ಮನೆ ಬಾಗಿಲಿಗೇ ಹಣ್ಣು, ತರಕಾರಿ: ಡಿಸಿ
Team Udayavani, Apr 7, 2020, 3:08 PM IST
ಮಂಡ್ಯ: ಜಿಲ್ಲೆಯಲ್ಲಿರುವ ಹಾಪ್ಕಾಮ್ಸ್ ಗಳ ಮುಖಾಂತರ ಜನರಿಗೆ ಅವಶ್ಯವಿರುವ ಹಣ್ಣು, ತರಕಾರಿಗಳನ್ನು ಮನೆ ಮನೆಗೆ ತಲುಪಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಹೇಳಿದರು.
ಜಿಲ್ಲಾ ಹಾಪ್ಕಾಮ್ಸ್ ಹಾಗೂ ತೋಟಗಾರಿಕೆ ಇಲಾಖೆಯಿಂದ ಗ್ರಾಹಕರ ಮನೆ ಬಾಗಿಲಿಗೆ ಕಲ್ಲಂಗಡಿ ಹಾಗೂ ಕಬೂìಜ ಮಾರಾಟ ಎಂಬ ವಿನೂತನ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ಹಾಪ್ಕಾಮ್ಸ್ ಗಳು ಕೆಲಸ ನಿರ್ವಹಿಸುತ್ತಿದ್ದು, ಇವುಗಳ ಜೊತೆಯಲ್ಲಿ ಆಫೆ ಆಟೋಗಳ ಮುಖಾಂತರ ಹಣ್ಣು ಮಾರಾಟ ಮಾಡಲು ಅನುಮತಿ ನೀಡಿ, ಗ್ರೀನ್ ಪಾಸ್ಗಳನ್ನು ವಿತರಣೆ ಮಾಡಿದ್ದೇವೆ. ಇಂದು ಮನೆ ಮನೆಗಳಿಗೆ ಹಣ್ಣು ತಲುಪಿಸಬೇಕೆಂಬ ಉದ್ದೇಶದಿಂದ ಕಬೂìಜ, ಕಲ್ಲಂಗಡಿ ಹಾಗೂ ತರಕಾರಿಗಳನ್ನು ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರು ಇದನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಕೋವಿಡ್ 19 ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾರ್ವ ಜನಿಕ ಸಹಭಾಗಿತ್ವದ ಅವಶ್ಯಕತೆ ಇದೆ. ಆದ್ದರಿಂದ ಇನ್ನು ಒಂದು ವಾರ ಲಾಕ್ ಡೌನ್ ಇರುವುದ ರಿಂದ ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸ ಬೇಕು. ಪ್ರತಿಯೊಬ್ಬರೂ ಸಾಮಾಜಿಕ ಅಂತರ ಕಡ್ಡಾಯ ವಾಗಿ ಕಾಯ್ದುಕೊಳ್ಳಬೇಕು ಎಂದು ಹೇಳಿದರು
ಸ್ಥಳದಲ್ಲಿ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಜು, ಜಿಲ್ಲಾ ಹಾಪ್ ವ್ಯವಸ್ಥಾಪಕ ನಿರ್ದೇಶಕ ದರ್ಶನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
Lok Sabha Elections: ಎಚ್ಡಿಕೆ ಆಯ್ಕೆಯಾದರೆ ಕಾವೇರಿ ವಿವಾದಕ್ಕೆ ಪರಿಹಾರ: ಅಶೋಕ್
ಡಿಕೆಶಿಗೆ ಸಿದ್ದರಾಮಯ್ಯ ಏಕೆ ಸಿಎಂ ಸ್ಥಾನ ಬಿಟ್ಟುಕೊಡಲಿಲ್ಲ: ಪ್ರತಾಪಸಿಂಹ ಪ್ರಶ್ನೆ
Cheluvarayaswamy: ಚುಂಚಶ್ರೀ ದೂರವಾಣಿ ಕದ್ದಾಲಿಸಿದ್ದು ಯಾರು: ಚಲುವರಾಯಸ್ವಾಮಿ ಪ್ರಶ್ನೆ