ಸುರಕ್ಷಾ ಕ್ರಮ ಅನುಸರಿಸಿ: ಡಿಎಚ್ಒ
Team Udayavani, May 18, 2020, 7:07 AM IST
ಮಂಡ್ಯ: ಲಾಕ್ಡೌನ್ ಸಡಿಲಿಕೆ ನಂತರವೂ ಸುರಕ್ಷತಾ ಕ್ರಮಗಳ ಮೂಲಕ ಎಚ್ಚರಿಕೆ ವಹಿಸಿ ಕೊರೊನಾ ತೀವ್ರತೆ ತಡೆಗಟ್ಟಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಸಲಹೆ ನೀಡಿದರು.
ನಗರದಲ್ಲಿ ಡಿ.ದೇವರಾಜ ಅರಸು ವೇದಿಕೆ, ಸಾಂಜೋ ಆಸ್ಪತ್ರೆ ಮತ್ತು ಸಾಂಥೋಂ ಸಂಸ್ಥೆ ಆಯೋಜಿಸಿದ್ದ ಕೊರೊನಾ ಮತ್ತು ಕಾಯಕ ಸಮಾಜಗಳ ಸ್ಥಿತಿಗತಿ ಕುರಿತ ಅವಲೋಕನ ಕಾರ್ಯಕ್ರಮದಲ್ಲಿ ವಿವಿಧ ಹಿಂದುಳಿದ ಸಮಾಜಗಳಿಗೆ ಆಹಾರ ಕಿಟ್ ವಿತರಿಸಿ ಮಾತನಾಡಿದರು. ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾವಿನ ಸಂಖ್ಯೆ ಕಡಿಮೆ ಇದೆ.
ಆದರೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಎಚ್ಚರಿಕೆ ಅಗತ್ಯ. ಲಾಕ್ಡೌನ್ನಲ್ಲಿ ಕೆಲವು ಸಡಿಲಿಕೆ ಸಿಕ್ಕರೂ ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆಯಂತಹ ಸುರಕ್ಷತಾ ಕ್ರಮಗಳನ್ನು ಮುಂದುವರಿಸಬೇಕು ಎಂದರು. ಕೊರೊನಾ ವೈರಸ್ಗೆ ಇದುವರೆಗೂ ಯಾವುದೇ ಔಷಧ-ಚುಚ್ಚುಮದ್ದು ಕಂಡು ಹಿಡಿಯದ ಕಾರಣ ಕೊರೊನಾ ಜೊತೆ ಬದುಕುವ ಸ್ಥಿತಿ ಬಂದಿದೆ. ಕೊರೊನಾ ವಿರುದ್ದ ಹೋರಾಡುತ್ತಲೇ ನಮ್ಮ ಜೀವ ರಕ್ಷಿಸಿಕೊಳ್ಳಬೇಕು.
ವಿಶೇಷವಾಗಿ ಮಕ್ಕಳು, ಬಾಣಂತಿಯರು, ವೃದಟಛಿರು ಹೆಚ್ಚಿನ ಕಾಳಜಿ ಹೊಂದಬೇಕು ಎಂದರು. ದೇವರಾಜ ಅರಸು ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾಧ್ಯಕ್ಷ ಸಂದೇಶ್, ಸಾಂಥೋಂ ಸಮಾಜ ಸೇವಾ ವಿಭಾಗದ ಮುಖ್ಯಸ್ಥ ಜೋಷ್ ಕುಟ್ಟಿ, ಹಿಂದುಳಿದ ಸಮಾಜದ ಮುಖಂಡರಾದ ಕೃಷ್ಣ, ದಾಸ್ಪ್ರಕಾಶ್, ಸಿದ್ದಶೆಟ್ಟಿ, ಕಲಾವಿದ ಪ್ರಕಾಶ್, ಕಾಂತರಾಜು, ಸೋಮಣ್ಣ, ವೈರಮುಡಿ,ಪ್ರದೀಪ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ