ಕುಟುಂಬ ರಾಜಕಾರಣಕೆ ಬೇಸತ್ತು ಕೈಗೆ ಬೆಂಬಲ


Team Udayavani, Feb 4, 2023, 3:58 PM IST

tdy-16

ಮಂಡ್ಯ: ಜೆಡಿಎಸ್‌ ಪಕ್ಷ ಒಂದು ಕುಟುಂಬಕ್ಕೆ ಸೀಮಿತವಾಗಿದೆ. ಪಕ್ಷದ ಕುಟುಂಬ ರಾಜಕಾರಣಕ್ಕೆಬೇಸತ್ತು ಪಕ್ಷದಿಂದ ಹೊರ ಬಂದು ಕಾಂಗ್ರೆಸ್‌ಬೆಂಬಲಿಸಲು ಮುಂದಾಗಿದ್ದೇವೆ ಎಂದು ಮನ್‌ ಮುಲ್‌ ಮಾಜಿ ಅಧ್ಯಕ್ಷ ಜವರೇಗೌಡ ಹೇಳಿದರು.

45 ವರ್ಷಗಳಿಂದ ಜೆಡಿಎಸ್‌ ಪಕ್ಷಕ್ಕಾಗಿ ದುಡಿದುಕೊಂಡು ಬಂದಿದ್ದೇವೆ. ಆದರೆ, ಅಲ್ಲಿ ಹಿರಿಯರೆಂಬ ಯಾವುದೇ ಗೌರವ ಇಲ್ಲ. ಕುಟುಂಬ ರಾಜಕಾರಣದಲ್ಲೇ ಮುಳುಗಿದೆ. ಅವರ ಮಕ್ಕಳು,ಮೊಮ್ಮಕ್ಕಳಿಗೆ ಜೀತ ಮಾಡಲು ನಾವು ಸಿದ್ಧರಿಲ್ಲ. ಆದ್ದರಿಂದ ನಾನು, ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷಬೆಟ್ಟೇಗೌಡರು, ತಾಪಂ ಮಾಜಿ ಅಧ್ಯಕ್ಷ ದಾಸೇಗೌಡಮೂವರು ಸಹ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದೇವೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುರೇಶ್‌ಗೌಡ ಬೆಳೆಯಲು ಚಲುವರಾಯಸ್ವಾಮಿ ಕಾರಣ: ನನ್ನ ಹಾಗೂ ಚಲುವರಾಯಸ್ವಾಮಿ ನಡುವೆ ಬಿನ್ನಾಭಿಪ್ರಾಯವಿತ್ತು. ಆದರೆ, ಅವರು ಜಿಲ್ಲೆಯಲ್ಲಿಜೆಡಿಎಸ್‌ ಕಟ್ಟಿ ಬೆಳೆಸಿದ್ದರು. ಈಗ ಕಾಂಗ್ರೆಸ್‌ಗೆ ಬಂದು ಇಲ್ಲಿಯೂ ಸಹ ಪಕ್ಷವನ್ನು ಸದೃಢವಾಗಿ ಕಟ್ಟುವ ಕೆಲಸಮಾಡುತ್ತಿದ್ದಾರೆ. ಜೆಡಿಎಸ್‌ನ ಶಾಸಕ ಸುರೇಶ್‌ಗೌಡಬೆಳೆಯಲು ಇದೇ ಚಲುವರಾಯಸ್ವಾಮಿ ಕಾರಣರಾಗಿದ್ದಾರೆ ಎಂದರು.

ಜಿಲ್ಲೆಗೆ ಜೆಡಿಎಸ್‌ ಕೊಡುಗೆ ಶೂನ್ಯ: ಜಿಲ್ಲೆಯಲ್ಲಿ ಜೆಡಿಎಸ್‌ ಪಕ್ಷ ಬೆಳೆಸಿದ್ದೇವೆ. ಆದರೆ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಮಾಜಿ ಸಿಎಂಎಚ್‌.ಡಿ.ಕುಮಾರಸ್ವಾಮಿ ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸಲಿಲ್ಲ. ಕೇವಲ ಮತ ಗಳಿಕೆಗಾಗಿ ಹಾಗೂನಮ್ಮಂಥ ಹಿರಿಯ ನಾಯಕರನ್ನು ಪಕ್ಷಕ್ಕಾಗಿ ದುಡಿಸಿಕೊಳ್ಳಲು ಇಟ್ಟುಕೊಂಡಿದ್ದಾರೆ. ಜೆಡಿಎಸ್‌ನಿಂದ ಜಿಲ್ಲೆಗೆ ಅನ್ಯಾಯವೇ ಆಗಿದೆ ಎಂದು ಕಿಡಿಕಾರಿದರು.

ಸುರೇಶ್‌ಗೌಡರಿಂದ ಹಣ ನೀಡದೆ ಮೋಸ: 2018ರ ಚುನಾವಣೆಯಲ್ಲಿ ಸುರೇಶ್‌ಗೌಡ ಗೆಲುವಿಗೆ ಫೈಟರ್‌ ರವಿ ಹಣ ನೀಡಿದ್ದರಿಂದ ಸಾಧ್ಯವಾಯಿತು. ಅದೇರೀತಿ 2008ರ ಚುನಾವಣೆಯಲ್ಲಿ ಎಚ್‌.ಟಿ. ಕೃಷ್ಣೇಗೌಡರಿಂದ 32 ಲಕ್ಷ ರೂ. ಹಣ ಪಡೆದು ಚುನಾವಣೆ ನಡೆಸಿ ನಂತರ ಹಣ ನೀಡದೆ ಮೋಸ ಮಾಡಿದ್ದಾರೆ. 2004ರಲ್ಲಿ ಎಲ್‌.ಆರ್‌.ಶಿವರಾಮೇಗೌಡರು ಸುರೇಶ್‌ಗೌಡರನ್ನು ನಾಗಮಂಗಲಕ್ಕೆ ಕರೆತಂದು ರಾಜಕೀಯವಾಗಿ ಪರಿಚಯ ಮಾಡಿಸಿದರು. ಆದರೆ,ವಿಧಾನ ಪರಿಷತ್‌ ಚುನಾವಣೆಯಲ್ಲಿ ಎಲ್‌.ಆರ್‌.ಶಿವರಾಮೇಗೌಡ ವಿರುದ್ಧ ಮಾಡಿದರು. ಕಳೆದ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ಚುನಾವಣೆಯಲ್ಲಿ ಅಪ್ಪಾಜಿಗೌಡರನ್ನು ಸಹ ಸೋಲಿಸಿದರು ಎಂದು ಆರೋಪಿಸಿದರು.

ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ: ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. 2018ರ ಬಳಿಕ ಏಜೆಂಟರುಗಳದ್ದೇ ಕಾರು ಬಾರು. ಲಂಚಕ್ಕೆ ಮಿತಿ ಇಲ್ಲದಂತಾಗಿದೆ. ರೈತರು, ಜನಸಾಮಾನ್ಯರ ಕೆಲಸಗಳು ಹಣ ಇಲ್ಲದೆ ಆಗುತ್ತಿಲ್ಲ. ಇಡೀಕಚೇರಿಯ ಕಂಬಗಳು ಹಣ ಕೇಳುವಂತಾಗಿದೆ.ಸರ್ವೆಯರ್‌ಗಳಿಗೆ ಎಕರೆ ಒಂದಕ್ಕೆ 25 ಸಾವಿರ ರೂ. ಫಿಕ್ಸ್‌ ಮಾಡಲಾಗಿದೆ. ಇದರಿಂದ ಎಕರೆಗೆ 60 ಸಾವಿರರೂ.ನಿಂದ 1 ಲಕ್ಷದವರೆಗೂ ವ್ಯಾಪಾರ ನಡೆಯುತ್ತಿದೆ.ಹಣ ಕೊಡದಿದ್ದಕ್ಕೆ ನನ್ನ ಅರ್ಜಿಯನ್ನೇ ವಿಳಂಬಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಈಬಗ್ಗೆ ಲೋಕಾಯುಕ್ತ ತನಿಖೆಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಜಿಲ್ಲೆಗೆ ಬಂದಿದ್ದ ಯೋಜನೆ ಹಾಸನಕ್ಕೆ ಶಿಫ್ಟ್‌: ಜಿಲ್ಲೆಯಲ್ಲಿ ಕುಮಾರಸ್ವಾಮಿ ಅವರ ಮಾತಿಗೆ ಏಳುಮಂದಿ ಶಾಸಕರನ್ನು ಗೆಲ್ಲಿಸಲಾಯಿತು. ಆದರೆ,ಜಿಲ್ಲೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಯಿತು.ಮನ್‌ಮುಲ್‌ ಮಂಜೂರಾಗಿದ್ದ ಪಶು ಆಹಾರಉತ್ಪಾದನಾ ಘಟಕ, ಹಾಲಿನ ಪೌಡರ್‌ ಘಟಕವನ್ನು ಹಾಸನಕ್ಕೆ ತೆಗೆದುಕೊಂಡು ಹೋಗಲಾಯಿತು. ಹಾಸನಕ್ಕೆ ಐಐಟಿ, ಏರ್‌ಪೋರ್ಟ್‌ ಯೋಜನೆಕೊಂಡೊಯ್ದು ಮಂಡ್ಯ ಜಿಲ್ಲೆಗೆ ಶೂನ್ಯ ಕೊಡುಗೆ ನೀಡಿದ್ದಾರೆ. ಇರುವ ಏಕೈಕ ಮೈಷುಗರ್‌ ಕಾರ್ಖಾನೆಯನ್ನು ಆರಂಭಿಸಲಿಲ್ಲ ಎಂದುಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಕೃಷ್ಣೇಗೌಡ, ರಾಜೇಗೌಡ, ಬಾಲಕೃಷ್ಣ, ಸತ್ಯ, ಜಯಣ್ಣ, ಆನಂದಣ್ಣ ಹಾಜರಿದ್ದರು.

ಮತಕ್ಕಾಗಿ ಕಾರ್ಯಕರ್ತರ ಬಳಕೆ : ಜಿಲ್ಲೆಯ ಅಭಿವೃದ್ಧಿಗೆ ಸಹಕರಿಸದ ಜೆಡಿಎಸ್‌ ಪಕ್ಷಕೇವಲ ಜಿಲ್ಲೆಯ ಜನರನ್ನು ಮತಕ್ಕಾಗಿ ಹಾಗೂಪಕ್ಷದ ಕಾರ್ಯಕರ್ತರನ್ನು ದುಡಿಯಲುಇಟ್ಟುಕೊಂಡಿದ್ದಾರೆ. ಆದ್ದರಿಂದ ಬೇಸತ್ತು ನಾವೆಲ್ಲರೂ ಕಾಂಗ್ರೆಸ್‌ ಪಕ್ಷ ಸೇರುತ್ತಿದ್ದೇವೆ. ಇನ್ನೂಗ್ರಾಪಂ, ತಾಪಂ, ಜಿಪಂ ಮಾಜಿ ಸದಸ್ಯರು ಸಹ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಮನ್‌ ಮುಲ್‌ ಮಾಜಿ ಅಧ್ಯಕ್ಷ ಜವರೇಗೌಡ ತಿಳಿಸಿದರು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.