ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ನಿಷೇಧ
ನಿಯಮ ಉಲ್ಲಂಘಿಸಿದರೆ ಶಿಕ್ಷೆ: ಡಾ. ವೆಂಕಟೇಶ್
Team Udayavani, Aug 18, 2020, 1:59 PM IST
ಮಂಡ್ಯ: ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೌರಿ-ಗಣೇಶ ಹಬ್ಬ ಹಾಗೂ ಮೊಹರಂ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೌರಿ-ಗಣೇಶ ಪ್ರತಿಷ್ಠಾಪನೆಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.21, 22ರಂದು ನಡೆಯಲಿರುವ ಗೌರಿ-ಗಣೇಶ ಹಬ್ಬಕ್ಕೆ ಪಿಒಪಿ ಹಾಗೂ ರಾಸಾಯನಿಕ ಬಣ್ಣದಿಂದ ಮಾಡಿದ ಗಣೇಶ ಮಾರಾಟ ಮತ್ತು ಪ್ರತಿಷ್ಠಾಪನೆಗೆ ನಿರ್ಬಂಧಿಸಲಾಗಿದೆ. ಜಿಲ್ಲೆಯ ಗಡಿಯಲ್ಲಿ ಪಿಒಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶಕ್ಕೆ ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅರಿಶಿಣ ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳನ್ನು ಬಳಸಬೇಕು ಎಂದು ಮನವಿ ಮಾಡಿದರು.
ಕೆರೆ, ಕಟ್ಟೆ, ಕಲ್ಯಾಣಿಗಳಲ್ಲಿ ವಿಸರ್ಜನೆಗೆ ನಿಷೇಧ: ಸಾರ್ವಜನಿಕ ಸ್ಥಳ, ಮೈದಾನ, ಗಲ್ಲಿ, ರಸ್ತೆಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆಗೆ ನಿರ್ಬಂಧಿಸಿದ್ದು, ದೇವಸ್ಥಾನ ಹಾಗೂ ತಮ್ಮ ಮನೆಗಳಲ್ಲೇ ಅರಿಶಿಣ ಗಣೇಶಮೂರ್ತಿ ಪ್ರತಿಷ್ಠಾಪಿಸಿ ಪೂಜಿಸಲು ಅವಕಾಶವಿದೆ. ಹಬ್ಬ ಆಚರಣೆ ಮಾಡುವ ವೇಳೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಗೌರಿ-ಗಣೇಶ ವಿಸರ್ಜನೆಗೆ ಕೆರೆ, ಕಟ್ಟೆ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜನೆ ಮಾಡದಂತೆ ನಿಷೇಧಿಸಿದೆ ಎಂದು ತಿಳಿಸಿದರು.
ಸರಳವಾಗಿ ಹಬ್ಬ ಆಚರಿಸಿ: ತಮ್ಮ ಮನೆಯ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು. ನಿಯಮ ಉಲ್ಲಂಘಿಸಿದರೆ ಜಲ ಮೂಲಗಳ ತಡೆ ಮತ್ತು ನಿಯಂತ್ರಣ ಕಾಯ್ದೆ 1974ರ ಕಾಲಂ 45ರ ಅನ್ವಯ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುವುದು. ಮೆರವಣಿಗೆ, ಡಿಜೆ ಸೌಂಡ್ಸ್ ಬಳಕೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಂಪೂರ್ಣ ನಿರ್ಬಂಧಿಸಲಾಗಿದೆ.ಆದ್ದರಿಂದ ಸಾರ್ವಜನಿಕರು ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಸರಳವಾಗಿ ಹಬ್ಬ ಆಚರಣೆ ಮಾಡಬೇಕು ಎಂದು ಹೇಳಿದರು.
ಯೋಜನಾ ನಿರ್ದೇಶಕ ಟಿ.ಎನ್. ನರಸಿಂಹಮೂರ್ತಿ, ವಾರ್ತಾಧಿಕಾರಿ ಟಿ.ಕೆ. ಹರೀಶ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
Mandya Lok Sabha Constituency; ಸ್ಟಾರ್ ಚಂದ್ರು ಪರ ಇಂದು ನಟ ದರ್ಶನ್ ಪ್ರಚಾರ
ಚುನಾವಣ ಬಾಂಡ್ ವಿಶ್ವದ ಅತಿದೊಡ್ಡ ಹಗರಣ: ರಾಹುಲ್
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ