ಸರ್ಕಾರಿ ಕಾಲೇಜಲ್ಲಿ ಜಾನಪದ ಜಾತ್ರೆ 


Team Udayavani, Mar 8, 2019, 7:16 AM IST

sarkari-coll.jpg

ಮಂಡ್ಯ: ಇದೇ ಮೊದಲ ಬಾರಿಗೆ ನಗರದ ಸರ್ಕಾರಿ ಮಹಾವಿದ್ಯಾಲಯದಲ್ಲಿ ನಡೆದ ಜಾನಪದ ಜಾತ್ರೆಯಿಂದ ಗ್ರಾಮೀಣ ಸೊಗಡು ತುಂಬಿಕೊಂಡಿತ್ತು. ಜಾತ್ರೆ ಸಂಭ್ರಮದಲ್ಲಿ ವಿದ್ಯಾಥಿಗಳು ಸಂತಸದಿಂದ ಪಾಲ್ಗೊಂಡು ವಿಶೇಷ ಮೆರುಗು ತುಂಬಿದರು.

ಜಾನಪದ ಜಾತೆ ಹಾಗೂ ಕನ್ನಡ ರಾಜ್ಯೋತ್ಸವಕ್ಕೆ ಪೂರ್ವ ತಯಾರಿ ಮಾಡಿಕೊಳ್ಳಲು ಕಾಲೇಜಿನ ವಿದ್ಯಾರ್ಥಿಗಳು ಹಿರಿಯ ಜಾನಪದ ಕಲಾವಿದರ ಮಾರ್ಗದರ್ಶನದಲ್ಲಿ ಜಾನಪದ ಕಲಾ ಪ್ರಕಾರಗಳ ಕಲಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಗುರುವಾರ ನಡೆದ ಜಾನಪದ ಜಾತ್ರೆ ಸಮಯದಲ್ಲಿ ಧ್ವಜ ಕುಣಿತ, ಪಟ ಕುಣಿತ, ವೀರಗಾಸೆ, ಪೂಜಾ ಕುಣಿತ, ಬೀಸು-ಕಂಸಾಳೆ ಸೇರಿದಂತೆ ಹಲವು ಜನಪದ ಕಲಾತಂಡಗಳೊಂದಿಗೆ ಕಾಲೇಜಿನ ಮುಖ್ಯದ್ವಾರದಿಂದ ಮೆರವಣಿಗೆ ನಡೆಸಿ ಗಮನ ಸೆಳೆದರು. 

ವೇದಿಕೆ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಭಾಗವಹಿಸಿ ದೇಶೀಯ ಸಂಸ್ಕೃತಿ ಸೊಗಡನ್ನು ಪಸರಿಸಿದರಲ್ಲದೆ, ತಮ್ಮೊಳಗಿನ ಕಲಾ ಪ್ರತಿಭೆಯನ್ನು  ವಿಶೇಷ ರೀತಿಯಲ್ಲಿ ಅನಾವರಣಗೊಳಿಸಿದರು.

ದೇಸಿ ಸಂಭ್ರಮ: ವಿಭಿನ್ನ ವಿನ್ಯಾಸದ ಜನಪದ ಉಡುಗೆ-ತೊಡಗೆಗಳಲ್ಲಿ ಕಂಗೊಳಿಸಿದ ವಿದ್ಯಾರ್ಥಿಗಳು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದರು. ಕ್ಯಾಂಪನ್‌ ತುಂಬೆಲ್ಲಾ ಓಡಾಡುತ್ತಿದ್ದ ಯುವತಿಯರು ಆಕರ್ಷಕ ಉಡುಗೆಗಳೊಂದಿಗೆ ಎಲ್ಲರ ಗಮನ ಸೆಳೆದರೆ, ತಮಟೆ ಸದ್ದಿಗೆ ಸಾಮೂಹಿಕವಾಗಿ ಸ್ಟೆಪ್‌ ಹಾಕಿದ ಯುವಕರು ಜಾತ್ರೆಗೆ ಮತ್ತಷ್ಟು ರಂಗು ತಂದರು. ನಿತ್ಯವೂ ತರಗತಿ, ಪಾಠ-ಪ್ರವಚನಗಳಲ್ಲಿ ತೊಡಗುತ್ತಿದ್ದ ವಿದ್ಯಾರ್ಥಿಗಳಿಗೆ ದೇಸಿ ಸಂಭ್ರಮ ಹೆಚ್ಚು ಖುಷಿ ನೀಡಿತು. ಈ ವೈಭವವನ್ನು ಸೆಲ್ಫಿ ಮೂಲಕ ಸೆರೆಹಿಡಿದ ವಿದ್ಯಾರ್ಥಿಗಳು ಮೊಬೈಲ್‌ಗ‌ಳಲ್ಲಿ ಮಾತ್ರವಲ್ಲದೆ, ತಮ್ಮ ಸ್ಮೃತಿ ಪಠಲದಲ್ಲೂ ಉಳಿಸಿಕೊಂಡರು.

ಒಂದು ತಿಂಗಳ ತಯಾರಿ ನಡೆಸಿ ಜಾನಪದ ಕಲೆಗಳನ್ನು ವೇದಿಕೆ ಕಾರ್ಯಕ್ರಮದಲ್ಲಿ ಪ್ರದರ್ಶಿಸಿದ ಕಾಲೇಜಿನ ವಿದ್ಯಾರ್ಥಿಗಳು, ಎಲ್ಲರಿಂದ ಸೈ ಎನಿಸಿಕೊಂಡರು. ಧ್ವಜ ಕುಣಿತ, ಪಟ ಕುಣಿತ, ವೀರಾಗಾಸೆ ಕಲಾವಿದರ ಗೈರತ್ತು, ಪೂಜಾ ಕುಣಿತ ತಂಡಗಳು ನೀಡಿ ದೃಷ್ಟಾಂತ ಬರಪೂರ ಸಿಳ್ಳೆ, ಚಪ್ಪಾಳೆಗಳನ್ನು ಪಡೆದವು. ಕೊರಳಲ್ಲಿ ರಾರಾಜಿಸುತ್ತಿದ್ದ ಕನ್ನಡ ಭಾವುಟ ಹಾಕಿದ್ದ ಇತರೆ ವಿದ್ಯಾರ್ಥಿಗಳು ಜಾತ್ರೆಯ ವಿಶೇಷ ಹೆಚ್ಚಿಸಿದರು.

ಪಠ್ಯದ ವಿಷಯವಾಗಲಿ: ಜಾನಪದ ಕಲೆ ಮತ್ತು ಸಂಸ್ಕೃತಿಯನ್ನ ಶಾಲೆ ಮತ್ತು ಕಾಲೇಜಿನ ಪಠ್ಯಪುಸ್ತಕದಲ್ಲಿ ಅಳಡಿಸಿ ನಮ್ಮ ಸ್ವಾಭಿಮಾನದ ಸಂಕೇತವಾಗಿರುವ ಜಾನಪದ ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್‌ನ ಅಧ್ಯಕ್ಷ ಟಿ.ತಿಮ್ಮೇಗೌಡ ಹೇಳಿದರು. 

ಕನ್ನಡ ರಾಜ್ಯೋತ್ಸವ ಮತ್ತು ಜಾನಪದ ಜಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಪೀಳಿಗೆಗೆ ಜಾನಪದ ಕಲೆಯ ಬಗ್ಗೆ ಆಸಕ್ತಿ ಬೆಳೆಸಿಬೇಕಾಗಿದೆ. ನಮ್ಮ ಹೆಣ್ಣುಮಕ್ಕಳು ಜಾನಪದ ಸಂಸ್ಕೃತಿಯನ್ನು ಮುಂದಕ್ಕೆ ಕೊಂಡೊಯ್ಯುವ ರಾಯಭಾರಿಗಳಾಗಿದ್ದಾರೆ. ಹಬ್ಬದ ದಿನಗಳಲ್ಲಿ ಶಾಸ್ತ್ರ , ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅವರು, ಹಿಂದಿನ ಆಚಾರಗಳನ್ನು ಮುಂದುವರೆಸುತ್ತಿದ್ದಾರೆ. ಇನ್ನು ಯುವಕರು ಸಂಸ್ಕೃತಿಯ ರಕ್ಷಕರಾಗಿದ್ದಾರೆ ಎಂದು ಬಣ್ಣಿಸಿದರು.

ಮೈಸೂರಿನ ಡಿ.ಬನುಮಯ್ಯ ವಾಣಿಜ್ಯ ಮತ್ತು ಕಲಾ ಕಾಲೇಜಿನ ಪ್ರಾಧ್ಯಾಪಕ ಎಂ.ಮಹಾಲಿಂಗು ಪ್ರಧಾನ ಭಾಷಣ ಮಾಡಿದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ.ಮಹಾಲಿಂಗು ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ಡಾ.ಎನ್‌.ಎಸ್‌.ಶಂಕರೇಗೌಡ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿ.ಕೆ.ರವಿಕುಮಾರ್‌ ಚಾಮಲಾಪುರ ಹಾಜರಿದ್ದರು.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.