್ತ ಖರೀದಿಕೇಂದ್ರಗಳಿಗೆ ಭತ್ತ ಸಾಗಿಸುವ ದಿನವೂ ಹತ್ತಿರವಾಗುತ್ತಿದೆ. ಸಮಯಕ್ಕೆ ಸರಿಯಾಗಿ ಬೇಗ ಕಟಾವು ಮಾಡಿದರೆ ಇಳುವರಿಬರಲಿದೆ. ಇಲ್ಲದಿದ್ದರೆ ನಷ್ಟ ಉಂಟಾಗಲಿದೆ. ಆದ್ದರಿಂದ ಜಿಲ್ಲಾಡಳಿತಕ್ರಮಕೈಗೊಳ್ಳಬೇಕು. ಈ.ಬಸವರಾಜು, ಇಂಡುವಾಳು ಗ್ರಾಮ

 

ಎಚ್‌.ಶಿವರಾಜು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.