![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಕಬ್ಬು ಬಾಕಿ ಪಾವತಿಗೆ ಆಗ್ರಹಿಸಿ ಅಹೋರಾತ್ರಿ ಧರಣಿ
ಚಾಂಷುಗರ್ ಕಾರ್ಖಾನೆ ವಿರುದ್ಧ ರೊಚ್ಚಿಗೆದ್ದ ರೈತರು • ಮುಖ್ಯದ್ವಾರದ ಬಳಿ ಕಾರ್ಮಿಕರನ್ನು ಒಳಬಿಡದೆ ಆಕ್ರೋಶ
Team Udayavani, May 8, 2019, 3:42 PM IST
![mandya-tdy-2..](https://www.udayavani.com/wp-content/uploads/2019/05/mandya-tdy-2..-1-620x186.jpg)
ಭಾರತೀನಗರ: ರೈತರು ಸರಬರಾಜು ಮಾಡಿದ ಕಬ್ಬು ಬಾಕಿ ಪಾವತಿಸಲು ಆಗ್ರಹಿಸಿ ಚಾಂಷುಗರ್ ಕಾರ್ಖಾನೆ ವಿರುದ್ಧ ರೊಚ್ಚಿಗೆದ್ದ ರೈತರು ಕಾರ್ಮಿ ಕರನ್ನು ಕೆಲಸಕ್ಕೆ ತೆರಳದಂತೆ ಅಡ್ಡಗಟ್ಟಿ ಮುಖ್ಯದ್ವಾರದ ಬಳಿ ಅಹೋರಾತ್ರಿ ಧರಣಿ ನಡೆಸಿದರು.
ರೈತರು ಬಾಕಿ ಹಣಕ್ಕಾಗಿ ಹಲವಾರು ಪ್ರತಿಭಟನೆ ನಡೆಸಿದರೂ ಕ್ರಮ ಕೈಗೊಳ್ಳದೆ ರೈತರನ್ನು ಸತಾಯಿಸುತ್ತಿದ್ದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ವಿರುದ್ಧ ರೊಚ್ಚಿಗೆದ್ದ ರೈತರು ಕಾರ್ಮಿಕರು ಕೆಲಸಕ್ಕೆ ತೆರಳುವ ವೇಳೆ ಮುಖ್ಯದ್ವಾರದ ಬಳಿ ಅಡ್ಡಗಟ್ಟಿ ಆಡಳಿತ ಮಂಡಳಿ ಬಾಕಿ ಹಣ ನೀಡುವವರೆಗೂ ಒಳಪ್ರವೇಶಿಸದಂತೆ ತಡೆದು ಕಬ್ಬು ಬೆಳೆಗಾರರು ಅಹೋರಾತ್ರಿ ಧರಣಿ ಕುಳಿತರು.
ರೈತರ ಅಲೆದಾಟ: ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಿ ಆರೇಳು ತಿಂಗಳು ಕಳೆದಿದೆ. 35 ಕೋಟಿ ರೂ. ಬಾಕಿ ಹಣ ಪಾವತಿಸಬೇಕಿದೆ. ಬಾಕಿ ಪಾವತಿಸದ ಕಾರಣ ರೈತರು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದಾರೆ.
ರೈತರು ಪ್ರತಿಭಟಿಸಿದಾಗಲೆಲ್ಲಾ ನಾಲ್ಕೈದು ಬಾರಿ ಕಾಲಾವಕಾಶ ಕೇಳಿಕೊಂಡಿದ್ದರು. ಆದರೂ ತಿಂಗಳುಗಳು ಉರುಳಿದರೂ ಬಾಕಿ ಮಾತ್ರ ಪಾವತಿಯಾಗಿಲ್ಲ. ಸಾಲ ಮಾಡಿ ಕಬ್ಬು ಬೆಳೆದು ಕಾರ್ಖಾನೆಗೆ ಸರಬರಾಜು ಮಾಡಿ ಹಣಕ್ಕಾಗಿ ಅಲೆಯುವಂತಾಗಿದೆ. ಆಡಳಿತ ಮಂಡಳಿ ರೈತರನ್ನು ಗೋಳಾಡಿಸುತ್ತಿದೆ.
ರೈತರ ಸಹನೆ, ತಾಳ್ಮೆ ಮೀರಿ ಹೋಗಿದೆ. ಹಣ ಕೊಡುವವರೆಗೂ ಕಾರ್ಖಾನೆ ಬಿಟ್ಟು ಕದಲುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತರು.
ಹೊರಗುಳಿದ ನೌಕರರು: ರೈತರು ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದುದರಿಂದ 500ಕ್ಕೂ ಹೆಚ್ಚು ಕಾರ್ಮಿಕರು (ನೌಕರರು) ಒಳಗೆ ಹೋಗಲಾಗದೆ ಹೊರಗೆ ಉಳಿಯುವಂತಾಯಿತು. ಇದರಿಂದ ಕಾರ್ಮಿಕರು ಕಾರ್ಖಾನೆಯ ರಸ್ತೆ ಬದಿಯಲ್ಲೇ ಸಂಜೆಯವರೆಗೂ ನಿಲ್ಲುವಂತಾಯಿತು.
ಪ್ರತಿಭಟನೆಯಲ್ಲಿ ಶೆಟ್ಟಹಳ್ಳಿ ಹೊನ್ನೇಗೌಡ, ಬೋರಾಪುರ ಪ್ರಕಾಶ್, ಕರಡಕೆರೆ ಹನುಮಂತು, ಗೌಡಯ್ಯನದೊಡ್ಡಿ ಭರತ್, ಕಲ್ಲಳ್ಳಿ ಶಿವಣ್ಣ, ಕುಳ್ಳೇಗೌಡ ಪರಿಮಳ, ಸ್ವಾಮಿ, ಸಂಪತ್, ನಾರಾಯಣ್ ಸುತ್ತಮುತ್ತಲ ಗ್ರಾಮಗಳ ರೈತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ](https://www.udayavani.com/wp-content/uploads/2024/07/KRS-150x84.jpg)
KRS Dam ಭರ್ತಿಗೆ ಒಂದೇ ಅಡಿ! 45 ವರ್ಷಗಳಲ್ಲಿ 32 ಬಾರಿ ಭರ್ತಿ; ಜು. 27ಕ್ಕೆ ಸಿಎಂ ಬಾಗಿನ
KRS Dam: ಶೀಘ್ರ ಕೆಆರ್ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
![Cheluvaraya-swamy](https://www.udayavani.com/wp-content/uploads/2024/07/Cheluvaraya-swamy-150x90.jpg)
Cauvery Water: ಎಚ್ಡಿಕೆ ಕಾವೇರಿ ಸಮಸ್ಯೆ ಬಗೆಹರಿಸಿದ್ರೆ, ನಾನು ಚುನಾವಣೆಗೆ ಸ್ಪರ್ಧಿಸಲ್ಲ
![HDK](https://www.udayavani.com/wp-content/uploads/2024/07/HDK-3-150x90.jpg)
Cauvery Water Problem; ಸಾಯುವುದರೊಳಗೆ ಕಾವೇರಿ ಸಮಸ್ಯೆಗೆ ಮುಕ್ತಿ: ಎಚ್ಡಿಕೆ
![1-eee](https://www.udayavani.com/wp-content/uploads/2024/07/1-eee-150x82.jpg)
Mandya; ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.