ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ನಿಧನ
Team Udayavani, Jul 17, 2021, 9:07 PM IST
ಮಂಡ್ಯ: ರೈತ ಹಿತರಕ್ಷಣೆ ವೇದಿಕೆ ಅಧ್ಯಕ್ಷ, ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಅವರು ಶನಿವಾರ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
94 ವರ್ಷ ವಯಸ್ಸಿನ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದ ಅವರು ಇಂದು ನಿಧನರಾಗಿದ್ದಾರೆ.
1980ರ ದಶಕದಲ್ಲಿ ಆರ್ ಗುಂಡೂರಾವ್ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದ ಮಾದೇಗೌಡರು ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ 1989 ಮತ್ತು 1991ರಲ್ಲಿ ಎರಡು ಬಾರಿ ಆಯ್ಕೆಗೊಂಡಿದ್ದರು.
ಕಾವೇರಿ ಹೋರಾಟ ಸೇರಿದಂತೆ ಹಲವಾರು ರೈತ ಪರ ಹೋರಾಟಗಳಲ್ಲಿ ಮಾದೇಗೌಡರು ಸಕ್ರಿಯರಾಗಿದ್ದರು.
ಹಿರಿಯ ನಾಯಕ ಮಾದೇಗೌಡ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದು, ಮುತ್ಸದ್ಧಿ ರಾಜಕಾರಣಿ, ರೈತ ಹೋರಾಟಗಾರ ಜಿ. ಮಾದೇಗೌಡರ ನಿಧನ ಸಂಗತಿ ತೀವ್ರ ನೋವುಂಟು ಮಾಡಿದೆ. ಕಾವೇರಿ ರಕ್ಷಣೆ, ರೈತರ ಹಿತಕ್ಕಾಗಿ ಶ್ರಮಿಸಿದ್ದವರು ಮಾದೇಗೌಡರು. ಅವರ ನಿಧನದಿಂದ ಮಂಡ್ಯ ತನ್ನ ಹೆಮ್ಮೆಯ ಪುತ್ರನನ್ನು ಕಳೆದುಕೊಂಡಿದೆ. ಇತ್ತೀಚೆಗಷ್ಟೇ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಂದಿದ್ದೆ. ಅವರು ಗುಣವಾಗುವ ವಿಶ್ವಾಸ ಹುಸಿಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ