ಕ್ಷೇತ್ರ ವಿಂಗಡಣೆ: ಗರಿಗೆದರಿದ ರಾಜಕೀಯ


Team Udayavani, Apr 5, 2021, 1:49 PM IST

ಕ್ಷೇತ್ರ ವಿಂಗಡಣೆ: ಗರಿಗೆದರಿದ ರಾಜಕೀಯ

ಮಂಡ್ಯ: ಮುಂದಿನ ಮೇ ತಿಂಗಳಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಗಳ ಆಡಳಿತ ಅವಧಿ ಮುಗಿಯಲಿದ್ದು, ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ.

ಜಿಲ್ಲೆಯಲ್ಲಿ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವ ಮೂರುಪಕ್ಷಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಸದಸ್ಯರ ಗೆಲುವಿಗಾಗಿ ಪೈಪೋಟಿ ಜೋರಾಗಲಿದೆ. ಕಳೆದ ಬಾರಿ ಜಿಪಂನಲ್ಲಿ ಜೆಡಿಎಸ್‌ ಅಧಿಕಾರ ಹಿಡಿದಿದ್ದರೆ, 7 ತಾಲೂಕುಗಳಲ್ಲಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಅಧಿ ಕಾರ ಹಿಡಿದಿದ್ದವು. ಆದರೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿಕಮಲ ಅರಳಿರುವುದರಿಂದ ಜಿಪಂ,ತಾಪಂ ಚುನಾವಣೆಯಲ್ಲೂ ಪೈಪೋಟಿ ನೀಡಲು ಸಜಾjಗಿದೆ.

ಆಕಾಂಕ್ಷಿಗಳಲ್ಲಿ ತಳಮಳ: ಈಗಾಗಲೇ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳನ್ನು 41ರಿಂದ 45ಕ್ಕೇರಿಸಲಾಗಿದ್ದು, 5 ಕ್ಷೇತ್ರಗಳನ್ನುಹೆಚ್ಚುವರಿಯಾಗಿ ವಿಂಗಡಣೆ ಮಾಡಲಾಗಿದೆ. ಅಲ್ಲದೆ,ಕೆಲವು ಕ್ಷೇತ್ರಗಳು ಬದಲಾವಣೆಯಾಗಿದ್ದು, ಕಳೆದಬಾರಿ ಇದ್ದ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳು ಸಹ ಬೇರೆಬೇರೆ ಕ್ಷೇತ್ರಗಳಿಗೆ ಸೇರಿಕೊಂಡಿರುವುದರಿಂದ ಆಕಾಂಕ್ಷಿಗಳಲ್ಲಿ ತಳಮಳ ತಂದೊಡ್ಡಿದೆ.

ಇತ್ತ 155 ತಾಲೂಕು ಪಂಚಾಯಿತಿ ಕ್ಷೇತ್ರಗಳ ಪೈಕಿ 29ಕ್ಷೇತ್ರಗಳನ್ನು ಕಡಿತಗೊಳಿಸಿ, 126ಕ್ಕಿಳಿಸಲಾಗಿದೆ.ಇದರಿಂದ ಗ್ರಾಮ, ಕ್ಷೇತ್ರಗಳು ಬದಲಾವಣೆಯಾಗಿರುವುದು ಆಕಾಂಕ್ಷಿತರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಮೀಸಲಾತಿಯತ್ತ ಚಿತ್ತ: ಕ್ಷೇತ್ರಗಳ ವಿಂಗಡಣೆಯಿಂದ ತಮ್ಮ ಕ್ಷೇತ್ರಗಳ ವ್ಯಾಪ್ತಿ ಕೈತಪ್ಪಿರುವುದರಿಂದಮೀಸಲಾತಿಯೂ ತಲೆನೋವಾಗಿ ಪರಿಣಮಿಸಿದೆ. ಯಾವ ಕ್ಷೇತ್ರಗಳಿಗೆ ಮೀಸಲಾತಿ ನಿಗದಿ ಮಾಡುತ್ತಾರೋ ಎಂಬ ನಿರೀಕ್ಷೆಯಲ್ಲಿದ್ದಾರೆ. ಕ್ಷೇತ್ರಗಳ ವಿಂಗಡಣೆಯಿಂದ ಮೀಸಲಾತಿಯೂ ಸಹ ವ್ಯತ್ಯಾಸಗಳು ಉಂಟಾಗಬಹುದು ಎಂದು ಲೆಕ್ಕಾಚಾರ ಹಾಕಲಾಗಿದೆ.

ನಾಯಕರ ಮೇಲೆ ಒತ್ತಡ: ಕ್ಷೇತ್ರಗಳ ವಿಂಗಡಣೆಯಿಂದ ವಿಚಲಿತರಾಗಿರುವ ತಮ್ಮ ಹಿಡಿತಇರುವ ಕ್ಷೇತ್ರಗಳಲ್ಲಿ ಮೀಸಲಾತಿಯನ್ನು ತರಲು ಹಾಲಿಹಾಗೂ ಮಾಜಿ ಜನಪ್ರತಿನಿ ಧಿಗಳ ಮೇಲೆ ಒತ್ತಡಗಳುಹೆಚ್ಚಾಗಿದೆ. ತಮ್ಮ ತಮ್ಮ ಕ್ಷೇತ್ರಗಳಲ್ಲಿ ಟಿಕೆಟ್‌ಪಡೆಯಬೇಕಾದರೆ ಮೀಸಲಾತಿಯೂಇರಬೇಕಾಗುತ್ತದೆ. ಆ ನಿಟ್ಟಿನಲ್ಲಿ ಮೀಸಲಾತಿ ತರಲು ರಾಜಕೀಯ ಸದ್ದಿಲ್ಲದೆ ನಡೆಯುತ್ತಿವೆ. ತಮ್ಮ ಪಕ್ಷದನಾಯಕರ ಮೇಲೆ ಒತ್ತಡ ಹಾಕುವ ಮೂಲಕ ಮೀಸಲಾತಿ ತರುವ ಪ್ರಯತ್ನಗಳು ನಡೆಯುತ್ತಿದೆ.

ಪಕ್ಷಗಳ ಚಿಹ್ನೆಯಡಿ ಸ್ಪರ್ಧೆ :

ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷಗಳ ಹೊರತುಪಡಿಸಿ ನಡೆದರೂ, ಒಂದು ರೀತಿಯಲ್ಲಿ ಬೆಂಬಲಿತ ಅಭ್ಯರ್ಥಿಗಳೇ ಆಗಿದ್ದರು. ಆದರೆ ಜಿಪಂ ಹಾಗೂ ತಾಪಂ ಚುನಾವಣೆ ರಾಜಕೀಯ ಪಕ್ಷಗಳಚಿಹ್ನೆಯಡಿ ನಡೆಯುವುದರಿಂದ ಪಕ್ಷಗಳ ಟಿಕೆಟ್‌ ಪಡೆಯಲು ಲಾಬಿನಡೆಸಲಾಗುತ್ತಿದೆ. ಮೀಸಲಾತಿ ಪ್ರಕಟ ನಂತರ ಇದು ಜೋರಾಗುವಸಾಧ್ಯತೆ ಇದೆ. ಜಿಲ್ಲೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಾಂಪ್ರದಾಯಿಕ ಎದುರಾಳಿಗಳಾಗಿ ಪ್ರತಿ ಚುನಾವಣೆಯಲ್ಲಿ ಪೈಪೋಟಿ ನಡೆಯುತ್ತಿತ್ತು. ಆದರೆ ಕಳೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿಯಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಈಗ ಜಿಪಂ ಹಾಗೂ ತಾಪಂ ಚುನಾವಣೆಯಲ್ಲೂ ತನ್ನ ಸಾಮರ್ಥ್ಯ ಪ್ರದರ್ಶಿಸಲು ಬಿಜೆಪಿ ಸಜಾjಗಿದೆ.

ಪಕ್ಷಗಳಲ್ಲಿ ಪೈಪೋಟಿ :  ಈಗಾಗಲೇ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿರುವಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ಪಕ್ಷಗಳು ಅತಿ ಹೆಚ್ಚು ಸದಸ್ಯರ ಗೆಲ್ಲಲು ಇನ್ನಿಲ್ಲದ ಕಸರತ್ತು, ರಾಜಕೀಯಲೆಕ್ಕಾಚಾರ ಹಾಕುತ್ತಿವೆ. ಅಲ್ಲದೆ,ಸಮರ್ಥ ಅಭ್ಯರ್ಥಿಗಳ ಆಯ್ಕೆಗೂಮುಂದಾಗಿವೆ. ಆಕಾಂಕ್ಷಿಗಳು ತಮ್ಮ ಪಕ್ಷದ ನಾಯಕರ ಮೇಲೆ ಈಗಾಗಲೇ ಟಿಕೆಟ್‌ಗಾಗಿ ದುಂಬಾಲು ಬಿದ್ದಿದ್ದಾರೆ.

 

– ಎಚ್‌.ಶಿವರಾಜು

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.