ಚಲಿಸುತ್ತಿರುವಾಗಲೇ ಹೊತ್ತಿ ಉರಿದ ದ್ವಿಚಕ್ರ ವಾಹನ: ಇಬ್ಬರಿಗೆ ಗಂಭೀರ ಗಾಯ
ಅಗ್ನಿ ಅವಘಡದ ವಿಡಿಯೋ ಎಲ್ಲೆಡೆ ವೈರಲ್
Team Udayavani, Jun 24, 2022, 7:58 PM IST
ಮಂಡ್ಯ: ಚಲಿಸುತ್ತಿರುವಾಗಲೇ ದ್ವಿಚಕ್ರ ವಾಹನವೊಂದರ ಪೆಟ್ರೋಲ್ ಚೆಲ್ಲಿ ಬೆಂಕಿ ಹೊತ್ತಿಕೊಂಡು ಉರಿದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಭಯಾನಕ ಘಟನೆ ಶ್ರೀರಂಗಪಟ್ಟಣ ಸಮೀಪದ ದರಸಗುಪ್ಪೆ ಗ್ರಾಮದ ಪಾಂಡವಪುರ-ಶ್ರೀರಂಗಪಟ್ಟಣ ರಸ್ತೆಯಲ್ಲಿ ನಡೆದಿದೆ.
ಮೈಸೂರು ಮೂಲಕ ಶಿವರಾಮು(73) ಹಾಗೂ ಅನಂತಯ್ಯ ಎಂಬುವರು ಮೈಸೂರಿನಿಂದ ಪಾಂಡವಪುರ ತಾಲೂಕಿನ ಕೆ.ಬೆಟ್ಟಹಳ್ಳಿ ಗ್ರಾಮದ ಸಂಬಂಧಿಕರ ಗೃಹ ಪ್ರವೇಶಕ್ಕೆ ತೆರಳುತ್ತಿದ್ದಾಗ ದರಸಗುಪ್ಪೆ ಗ್ರಾಮದ ಬಳಿ ಬರುತ್ತಿದ್ದಂತೆ ತಾವು ತಂದಿದ್ದ ಜುಪಿಟರ್ ಬೈಕ್ನ ಪೆಟ್ರೋಲ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ನಿಲ್ಲಿಸುವಷ್ಟರಲ್ಲೇ ನಡುರಸ್ತೆಯಲ್ಲಿ ಬೈಕ್ಗೆ ಬೆಂಕಿ ಅವರಿಸಿಕೊಂಡಿದೆ. ಶಿವರಾಮು ಬೆಂಕಿ ಕೆನ್ನಾಲಿಗೆ ಸಿಲುಕಿದ್ದಾರೆ. ಇದರಿಂದ ಹೊರ ಬರಲಾರದೆ ನರಳಾಡುತ್ತಿದ್ದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ರಕ್ಷಿಸಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್