ಕಬ್ಬು ಬಾಕಿ ಪಾವತಿಸದಿದ್ದರೆ ಹೋರಾಟ
ಬಾಕಿ ಹಣ ಪಾವತಿಸದ ಕೊಪ್ಪ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಆಕ್ರೋಶ
Team Udayavani, Jun 11, 2019, 11:27 AM IST
ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಯ ಹೊರನೋಟ.
ಮದ್ದೂರು: ಕೊಪ್ಪ ಎನ್ನೆಸ್ಸೆಲ್ ಸಕ್ಕರೆ ಕಾರ್ಖಾನೆಗೆ ರೈತರು ಸರಬರಾಜು ಮಾಡಿರುವ ಕಬ್ಬಿನ ಬಾಕಿ ಹಣ ಪಾವತಿಸದೆ ವಿಳಂಬ ಧೋರಣೆ ಅನುಸರಿಸುತ್ತಿದ್ದು ಕೂಡಲೇ ರೈತರಿಗೆ ಹಣ ಪಾವತಿಸದಿದ್ದಲ್ಲಿ ಕಾರ್ಖಾನೆ ಎದುರು ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಎಚ್ಚರಿಕೆ ನೀಡಿದ್ದಾರೆ.
ಕಳೆದ ಆರು ತಿಂಗಳ ಹಿಂದೆ ರೈತರು ಕಾರ್ಖಾನೆಗೆ ಸರಬರಾಜು ಮಾಡಿದ ಕಬ್ಬಿನ ಹಣವನ್ನು ಸಕಾಲದಲ್ಲಿ ವಿತರಿಸದೆ ನಿರ್ಲಕ್ಷ್ಯ ವಹಿಸಿದೆ. 12 ಕೋಟಿಗೂ ಅಧಿಕ ಹಣ ಪಾವತಿಸಬೇ ಕಾಗಿದೆ. ಕಾರ್ಖಾನೆ ಎದುರು ಕಬ್ಬು ಬೆಳೆಗಾರರು ನಿರಂತರ ಪ್ರತಿಭಟನೆ ಕೈಗೊಂಡು ಹಣ ನೀಡುವಂತೆ ಒತ್ತಾಯಿಸುತ್ತಿದ್ದರೂ ಆಡಳಿತ ಮಂಡಳಿ ಹಣ ವಿತರಿಸದೆ ವಿಳಂಬ ಧೋರಣೆ ಅನುಸರಿಸುತ್ತಿದೆ. ಈಗಾಗಲೇ ಶಾಲಾ ಕಾಲೇಜುಗಳು ಆರಂಭಗೊಂಡಿವೆ. ಮಕ್ಕಳನ್ನು ಶಾಲೆಗೆ ಸೇರಿಸಲು ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆಯಬೇಕಿದೆ. ಕೂಡಲೇ ಜಿಲ್ಲಾಡಳಿತ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿದರು.
ಪರಿಹಾರ ಕೊಟ್ಟಿಲ್ಲ: ಕೊಪ್ಪ ಎನ್ಎಸ್ಎಲ್ ಸಕ್ಕರೆ ಕಾರ್ಖಾನೆಯ ಸೆಂಟ್ ವಾಶ್ ವಾಟರ್ ಟ್ಯಾಂಕ್ ಹಾನಿಗೊಂಡು ಲಕ್ಷಾಂತರ ರೂ. ಬೆಳೆ ಹಾನಿ ಸಂಭವಿಸಿದ್ದರೂ ತಾಲೂಕು ಆಡಳಿತ ಪರಿಹಾರ ನೀಡುವಲ್ಲಿ ವಿಫಲವಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ಮಾಹಿತಿ ಒದಗಿಸಿದ್ದರೂ ಕಾರ್ಖಾನೆ ಅಧಿಕಾರಿಗಳು ಪರಿಹಾರ ನೀಡಲು ಹಿಂದೇಟು ಹಾಕುತ್ತಿದ್ದಾರೆಂದರು.
ಶಿಂಷಾ ನದಿಗೆ ತ್ಯಾಜ್ಯ ನೀರು ಹರಿಯುತ್ತಿರುವುದರಿಂದ ಜನ, ಜಾನುವಾರು, ಪ್ರಾಣಿ ಪಕ್ಷಿಗಳು ಸಾವನ್ನಪ್ಪುತ್ತಿದ್ದು ನದಿ ಹಾಗೂ ನಾಲೆಗೆ ತ್ಯಾಜ್ಯ ನೀರು ಹರಿಯದಂತೆ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಇಲ್ಲದಿದ್ದರೆ ಜೂ.12ರಿಂದ ಮೇಲಿನ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ