Mandya: ಭ್ರೂಣ ಹತ್ಯೆ; ದೊಡ್ಡ ಜಾಲದ ಶಂಕೆ


Team Udayavani, Jun 1, 2024, 6:10 PM IST

Mandya: ಭ್ರೂಣ ಹತ್ಯೆ; ದೊಡ್ಡ ಜಾಲದ ಶಂಕೆ

ಮಂಡ್ಯ: ಪಾಂಡವಪುರದ ವಸತಿ ಗೃಹದಲ್ಲಿ ಹೆಣ್ಣು ಭ್ರೂಣಹತ್ಯೆ ಮಾಡಲಾಗುತ್ತಿದೆ ಎಂಬ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇದೀಗ ಮತ್ತೆ ಒಂದೊಂದಾಗಿ ಪ್ರಕರಣಗಳು ಬೆಳಕಿಗೆ ಬರಲಾರಂಭಿಸಿದ್ದು, ದೊಡ್ಡ ಜಾಲದ ಶಂಕೆ ವ್ಯಕ್ತವಾಗಿದೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂಬತ್ತು ಮಂದಿಯನ್ನು ಬಂಧಿ ಸಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ. ಈ ನಡುವೆ ಪಾಂಡವಪುರ ತಾಲೂಕಿನ ಮಹಿಳೆಯೊಬ್ಬರು ತಿಂಗಳ ಹಿಂದೆ ಗರ್ಭಪಾತ ಮಾಡಿಸಿಕೊಂಡು ಇದೀಗ ರಕ್ತಸ್ರಾವವಾಗಿ ಆಸ್ಪತ್ರೆಗೆ ದಾಖಲಾಗಿರುವ ಮತ್ತೂಂದು ಘಟನೆ ನಡೆದಿದೆ.

ಈ ಮಹಿಳೆಗೂ ಈಗಾಗಲೇ ಬಂ ಧಿತರಾಗಿರುವ ಆರೋಪಿಗಳ ತಂಡವೇ ಗರ್ಭಪಾತ ಮಾಡಿಸಿದ್ದರು ಎಂದು ತಿಳಿದು ಬಂದಿದೆ.

ಮಹಿಳೆಯನ್ನು ಅಧಿಕಾರಿಗಳು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈಕೆಗೆ ಗರ್ಭಪಾತವನ್ನು ಹೊಸಕೋಟೆ ಗ್ರಾಮದ ಹೆಂಚಿನ ಮನೆಯಲ್ಲಿ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಮಧ್ಯವರ್ತಿಗಳು ಹೊಸಬರು: ರಕ್ತಸ್ರಾವವಾಗಿ ಆಸ್ಪತ್ರೆಗೆ ದಾಖಲಾಗಿರುವ ಮಹಿಳೆಗೆ ಗರ್ಭಪಾತ ಮಾಡಿಸಲು ಸಹಕರಿಸಿದ ಮಧ್ಯವರ್ತಿಗಳು ಈಗಾಗಲೇ ಬಂಧಿತರಾಗಿರುವ ಆರೋಪಿಗಳು ಅಲ್ಲ, ಹೊಸಬರು ಎಂದು ತಿಳಿದು ಬಂದಿದ್ದು, ಅವರ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ. ಈಕೆಗೆ ಗರ್ಭಪಾತ ಮಾಡಿಸಲು ಮಧ್ಯವರ್ತಿಗಳಾಗಿ ಕೆಲಸ ಮಾಡಿದವರು ಯಾರು? ಹಾಗೂ ಸ್ಕ್ಯಾನಿಂಗ್‌ ಎಲ್ಲಿ ಮಾಡಲಾಗಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

ಸುಳಿವು ಸಿಗದ ಸ್ಕ್ಯಾನಿಂಗ್‌ ಮಾಹಿತಿ: ಗರ್ಭಪಾತ ಮಾಡಿಸಲು ಆರೋಪಿಗಳು ಎಲ್ಲಿ ಸ್ಕ್ಯಾನಿಂಗ್‌ ಮಾಡಿಸುತ್ತಿದ್ದರು ಎಂಬುದರ ಸುಳಿವು ಇದುವರೆಗೂ ಸಿಕ್ಕಿಲ್ಲ. ಇದು ಆರೋಗ್ಯಾಧಿಕಾರಿಗಳು, ಪೊಲೀಸರಿಗೂ ತಲೆ ನೋವಾಗಿ ಪರಿಣಮಿಸಿದೆ. ಮಾರುತಿ 800 ಸೇರಿದಂತೆ ಇತರೆ ಕಾರುಗಳಲ್ಲಿ ಮಧ್ಯರಾತ್ರಿ ಗರ್ಭಿಣಿಯರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ಯುವ ಮಧ್ಯವರ್ತಿಗಳು ಎರಡೂ¾ರು ನಿಮಿಷಗಳಲ್ಲಿ ಭ್ರೂಣಪತ್ತೆ ಮಾಡಿ ಕಳುಹಿಸುತ್ತಾರೆ. ಹೆಣ್ಣಾಗಿದ್ದರೆ ಗರ್ಭಪಾತ ಮಾಡಿಸಲು ಕಳುಹಿಸುತ್ತಿದ್ದರು. ಆದರೆ, ಸ್ಕ್ಯಾನಿಂಗ್‌ ಮಾಡುವ ನಿರ್ದಿಷ್ಟ ಸ್ಥಳದ ಬಗ್ಗೆ ಆರೋಪಿಗಳು ಮಾಹಿತಿ ನೀಡುತ್ತಿಲ್ಲ ಎಂದು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ತಿಳಿಸಿದರು.

ಮಹಿಳೆಯರ ಪತಿ ವಿರುದ್ಧವೂ ಪ್ರಕರಣಕ್ಕೆ ಕ್ರಮ: ಹೆಣ್ಣು ಭ್ರೂಣಹತ್ಯೆ ಪ್ರಕರಣಗಳಲ್ಲಿ ಗರ್ಭಪಾತಕ್ಕೆ ಒಳಗಾಗುವ ಮಹಿಳೆಯರ ಪತಿಯರ ಮೇಲೂ ಪ್ರಕರಣ ದಾಖಲಿಸಲು ಕ್ರಮ ವಹಿಸಲಾಗುತ್ತಿದೆ. ಮಹಿಳೆಯನ್ನು ಸಾಕ್ಷಿಯನ್ನಾಗಿ ಮಾಡಲಾಗುತ್ತಿದೆ. ಪತಿ ಹಾಗೂ ಕುಟುಂಬದವರ ಒತ್ತಡಕ್ಕೆ ಒಳಗಾ ಗಿಯೇ ಇಂಥ ಕೃತ್ಯ ಎಸಗಲು ಕಾರಣವಾಗುತ್ತಿದೆ. ಅದಕ್ಕಾಗಿ ಪತಿಯ ಮೇಲೂ ಪ್ರಕರಣ ದಾಖಲಿಸಲು ಆರೋಗ್ಯಾ ಧಿಕಾರಿಗಳು ಕ್ರಮ ವಹಿಸುತ್ತಿದ್ದಾರೆ. ಆದರೆ, ಪತಿಯನ್ನು ಬಿಟ್ಟುಕೊಡಲು ಮುಂದಾಗದ ಮಹಿಳೆಯರು ಸ್ವಇಚ್ಛೆಯಿಂದ ಮಾಡಿಸಿಕೊಂಡಿದ್ದೇನೆಂದು ಹೇಳುವ ಮೂಲಕ ಪ್ರಕರಣಗಳು ಗಟ್ಟಿಯಾಗಿ ನಿಲ್ಲಲು ಸಾಧ್ಯವಾಗುತ್ತಿಲ್ಲ. ಬಗೆದಷ್ಟು ಆಳ; ಮತ್ತಷ್ಟು ಕೇಸ್‌ಗಳು ಬೆಳಕಿಗೆ:

ಹೆಣ್ಣು ಭ್ರೂಣಹತ್ಯೆ ಪ್ರಕರಣಗಳಲ್ಲಿ ಬಗೆದಷ್ಟು ಆಳವಾಗುತ್ತಿದ್ದು, ಮತ್ತಷ್ಟು ಪ್ರಕರಣಗಳು ಬೆಳಕಿಗೆ ಬರುವ ಸಾಧ್ಯತೆ ಇದೆ. ಸುಮಾರು ವರ್ಷಗಳಿಂದ ಈ ದಂಧೆಯಲ್ಲಿ ತೊಡಗಿರುವ ಆರೋಪಿಗಳು ಸಮರ್ಪಕವಾಗಿ ಮಾಹಿತಿ ನೀಡುತ್ತಿಲ್ಲ. ಆದರೆ ಒಂದೊಂದಾಗಿ ಭ್ರೂಣಪತ್ತೆ ಹಾಗೂ ಹತ್ಯೆ ಮಾಡುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈಗಾಗಲೇ ಜಿಲ್ಲೆಯಲ್ಲಿ ನಡೆದಿರುವ ಎರಡು ಪ್ರಕರಣಗಳು ಇಡೀ ರಾಜ್ಯವನ್ನೇ ಆತಂಕಕ್ಕೆ ದೂಡುವಂತೆ ಮಾಡಿದೆ.

ಹೆಣ್ಣು ಭ್ರೂಣಪತ್ತೆ ಹಾಗೂ ಹತ್ಯೆ ಪ್ರಕರಣಗಳಲ್ಲಿ ಈಗಾಗಲೇ ಆರೋಪಿಗಳನ್ನು ಬಂ ಧಿಸಲಾಗಿದೆ. ಅದರಂತೆ ನಿನ್ನೆ ಗರ್ಭಪಾತದಿಂದ ರಕ್ತಸ್ರಾವವಾಗಿ ಚಿಕಿತ್ಸೆಗೆ ದಾಖಲಾಗಿರುವ ಮಹಿಳೆಯು ನೀಡಿರುವ ಮಾಹಿತಿಯಂತೆ ಮಧ್ಯವರ್ತಿಗಳು ಹೊಸಬರಾಗಿದ್ದು, ಹಳೇ ತಂಡವೇ ಗರ್ಭಪಾತ ಮಾಡಿಸಿರುವುದು ತಿಳಿದು ಬಂದಿದೆ. ಪ್ರಕರಣವನ್ನು ಪೊಲೀಸರು ತನಿಖೆ ನಡೆಸುತ್ತಿದ್ದು, ಮತ್ತಷ್ಟು ಮಾಹಿತಿ ಹೊರ ಬೀಳಲಿದೆ. -ಡಾ.ಬೆಟ್ಟಸ್ವಾಮಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ, ಮಂಡ್ಯ

ಎಚ್‌.ಶಿವರಾಜು

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ

KRS Dam: ಶೀಘ್ರ ಕೆಆರ್‌ಎಸ್‌ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ

Cheluvaraya-swamy

Cauvery Water: ಎಚ್‌ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ

HDK

Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್‌ಡಿಕೆ

1-eee

Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.