ಪ್ರೇಮಿಗಳಲ್ಲಿ ವೈಮನಸ್ಸು: ಆತ್ಮಹತ್ಯೆಗೆ ಶರಣಾದ ಯುವತಿ
Team Udayavani, Jan 30, 2021, 11:41 AM IST
ಮಂಡ್ಯ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗಿ ಯುವತಿ ನೇಣಿಗೆ ಶರಣಾಗಿರುವ ಘಟನೆ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಶನಿವಾರ ನಡೆದಿದೆ.
ಗ್ರಾಮದ ನಾಗಲಿಂಗ ಮಹಾದೇವಿ ಎಂಬುವರ ಪುತ್ರಿ ಸೋನಿಕಾ ಆತ್ಮಹತ್ಯೆಗೆ ಶರಣಾದ ಯುವತಿ. ಮೃತ ಯುವತಿ ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ.
ಇದನ್ನೂ ಓದಿ:ಮಹಾನ್ ವಂಚಕ ಯುವರಾಜನ ಮತ್ತೂಂದು ದೋಖಾ ಬಯಲು
ಸೋನಿಕಾ ಹಾಗೂ ಅದೇ ಗ್ರಾಮದ ಮಹದೇವು ಎಂಬುವರ ಪುತ್ರ ಮಂಜಪ್ಪಗೌಡ ಕಳೆದ 1 ವರ್ಷಗಳಿಂದಲೂ ಪ್ರೀತಿಸುತ್ತಿದ್ದರು.
ಶುಕ್ರವಾರ ರಾತ್ರಿ ಸೋನಿಕಾ ಮೊಬೈಲ್ ಗೆ ಕರೆ ಮಾಡಿದ ಪ್ರೇಮಿ ಮಾತುಕತೆ ನಡೆಸುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಬೆದರಿಕೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದ ಎನ್ನಲಾಗಿದೆ. ಇದರಿಂದ ಬೇಸತ್ತ ಯುವತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಮೃತ ಯುವತಿ ತಂದೆ ನಾಗಲಿಂಗ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಮದ್ದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ತಾಲ್ಲೂಕು ಆಸ್ಪತ್ರೆಯಲ್ಲಿ ಪಂಚನಾಮೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ